Homeಕರ್ನಾಟಕಪಂಚಮಸಾಲಿ ಸಮುದಾಯವನ್ನು 'ಪ್ರವರ್ಗ-2ಎ'ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

- Advertisement -
- Advertisement -

ಪ್ರವರ್ಗ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಬೆಳಗಾವಿಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿದೆ. ಈ ಮಧ್ಯೆ, ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ‘ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ’ ಆಗ್ರಹಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಒಕ್ಕೂಟದ ಮುಖಂಡರು, “ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸಿದರೆ, ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮನವಿ ಪತ್ರಸಲ್ಲಿ ಏನಿದೆ..?

“ನಮ್ಮ ರಾಜ್ಯದಲ್ಲಿ 2002 ರಿಂದ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ ಮತ್ತು ಪ್ರವರ್ಗ-3ಬಿ ಎಂಬುದಾಗಿ ವಿಂಗಡಿಸಿ, ಉದ್ಯೋಗ ಮತ್ತು ಶಿಕ್ಷಣದಲ್ಲಿ ಪ್ರವರ್ಗ-1ಕ್ಕೆ ಶೇಕಡಾ 48 ರಷ್ಟು, ಪ್ರವರ್ಗ-2ಎಗೆ ಶೇಕಡಾ 15 ರಷ್ಟು, ಪ್ರವರ್ಗ-2ಬಿಗೆ ಶೇಕಡಾ 4 ರಷ್ಟು, ಪ್ರವರ್ಗ-3ಎಗೆ ಶೇಕಡಾ 4 ರಷ್ಟು ಹಾಗೂ ಪ್ರವರ್ಗ-3ಬಿಗೆ ಶೇಕಡಾ 5 ರಷ್ಟು ಒಟ್ಟು ಮೀಸಲಾತಿಯ ಶೇಕಡಾ 32 ರಷ್ಟು ಮೀಸಲಾತಿಯನ್ನು ಹಿಂದುಳಿದ ವರ್ಗಗಳಿಗೆ ನಿಗಧಿಪಡಿಸಲಾಗಿದೆ. 2002ರಿಂದ ಈವರೆವಿಗೂ ಅದೇ ರೀತಿ ಮೀಸಲಾತಿಯನ್ನು ಹಿಂದುಳಿದ ವರ್ಗಗಳು ರಾಜ್ಯದಲ್ಲಿ ಪಡೆಯುತ್ತಿವೆ. ರಾಜ್ಯದಲ್ಲಿನ ಪಂಚಮಸಾಲಿ ಲಿಂಗಾಯತರು ಉಲ್ಲೇಖ-2ರ ಸರ್ಕಾರದ ಆದೇಶದ ಅನ್ವಯ ಪ್ರವರ್ಗ-3ಬಿ ಮೀಸಲಾತಿಯನ್ನು ಪಡೆಯುತ್ತಿದ್ದು, ಇತ್ತಿಚೆಗೆ ಈ ಸಮುದಾಯವನ್ನು ಪ್ರವರ್ಗ-3 ಯಿಂದ ಪ್ರವರ್ಗ-2ಎಗೆ ಬದಲಾಯಿಸಿ ಶೇಕಡಾ 15 ರಷ್ಟರ ಮೀಸಲಾತಿಯಡಿಯಲ್ಲಿ ಪ್ರವರ್ಗ-2ಎ ನಲ್ಲಿ ಮೀಸಲಾತಿ ಕೊಡಲು ಒತ್ತಾಯಿಸಿ ಸರ್ಕಾರಕ್ಕೆ ಬೇಡಿಕೆಯನ್ನು ಸಲ್ಲಿಸಿದ್ದು, ಧರಣಿಗಳನ್ನು ಮಾಡಿತ್ತಿದ್ದು, ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ.

2022-23ರಲ್ಲಿ ಬಿಜೆಪಿ ಸರ್ಕಾರದಲ್ಲಿ ಪ್ರವರ್ಗ-2ಬಿರಲ್ಲಿ ಬರುವ ಮುಸ್ಲಿಂರ ಶೇಕಡಾ 41 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, ಹೊಸದಾಗಿ ಪ್ರವರ್ಗ-2ಸಿ ಮತ್ತು ಪ್ರವರ್ಗ-2ಡಿ ಎಂದು ಹೊಸದಾಗಿ ವರ್ಗಿಕರಿಸಿ ಪ್ರವರ್ಗ-2ಸಿಗೆ ಶೇಕಡಾ 2 ರಷ್ಟು ಮತ್ತು ಪ್ರವರ್ಗ-2ಡಿಗೆ ಶೇಕಡಾ 2 ರಷ್ಟು ಮೀಸಲಾತಿಯನ್ನು ನೀಡಲಾಗಿದೆ ಎಂದು ಆದೇಶವನ್ನು ಹೊರಡಿಸಲಾಗಿತ್ತು.

ಈ ಹಿಂದೆ ಪ್ರವರ್ಗ-3ಎನಲ್ಲಿ ಬರುವ ಇತಿಗಳನ್ನು ಪ್ರವರ್ಗ-2ಸಿಗೆ ಸೇರಿಸಿ ಮತ್ತು ಪ್ರವರ್ಗ-3ಬಿ ನಲ್ಲಿ ಬರುವ ಜಾತಿಗಳನ್ನು ಪ್ರವರ್ಗ-2ಡಿಗೆ ಸೇರಿಸಿ ಈ ಹಿಂದೆ ಪ್ರವರ್ಗ-3ರ ಮೀಸಲಾತಿ ಶೇಕಡಾ 4 ರಷ್ಟು ಮತ್ತು ಹೊಸ ಆದೇಶದ ಮೀಸಲಾತಿ ಶೇಕಡಾ 2 ರಷ್ಟು ಒಟ್ಟು ಸೇರಿ ಪ್ರವರ್ಗ-2ಸಿಗೆ ಒಟ್ಟು ಶೇಕಡಾ 6 ರಷ್ಟು ಮತ್ತು ಪ್ರವರ್ಗ-2ಡಿಗೆ ಶೇಕಡಾ 7 ರಷ್ಟು ಮೀಸಲಾತಿಯನ್ನು ನಿಗಧಿಪಡಿಸಿ ಆದೇಶವನ್ನು ಹೊರಡಿಸಲಾಗಿದೆ.

ಬಿಜೆಪಿ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದವರು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಅಂದಿನ ಬಿಜೆಪಿ ಸರ್ಕಾರದ ವಕೀಲರು ಸುಪ್ರೀಂ ಕೋರ್ಟಿನಲ್ಲಿ 2002ರ ಆದೇಶವನ್ನು ಪಾಲನೆ ಮಾಡುವುದಾಗಿ ಹೇಳಿಕೆಯನ್ನು ನೀಡಿದ್ದಾರೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಕೇಸ್ ಬಾಕಿ ಇರುವುದರಿಂದ ಬಿಜೆಪಿ ಸರ್ಕಾರದ ಆದೇಶವು ಜಾರಿಯಾಗಿಲ್ಲ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎಗೆ ಯಾವುದೇ ಸಮುದಾಯ/ ವರ್ಗಗಳನ್ನು ಸೇರ್ಪಡೆಗೊಳಿಸಬಾರದೆಂದು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಅರ್ಜಿದಾರರು ರಾಜ್ಯದ ಹಿಂದುಳಿದ ವರ್ಗದ ಮೀಸಲಾತಿ ಪಟ್ಟಿಯ ಪ್ರವರ್ಗ 2ಎಗೆ ಯಾವುದೇ ಜಾತಿಗಳನ್ನು ಸೇರಿಸಬಾರದೆಂದು ಆದೇಶಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ಪಂಚಮಸಾಲಿ ಅಂಗಾಯತ ಸಮುದಾಯವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದುವರೆದ ಸಮುದಾಯವಾಗಿದೆ. ಡಾ. ನಾಗನಗೌಡ ಸಮಿತಿ, ಎಲ್.ಜಿ. ಹಾವನೂರು ಆಯೋಗದ ವರದಿ, ವೆಂಕಟಸ್ವಾಮಿ ಹಿಂದುಳಿದ ವರ್ಗಗಳ 2ನೇ ಆಯೋಗದ ವರದಿ, ನ್ಯಾಯಮೂರ್ತಿ ಓ. ಚಿನ್ನಪ್ಪರೆಡ್ಡಿ ವರದಿಗಳ ಪ್ರಕಾರ ಪಂಚಮಸಾಲಿ ಸಮುದಾಯವು ಮುಂದುವರಿದ ಸಮಾಜವಾಗಿರುತ್ತದೆ. ಒಂದು ವೇಳೆ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ-2ಎ ವರ್ಗಕ್ಕೆ ಸೇರ್ಪಡೆ ಮಾಡಿದರೆ ಪ್ರವರ್ಗ-2ಎ ಅಡಿಯಲ್ಲಿರುವ ಹಿಂದುಳಿದ ಜಾತಿಗಳಾದ ಆಗಸ, ಸವಿತಾ ಸಮಾಜ, ತಿಗಳ, ಈಡಿಗ, ಕುರುಬ, ದೇವಾಂಗ ಇತರೆ ಎಲ್ಲಾ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಸಿಗುವುದಿಲ್ಲ.

“ಪಂಚಮಸಾಲಿ ಸಮುದಾಯವೇ ಎಲ್ಲ ಉದ್ಯೋಗ, ಶಿಕ್ಷಣ, ಹಾಗೂ ರಾಜಕೀಯ ಮೀಸಲಾತಿಯನ್ನು ಪಡೆದುಕೊಳ್ಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಪಂಚಮಸಾಲಿ ಅಂಗಾಯತ ಸಮುದಾಯವನ್ನು ಪ್ರವರ್ಗ-2ಎ ಮೀಸಲಾತಿಗೆ ಸೇರಿಸಬಾರದು” ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವು ಮನವಿ ಮಾಡಿದೆ.

“ಒಂದು ವೇಳೆ ಪಂಚಮಸಾಲಿ ಅಂಗಾಯತ ಸಮುದಾಯವು ಪ್ರವರ್ಗ-2ಎ ಮೀಸಲಾತಿಗೆ ಸೇರಿದ್ದೇ ಆದಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ಹಾಗೂ ಹೋರಾಟಗಳನ್ನು ನಡೆಸುತ್ತದೆ ಎಂಬ ಮಾಹಿತಿಯನ್ನು ತಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇವೆ” ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ; ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು : ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...