Homeಮುಖಪುಟಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಿನ ವಾಕ್ಸಮರ ಮುಂದುವರೆದಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ.

ನಿನ್ನೆ ಉದ್ಧವ್ ಠಾಕ್ರೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಅದಕ್ಕೆ ಸರಣಿ ಟ್ವೀಟ್‌ಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕಂಗನಾ ರಾಣಾವತ್ “ಸಂಜಯ್ ರಾಣಾವತ್ ನನ್ನನ್ನು ಹರಮ್‌ಖೋರ್ ಎಂದು ಕರೆದರು. ಈಗ ಉದ್ಧವ್ ಠಾಕ್ರೆ ನಮಕ್ ಹರಾಮ್ (ವಿಶ್ವಾಸಘಾತುಕರು) ಎಂದು ಕರೆಯುತ್ತಿದ್ದಾರೆ. ಅವರು ಮುಂಬೈ ನನಗೆ ಆಶ್ರಯ ನೀಡದಿದ್ದರೆ ನನ್ನ ರಾಜ್ಯದಲ್ಲಿ ನನಗೆ ಆಹಾರ ಸಿಗುವುದಿಲ್ಲ ಎನ್ನುತ್ತಿದ್ದಾರೆ. ತನ್ನ ಮಗನ ವಯಸ್ಸಿನವಳಾದ ಒಬ್ಬಂಟಿ ಮಹಿಳೆಯ ಕುರಿತು ಹೀಗೆ ಮಾತನಾಡುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಮುಖ್ಯಮಂತ್ರಿಗಳೇ ನೆಪೋಟಿಸಂನ (ಸ್ವಜನಪಕ್ಷಪಾತ) ಕೆಟ್ಟ ಉತ್ಪನ್ನ ನೀವು” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿಗಳೇ, “ನಾನು ನಿಮ್ಮಂತೆ ನನ್ನ ತಂದೆಯ ಸಂಪತ್ತಿನಿಂದ ಬದುಕುತ್ತಿಲ್ಲ. ನಾನು ಸ್ವಜನಪಕ್ಷಪಾತದ ಉತ್ಪನ್ನವಾಗಬೇಕೆಂದು ಬಯಸಿದರೆ ನಾನು ಹಿಮಾಚಲದಲ್ಲಿಯೇ ಉಳಿಯಬಹುದಿತ್ತು. ನಾನು ಹೆಸರಾಂತ ಕುಟುಂಬದಿಂದ ಬಂದವಳು, ಅವರ ಸಂಪತ್ತಿನ ಮೇಲೆ ಬದುಕಲು ನಾನು ಬಯಸುವುದಿಲ್ಲ. ಕೆಲವು ಜನರು ಸ್ವಾಭಿಮಾನ ಮತ್ತು ಸ್ವಯಂ ಮೌಲ್ಯವನ್ನು ಹೊಂದಿದ್ದಾರೆ” ಎಂದು ಕಂಗನಾ ಕಿಡಿಕಾರಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವನ್ನು ಕಂಗನಾ ಸೇರಿದಂತೆ ಹಲವರು ಕೊಲೆ ಎಂದು ಆರೋಪಿಸಿದ್ದರು. ಆದರೆ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಅಂದಿನಿಂದ ಬಿಜೆಪಿ ಮತ್ತು ಕಂಗನಾ ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದ್ದರು. ಈಗ ಏಮ್ಸ್ ವೈದ್ಯರು ಸುಶಾಂತ್ ಸಾವು ಆತ್ಮಹತ್ಯೆ ಎಂದಿದ್ದಾರೆ. ಆದರು ಕಂಗನಾ ಟೀಕೆ ಮುಂದುವರೆಸಿದ್ದಾರೆ.

ಕಂಗನಾ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರವೆಂದು ಕರೆದಿದ್ದಾಗ ಶಿವಸೇನೆ ಕೆಂಡಾಮಂಡಲವಾಗಿತ್ತು. ಅಕ್ರಮ ಕಟ್ಟಡದ ನೆಪದಲ್ಲಿ ಕಂಗನಾ ಕಚೇರಿಯನ್ನು ಬಿಎಂಸಿ ನೆಲಸಮಗೊಳಿಸಲು ಮುಂದಾಗಿತ್ತು.

ಅಮಿತ್ ಷಾ ಅವರ ಮಗ ಬಿಸಿಸಿಐ ಸೆಕ್ರೆಟರಿ, ಅರುಣ್ ಜೇಟ್ಲಿಯ ಮಗ ಡಿಡಿಸಿಎ ಅಧ್ಯಕ್ಷ, ಅರ್ನಾಬ್ ಗೋಸ್ವಾಮಿಯ ಪತ್ನಿ ರಿಪಬ್ಲಿಕ್ ಟಿವಿಯಲ್ಲಿ ಕಾರ್ಯಕ್ರಮಗಳ ಮುಖ್ಯಸ್ಥರಾಗಿದ್ದಾರೆ. ಕಂಗನಾ ರಣಾವತ್ ಅವರ ಸಹೋದರ ಮತ್ತು ಸಹೋದರಿ ತನ್ನ ಪ್ರೊಡಕ್ಷನ್ ಹೌಸ್‌ನಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ನೇಪಾಟಿಸಂ ವಾರಿಯರ್ ಭಕ್ತರು ಈ ಎಲ್ಲದರ ಬಗ್ಗೆ ಮೌನವಾಗಿರುತ್ತಾರೆ ಎಂದು ಖ್ಯಾತ ಯೂಟ್ಯೂಬರ್ ಧೃವ್ ರಾಠೀ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಗೋವಾದಲ್ಲಿ ಬೀಫ್ ಬ್ಯಾನ್ ಯಾಕಿಲ್ಲ, ಇದ ನಿಮ್ಮ ಹಿಂದುತ್ವ?: ಉದ್ಧವ್ ಠಾಕ್ರೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...