Homeಮುಖಪುಟಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಿನ ವಾಕ್ಸಮರ ಮುಂದುವರೆದಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ.

ನಿನ್ನೆ ಉದ್ಧವ್ ಠಾಕ್ರೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಅದಕ್ಕೆ ಸರಣಿ ಟ್ವೀಟ್‌ಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕಂಗನಾ ರಾಣಾವತ್ “ಸಂಜಯ್ ರಾಣಾವತ್ ನನ್ನನ್ನು ಹರಮ್‌ಖೋರ್ ಎಂದು ಕರೆದರು. ಈಗ ಉದ್ಧವ್ ಠಾಕ್ರೆ ನಮಕ್ ಹರಾಮ್ (ವಿಶ್ವಾಸಘಾತುಕರು) ಎಂದು ಕರೆಯುತ್ತಿದ್ದಾರೆ. ಅವರು ಮುಂಬೈ ನನಗೆ ಆಶ್ರಯ ನೀಡದಿದ್ದರೆ ನನ್ನ ರಾಜ್ಯದಲ್ಲಿ ನನಗೆ ಆಹಾರ ಸಿಗುವುದಿಲ್ಲ ಎನ್ನುತ್ತಿದ್ದಾರೆ. ತನ್ನ ಮಗನ ವಯಸ್ಸಿನವಳಾದ ಒಬ್ಬಂಟಿ ಮಹಿಳೆಯ ಕುರಿತು ಹೀಗೆ ಮಾತನಾಡುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಮುಖ್ಯಮಂತ್ರಿಗಳೇ ನೆಪೋಟಿಸಂನ (ಸ್ವಜನಪಕ್ಷಪಾತ) ಕೆಟ್ಟ ಉತ್ಪನ್ನ ನೀವು” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿಗಳೇ, “ನಾನು ನಿಮ್ಮಂತೆ ನನ್ನ ತಂದೆಯ ಸಂಪತ್ತಿನಿಂದ ಬದುಕುತ್ತಿಲ್ಲ. ನಾನು ಸ್ವಜನಪಕ್ಷಪಾತದ ಉತ್ಪನ್ನವಾಗಬೇಕೆಂದು ಬಯಸಿದರೆ ನಾನು ಹಿಮಾಚಲದಲ್ಲಿಯೇ ಉಳಿಯಬಹುದಿತ್ತು. ನಾನು ಹೆಸರಾಂತ ಕುಟುಂಬದಿಂದ ಬಂದವಳು, ಅವರ ಸಂಪತ್ತಿನ ಮೇಲೆ ಬದುಕಲು ನಾನು ಬಯಸುವುದಿಲ್ಲ. ಕೆಲವು ಜನರು ಸ್ವಾಭಿಮಾನ ಮತ್ತು ಸ್ವಯಂ ಮೌಲ್ಯವನ್ನು ಹೊಂದಿದ್ದಾರೆ” ಎಂದು ಕಂಗನಾ ಕಿಡಿಕಾರಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವನ್ನು ಕಂಗನಾ ಸೇರಿದಂತೆ ಹಲವರು ಕೊಲೆ ಎಂದು ಆರೋಪಿಸಿದ್ದರು. ಆದರೆ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಅಂದಿನಿಂದ ಬಿಜೆಪಿ ಮತ್ತು ಕಂಗನಾ ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದ್ದರು. ಈಗ ಏಮ್ಸ್ ವೈದ್ಯರು ಸುಶಾಂತ್ ಸಾವು ಆತ್ಮಹತ್ಯೆ ಎಂದಿದ್ದಾರೆ. ಆದರು ಕಂಗನಾ ಟೀಕೆ ಮುಂದುವರೆಸಿದ್ದಾರೆ.

ಕಂಗನಾ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರವೆಂದು ಕರೆದಿದ್ದಾಗ ಶಿವಸೇನೆ ಕೆಂಡಾಮಂಡಲವಾಗಿತ್ತು. ಅಕ್ರಮ ಕಟ್ಟಡದ ನೆಪದಲ್ಲಿ ಕಂಗನಾ ಕಚೇರಿಯನ್ನು ಬಿಎಂಸಿ ನೆಲಸಮಗೊಳಿಸಲು ಮುಂದಾಗಿತ್ತು.

ಅಮಿತ್ ಷಾ ಅವರ ಮಗ ಬಿಸಿಸಿಐ ಸೆಕ್ರೆಟರಿ, ಅರುಣ್ ಜೇಟ್ಲಿಯ ಮಗ ಡಿಡಿಸಿಎ ಅಧ್ಯಕ್ಷ, ಅರ್ನಾಬ್ ಗೋಸ್ವಾಮಿಯ ಪತ್ನಿ ರಿಪಬ್ಲಿಕ್ ಟಿವಿಯಲ್ಲಿ ಕಾರ್ಯಕ್ರಮಗಳ ಮುಖ್ಯಸ್ಥರಾಗಿದ್ದಾರೆ. ಕಂಗನಾ ರಣಾವತ್ ಅವರ ಸಹೋದರ ಮತ್ತು ಸಹೋದರಿ ತನ್ನ ಪ್ರೊಡಕ್ಷನ್ ಹೌಸ್‌ನಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ನೇಪಾಟಿಸಂ ವಾರಿಯರ್ ಭಕ್ತರು ಈ ಎಲ್ಲದರ ಬಗ್ಗೆ ಮೌನವಾಗಿರುತ್ತಾರೆ ಎಂದು ಖ್ಯಾತ ಯೂಟ್ಯೂಬರ್ ಧೃವ್ ರಾಠೀ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಗೋವಾದಲ್ಲಿ ಬೀಫ್ ಬ್ಯಾನ್ ಯಾಕಿಲ್ಲ, ಇದ ನಿಮ್ಮ ಹಿಂದುತ್ವ?: ಉದ್ಧವ್ ಠಾಕ್ರೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...