Homeಕರ್ನಾಟಕಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

ಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

- Advertisement -
- Advertisement -

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ಮುಂದಾಗಿದ್ದು, 1ರಿಂದ 10ನೇ ತರಗತಿಯ ಮಕ್ಕಳ ಬ್ಯಾಗ್ ತೂಕದ ಹೊರೆಯನ್ನು 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ ಮಾಡಿ ಸುತ್ತೋಲೆ ಹೊರಡಿಸಿದೆ.

1993ರಲ್ಲಿ ನೇಮಿಸಿದ್ದ ಯಶಪಾಲ ವರ್ಮ ಸಮಿತಿಯ ‘ಹೊರೆ ಇಲ್ಲದ ಕಲಿಕೆ’ ವರದಿ, ಕೇಂದ್ರ ಸರ್ಕಾರದ ‘ಶಾಲಾ ಬ್ಯಾಗ್ ನೀತಿ-2020’ ಹಾಗೂ ಮೂಳೆ ತಜ್ಞರ ಶಿಫಾರಸಿನಂತೆ ಮಕ್ಕಳು ಅವರ ದೇಹದ ತೂಕದ ಶೇ 10ರಿಂದ 15ರಷ್ಟು ಭಾರ ಹೊರಬಹುದು ಎಂಬ ಅಂಶಗಳ ಆಧಾರದಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.

ತರಗತಿಗನುಸಾರ ಬ್ಯಾಗ್ ತೂಕ

  • 1ರಿಂದ 2ನೇ ತರಗತಿಯ ಮಕ್ಕಳಿಗೆ-1.5ರಿಂದ 2 ಕೆ.ಜಿ,
  • 3ರಿಂದ 5ನೇ ತರಗತಿ ಮಕ್ಕಳಿಗೆ- 2ರಿಂದ 3 ಕೆ.ಜಿ,
  • 6ರಿಂದ 8 ತರಗತಿ 3ರಿಂದ 4 ಕೆ.ಜಿ,
  • 9ರಿಂದ 10ನೇ ತರಗತಿ ಮಕ್ಕಳಿಗೆ 4ರಿಂದ 5 ಕೆ.ಜಿ.ವರೆಗೆ ನಿಗದಿ ಮಾಡಲಾಗಿದೆ.

ನಿಯಮಗಳು: ಶಾಲಾ ಶಿಕ್ಷಕರು ಅಗತ್ಯಕ್ಕೆ ತಕ್ಕಂತೆ ಅಂದಿನ ಪಠ್ಯಪುಸ್ತಕ ಹಾಗೂ ಇತರೆ ಕಲಿಕಾ ಸಾಮಗ್ರಿಗಳನ್ನು ಮಾತ್ರ ತರುವಂತೆ ನೋಡಿಕೊಳ್ಳಬೇಕು. 200 ಪುಟ ಮೀರದ ನೊಟ್‌ಬುಕ್ ಬಳಸಲು ಸೂಚಿಸಬೇಕು. ಶಾಲೆಗಳಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಬ್ಯಾಗ್ ಹೊರೆಯಿಂದ ಆಗುವ ದುಷ್ಪರಿಣಾಮಗಳನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮ ಉಲ್ಲಂಘಿಸುವ ಶಿಕ್ಷಕರು, ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಮಕ್ಕಳ ಬ್ಯಾಗ್ ತೂಕ ಇಳಿಕೆಗೆ ನಿರ್ದೇಶನ ಕೋರಿ ಅರ್ಜಿ: ಅರೆಬೆಂದ ಅರ್ಜಿ ಎಂದು ಹೈಕೋರ್ಟ್‌ ಗರಂ

ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಕೋರಲಾಗಿತ್ತು. ಇದಕ್ಕೆ ಹೈಕೋರ್ಟ್, ಇದಕ್ಕೆ ಯಾವುದೇ ಪುರಾವೆಗಳಿಲ್ಲ, ಇದೊಂದು ಅರೆಬೆಂದ ಅರ್ಜಿ ಎಂದು ವಜಾಗೊಳಿಸಿದೆ.

ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ಆಲಿಸಿದ ನ್ಯಾಯಪೀಠ, ”ವಿಷಯವೇನೊ ಗಂಭೀರವಾಗಿದೆ. ಆದರೆ, ಅರ್ಜಿದಾರರು ಅಧಿಕಾರಿಗಳಿಗೆ ಇ- ಮೇಲ್ ಮೂಲಕ ಮನವಿ ಸಲ್ಲಿಸಿರುವುದನ್ನು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ಕೊಟ್ಟು ಸಮಸ್ಯೆ ಅರಿತಿದ್ದೇನೆ ಎಂಬ ಅವರ ವಾದಕ್ಕೆ ಪೂರಕವಾದ ಯಾವುದೇ ಪುರಾವೆಗಳು ಕಾಣಿಸುತ್ತಿಲ್ಲ. ಅಗತ್ಯ ಮಾಹಿತಿ ಕಲೆ ಹಾಕಿದ ನಂತರ ಕೋರ್ಟ್‌ ಗೆ ಬರಬಹುದಿತ್ತು” ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಮೊದಲು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ಬಳಿಕ ಅರ್ಜಿದಾರರ ಮನವಿಯಂತೆ ಹೊಸದಾಗಿ ಅರ್ಜಿ ಸಲ್ಲಿಸಲು ಅನುಮತಿ ನೀಡಿ ವಿಲೇವಾರಿ ಮಾಡಿತು.

”ಮಕ್ಕಳ ಬ್ಯಾಗ್ ತೂಕದ ಮಿತಿ ಇಷ್ಟೇ ಇರಬೇಕೆಂದು 2020ರಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ನಿಯಮ ಪಾಲನೆಯಾಗುತ್ತಿಲ್ಲ. ಆರೋಗ್ಯ ತಜ್ಞರ ಪ್ರಕಾರ ಭಾರಿ ತೂಕದ ಶಾಲಾ ಬ್ಯಾಗ್ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ, ಸಂವಿಧಾನದ 21ನೇ ವಿಧಿಯಡಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...