Homeಕರ್ನಾಟಕಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

ಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

- Advertisement -
- Advertisement -

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ಮುಂದಾಗಿದ್ದು, 1ರಿಂದ 10ನೇ ತರಗತಿಯ ಮಕ್ಕಳ ಬ್ಯಾಗ್ ತೂಕದ ಹೊರೆಯನ್ನು 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ ಮಾಡಿ ಸುತ್ತೋಲೆ ಹೊರಡಿಸಿದೆ.

1993ರಲ್ಲಿ ನೇಮಿಸಿದ್ದ ಯಶಪಾಲ ವರ್ಮ ಸಮಿತಿಯ ‘ಹೊರೆ ಇಲ್ಲದ ಕಲಿಕೆ’ ವರದಿ, ಕೇಂದ್ರ ಸರ್ಕಾರದ ‘ಶಾಲಾ ಬ್ಯಾಗ್ ನೀತಿ-2020’ ಹಾಗೂ ಮೂಳೆ ತಜ್ಞರ ಶಿಫಾರಸಿನಂತೆ ಮಕ್ಕಳು ಅವರ ದೇಹದ ತೂಕದ ಶೇ 10ರಿಂದ 15ರಷ್ಟು ಭಾರ ಹೊರಬಹುದು ಎಂಬ ಅಂಶಗಳ ಆಧಾರದಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.

ತರಗತಿಗನುಸಾರ ಬ್ಯಾಗ್ ತೂಕ

  • 1ರಿಂದ 2ನೇ ತರಗತಿಯ ಮಕ್ಕಳಿಗೆ-1.5ರಿಂದ 2 ಕೆ.ಜಿ,
  • 3ರಿಂದ 5ನೇ ತರಗತಿ ಮಕ್ಕಳಿಗೆ- 2ರಿಂದ 3 ಕೆ.ಜಿ,
  • 6ರಿಂದ 8 ತರಗತಿ 3ರಿಂದ 4 ಕೆ.ಜಿ,
  • 9ರಿಂದ 10ನೇ ತರಗತಿ ಮಕ್ಕಳಿಗೆ 4ರಿಂದ 5 ಕೆ.ಜಿ.ವರೆಗೆ ನಿಗದಿ ಮಾಡಲಾಗಿದೆ.

ನಿಯಮಗಳು: ಶಾಲಾ ಶಿಕ್ಷಕರು ಅಗತ್ಯಕ್ಕೆ ತಕ್ಕಂತೆ ಅಂದಿನ ಪಠ್ಯಪುಸ್ತಕ ಹಾಗೂ ಇತರೆ ಕಲಿಕಾ ಸಾಮಗ್ರಿಗಳನ್ನು ಮಾತ್ರ ತರುವಂತೆ ನೋಡಿಕೊಳ್ಳಬೇಕು. 200 ಪುಟ ಮೀರದ ನೊಟ್‌ಬುಕ್ ಬಳಸಲು ಸೂಚಿಸಬೇಕು. ಶಾಲೆಗಳಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಬ್ಯಾಗ್ ಹೊರೆಯಿಂದ ಆಗುವ ದುಷ್ಪರಿಣಾಮಗಳನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮ ಉಲ್ಲಂಘಿಸುವ ಶಿಕ್ಷಕರು, ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಮಕ್ಕಳ ಬ್ಯಾಗ್ ತೂಕ ಇಳಿಕೆಗೆ ನಿರ್ದೇಶನ ಕೋರಿ ಅರ್ಜಿ: ಅರೆಬೆಂದ ಅರ್ಜಿ ಎಂದು ಹೈಕೋರ್ಟ್‌ ಗರಂ

ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಕೋರಲಾಗಿತ್ತು. ಇದಕ್ಕೆ ಹೈಕೋರ್ಟ್, ಇದಕ್ಕೆ ಯಾವುದೇ ಪುರಾವೆಗಳಿಲ್ಲ, ಇದೊಂದು ಅರೆಬೆಂದ ಅರ್ಜಿ ಎಂದು ವಜಾಗೊಳಿಸಿದೆ.

ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ಆಲಿಸಿದ ನ್ಯಾಯಪೀಠ, ”ವಿಷಯವೇನೊ ಗಂಭೀರವಾಗಿದೆ. ಆದರೆ, ಅರ್ಜಿದಾರರು ಅಧಿಕಾರಿಗಳಿಗೆ ಇ- ಮೇಲ್ ಮೂಲಕ ಮನವಿ ಸಲ್ಲಿಸಿರುವುದನ್ನು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ಕೊಟ್ಟು ಸಮಸ್ಯೆ ಅರಿತಿದ್ದೇನೆ ಎಂಬ ಅವರ ವಾದಕ್ಕೆ ಪೂರಕವಾದ ಯಾವುದೇ ಪುರಾವೆಗಳು ಕಾಣಿಸುತ್ತಿಲ್ಲ. ಅಗತ್ಯ ಮಾಹಿತಿ ಕಲೆ ಹಾಕಿದ ನಂತರ ಕೋರ್ಟ್‌ ಗೆ ಬರಬಹುದಿತ್ತು” ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಮೊದಲು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ಬಳಿಕ ಅರ್ಜಿದಾರರ ಮನವಿಯಂತೆ ಹೊಸದಾಗಿ ಅರ್ಜಿ ಸಲ್ಲಿಸಲು ಅನುಮತಿ ನೀಡಿ ವಿಲೇವಾರಿ ಮಾಡಿತು.

”ಮಕ್ಕಳ ಬ್ಯಾಗ್ ತೂಕದ ಮಿತಿ ಇಷ್ಟೇ ಇರಬೇಕೆಂದು 2020ರಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ನಿಯಮ ಪಾಲನೆಯಾಗುತ್ತಿಲ್ಲ. ಆರೋಗ್ಯ ತಜ್ಞರ ಪ್ರಕಾರ ಭಾರಿ ತೂಕದ ಶಾಲಾ ಬ್ಯಾಗ್ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ, ಸಂವಿಧಾನದ 21ನೇ ವಿಧಿಯಡಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...