Homeಕರ್ನಾಟಕಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

ಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

- Advertisement -
- Advertisement -

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ಮುಂದಾಗಿದ್ದು, 1ರಿಂದ 10ನೇ ತರಗತಿಯ ಮಕ್ಕಳ ಬ್ಯಾಗ್ ತೂಕದ ಹೊರೆಯನ್ನು 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ ಮಾಡಿ ಸುತ್ತೋಲೆ ಹೊರಡಿಸಿದೆ.

1993ರಲ್ಲಿ ನೇಮಿಸಿದ್ದ ಯಶಪಾಲ ವರ್ಮ ಸಮಿತಿಯ ‘ಹೊರೆ ಇಲ್ಲದ ಕಲಿಕೆ’ ವರದಿ, ಕೇಂದ್ರ ಸರ್ಕಾರದ ‘ಶಾಲಾ ಬ್ಯಾಗ್ ನೀತಿ-2020’ ಹಾಗೂ ಮೂಳೆ ತಜ್ಞರ ಶಿಫಾರಸಿನಂತೆ ಮಕ್ಕಳು ಅವರ ದೇಹದ ತೂಕದ ಶೇ 10ರಿಂದ 15ರಷ್ಟು ಭಾರ ಹೊರಬಹುದು ಎಂಬ ಅಂಶಗಳ ಆಧಾರದಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.

ತರಗತಿಗನುಸಾರ ಬ್ಯಾಗ್ ತೂಕ

  • 1ರಿಂದ 2ನೇ ತರಗತಿಯ ಮಕ್ಕಳಿಗೆ-1.5ರಿಂದ 2 ಕೆ.ಜಿ,
  • 3ರಿಂದ 5ನೇ ತರಗತಿ ಮಕ್ಕಳಿಗೆ- 2ರಿಂದ 3 ಕೆ.ಜಿ,
  • 6ರಿಂದ 8 ತರಗತಿ 3ರಿಂದ 4 ಕೆ.ಜಿ,
  • 9ರಿಂದ 10ನೇ ತರಗತಿ ಮಕ್ಕಳಿಗೆ 4ರಿಂದ 5 ಕೆ.ಜಿ.ವರೆಗೆ ನಿಗದಿ ಮಾಡಲಾಗಿದೆ.

ನಿಯಮಗಳು: ಶಾಲಾ ಶಿಕ್ಷಕರು ಅಗತ್ಯಕ್ಕೆ ತಕ್ಕಂತೆ ಅಂದಿನ ಪಠ್ಯಪುಸ್ತಕ ಹಾಗೂ ಇತರೆ ಕಲಿಕಾ ಸಾಮಗ್ರಿಗಳನ್ನು ಮಾತ್ರ ತರುವಂತೆ ನೋಡಿಕೊಳ್ಳಬೇಕು. 200 ಪುಟ ಮೀರದ ನೊಟ್‌ಬುಕ್ ಬಳಸಲು ಸೂಚಿಸಬೇಕು. ಶಾಲೆಗಳಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಬ್ಯಾಗ್ ಹೊರೆಯಿಂದ ಆಗುವ ದುಷ್ಪರಿಣಾಮಗಳನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮ ಉಲ್ಲಂಘಿಸುವ ಶಿಕ್ಷಕರು, ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಮಕ್ಕಳ ಬ್ಯಾಗ್ ತೂಕ ಇಳಿಕೆಗೆ ನಿರ್ದೇಶನ ಕೋರಿ ಅರ್ಜಿ: ಅರೆಬೆಂದ ಅರ್ಜಿ ಎಂದು ಹೈಕೋರ್ಟ್‌ ಗರಂ

ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಕೋರಲಾಗಿತ್ತು. ಇದಕ್ಕೆ ಹೈಕೋರ್ಟ್, ಇದಕ್ಕೆ ಯಾವುದೇ ಪುರಾವೆಗಳಿಲ್ಲ, ಇದೊಂದು ಅರೆಬೆಂದ ಅರ್ಜಿ ಎಂದು ವಜಾಗೊಳಿಸಿದೆ.

ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ಆಲಿಸಿದ ನ್ಯಾಯಪೀಠ, ”ವಿಷಯವೇನೊ ಗಂಭೀರವಾಗಿದೆ. ಆದರೆ, ಅರ್ಜಿದಾರರು ಅಧಿಕಾರಿಗಳಿಗೆ ಇ- ಮೇಲ್ ಮೂಲಕ ಮನವಿ ಸಲ್ಲಿಸಿರುವುದನ್ನು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ಕೊಟ್ಟು ಸಮಸ್ಯೆ ಅರಿತಿದ್ದೇನೆ ಎಂಬ ಅವರ ವಾದಕ್ಕೆ ಪೂರಕವಾದ ಯಾವುದೇ ಪುರಾವೆಗಳು ಕಾಣಿಸುತ್ತಿಲ್ಲ. ಅಗತ್ಯ ಮಾಹಿತಿ ಕಲೆ ಹಾಕಿದ ನಂತರ ಕೋರ್ಟ್‌ ಗೆ ಬರಬಹುದಿತ್ತು” ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಮೊದಲು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ಬಳಿಕ ಅರ್ಜಿದಾರರ ಮನವಿಯಂತೆ ಹೊಸದಾಗಿ ಅರ್ಜಿ ಸಲ್ಲಿಸಲು ಅನುಮತಿ ನೀಡಿ ವಿಲೇವಾರಿ ಮಾಡಿತು.

”ಮಕ್ಕಳ ಬ್ಯಾಗ್ ತೂಕದ ಮಿತಿ ಇಷ್ಟೇ ಇರಬೇಕೆಂದು 2020ರಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ನಿಯಮ ಪಾಲನೆಯಾಗುತ್ತಿಲ್ಲ. ಆರೋಗ್ಯ ತಜ್ಞರ ಪ್ರಕಾರ ಭಾರಿ ತೂಕದ ಶಾಲಾ ಬ್ಯಾಗ್ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ, ಸಂವಿಧಾನದ 21ನೇ ವಿಧಿಯಡಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...