Homeಕರ್ನಾಟಕಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

- Advertisement -
- Advertisement -

ದೇವಾಲಯ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಪರಿಶಿಷ್ಟ ಸಮುದಾಯದ (ಎಸ್‌ಸಿ) ಯುವಕನ್ನು ಪ್ರಬಲ ಜಾತಿ ಗುಂಪು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನಲ್ಲಿ ಸಂಭವಿಸಿದೆ.

ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದೂ ಅಲ್ಲದೆ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದು; ತಾಲೂಕಿನ ಉಗಲವಾಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಗ್ರಾಮದ 21 ಜನರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮರನಾಥ ರೆಡ್ಡಿ ಶನಿವಾರ ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಅರ್ಜುನ್ ಮಾದರ ಎಂಬ 28 ವರ್ಷದ ಯುವಕ ಥಳಿತಕ್ಕೊಳಗಾಗಿದ್ದು, ಈ ಸಂಬಂಧ ಮುದ್ದಿನಗೌಡ ದ್ಯಾಮನಗೌಡ ಸತ್ಯನ್ನವರ, ಮಂಜುನಾಥ ಲೆಂಕೇಶ ಮೂಲಿಮನಿ, ತುಳಸಿಗೇರಪ್ಪ ಕಾಮಪ್ಪ ತಳವಾರ ಸೇರಿದಂತೆ 21 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.10ರಂದು ಅರ್ಜುನ್, ತನ್ನದೇ ಗ್ರಾಮದ ದ್ಯಾಮವ್ವ ಗುಡಿಯ ಒಳಗೆ ಹೋಗಿ ದೇವರಿಗೆ ನಮಸ್ಕಾರ ಮಾಡಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲ ಪ್ರಬಲ ಜಾತಿ ಗುಂಪು, “ನೀನು ದಲಿತ ಸಮುದಾಯದವನು.. ಗುಡಿಯ ಒಳಗೆ ಹೋಗಿ ನಮಸ್ಕಾರ ಮಾಡಿದ್ದು ಯಾಕೆ”  ಎಂದು ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ. ಸಾಲದ್ದಕ್ಕೆ, ಆತನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

“20ಕ್ಕೂ ಅಧಿಕ ಜನರು ಸೇರಿ ಆತನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ 21 ಆರೋಪಿಗಳ ವಿರುದ್ದ ಪ್ರಕರಣ ಕೇಸ್ ದಾಖಲಿಸಿದ್ದಾರೆ. ಘಟನೆ ನಂತರ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿದ ಜಿಲ್ಲೆಯ ಹಲವು ದಲಿತ ಮುಖಂಡರು ಉಗಲವಾಟ ಗ್ರಾಮಕ್ಕೆ ಆಗಮಿಸಿ, ಅಲ್ಲಿನ ದಲಿತ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಘಟನೆ ಖಂಡಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಿಲ್ಲದ ದಲಿತರ ಮೇಲಿನ ದೌರ್ಜನ್ಯ:

ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ತಿಂಗಳು, ದಲಿತ ಯುವಕನೊಬ್ಬ ತನಗೆ ಕ್ಷೌರ ಮಾಡಲು ಒತ್ತಾಯಿಸಿದ ನಂತರ, ಮಾತಿಗೆ ಮಾತು ಬೆಳೆದು ಕ್ಷೌರಿಕ ಕೊಲೆ ಮಾಡಿರುವ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿತ್ತು. ಯಮನೂರಪ್ಪ ಬಂಡಿಹಾಳ (23) ಕೊಲೆಯಾದ ಮೃತ ದಲಿತ ಯುವಕನಾಗಿದ್ದಾನೆ.

ಯಮನೂರಪ್ಪ ಕ್ಷೌರ ಮಾಡಿಸಿಕೊಳ್ಳಲು ಸೆಲೂನ್‌ಗೆ ಹೋಗಿದ್ದ ಈ ವೇಳೆ ಸೆಲೂನ್ ಮಾಲೀಕ ಮುದುಕಪ್ಪ ಅಂದಪ್ಪ ಹಡಪದ ಅವರು, ‘ನೀನು ದಲಿತ. ಹಾಗಾಗಿ, ನಾವು ಕ್ಷೌರ ಮಾಡುವುದಿಲ್ಲ’ ಎಂದು ಹೇಳಿದ್ದಾನೆ. ಇದನ್ನ ಯುವಕ ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಮುದುಕಪ್ಪ ಹಡಪದ ಕೈಯ್ಯಲ್ಲಿದ್ದ ಕತ್ತರಿಯಿಂದ ಯಮನೂರಪ್ಪ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ, ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನ ಮೇಲೆ ದೂರು ನೀಡಿದ ಕಾರಣಕ್ಕಾಗಿ, ಇಡೀ ಗ್ರಾಮದ ಪರಿಶಿಷ್ಟ ಸಮುದಾಯದ ಜನರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮೂರ್ನಾಲ್ಕು ದಿನಗಳ ಹಿಂದಷ್ಟೇ ಬೆಳಕಿಗೆ ಬಂದಿತ್ತು.

“14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ. ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಇದೀಗ ದೇವಸ್ಥಾನ ಪ್ರವೇಶಿಸಿದ ಎಂಬ ಕಾರಣಕ್ಕೆ ದಲಿತ ಯುವಕನಿಗೆ ಸವರ್ಣೀಯರು ಥಳಿಸಿದ್ದು, ತಿಂಗಳಲ್ಲಿ ಬೆಳಕಿಗೆ ಬಂದ ಮೂರನೇ ದಲಿತ ದೌರ್ಜನ್ಯ ಪ್ರಕರಣ ಇದಾಗಿದೆ.

ಇದನ್ನೂ ಓದಿ; ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...