Homeಕರ್ನಾಟಕಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

- Advertisement -
- Advertisement -

ದೇವಾಲಯ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಪರಿಶಿಷ್ಟ ಸಮುದಾಯದ (ಎಸ್‌ಸಿ) ಯುವಕನ್ನು ಪ್ರಬಲ ಜಾತಿ ಗುಂಪು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನಲ್ಲಿ ಸಂಭವಿಸಿದೆ.

ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದೂ ಅಲ್ಲದೆ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದು; ತಾಲೂಕಿನ ಉಗಲವಾಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಗ್ರಾಮದ 21 ಜನರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮರನಾಥ ರೆಡ್ಡಿ ಶನಿವಾರ ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಅರ್ಜುನ್ ಮಾದರ ಎಂಬ 28 ವರ್ಷದ ಯುವಕ ಥಳಿತಕ್ಕೊಳಗಾಗಿದ್ದು, ಈ ಸಂಬಂಧ ಮುದ್ದಿನಗೌಡ ದ್ಯಾಮನಗೌಡ ಸತ್ಯನ್ನವರ, ಮಂಜುನಾಥ ಲೆಂಕೇಶ ಮೂಲಿಮನಿ, ತುಳಸಿಗೇರಪ್ಪ ಕಾಮಪ್ಪ ತಳವಾರ ಸೇರಿದಂತೆ 21 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.10ರಂದು ಅರ್ಜುನ್, ತನ್ನದೇ ಗ್ರಾಮದ ದ್ಯಾಮವ್ವ ಗುಡಿಯ ಒಳಗೆ ಹೋಗಿ ದೇವರಿಗೆ ನಮಸ್ಕಾರ ಮಾಡಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲ ಪ್ರಬಲ ಜಾತಿ ಗುಂಪು, “ನೀನು ದಲಿತ ಸಮುದಾಯದವನು.. ಗುಡಿಯ ಒಳಗೆ ಹೋಗಿ ನಮಸ್ಕಾರ ಮಾಡಿದ್ದು ಯಾಕೆ”  ಎಂದು ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ. ಸಾಲದ್ದಕ್ಕೆ, ಆತನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

“20ಕ್ಕೂ ಅಧಿಕ ಜನರು ಸೇರಿ ಆತನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ 21 ಆರೋಪಿಗಳ ವಿರುದ್ದ ಪ್ರಕರಣ ಕೇಸ್ ದಾಖಲಿಸಿದ್ದಾರೆ. ಘಟನೆ ನಂತರ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿದ ಜಿಲ್ಲೆಯ ಹಲವು ದಲಿತ ಮುಖಂಡರು ಉಗಲವಾಟ ಗ್ರಾಮಕ್ಕೆ ಆಗಮಿಸಿ, ಅಲ್ಲಿನ ದಲಿತ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಘಟನೆ ಖಂಡಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಿಲ್ಲದ ದಲಿತರ ಮೇಲಿನ ದೌರ್ಜನ್ಯ:

ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ತಿಂಗಳು, ದಲಿತ ಯುವಕನೊಬ್ಬ ತನಗೆ ಕ್ಷೌರ ಮಾಡಲು ಒತ್ತಾಯಿಸಿದ ನಂತರ, ಮಾತಿಗೆ ಮಾತು ಬೆಳೆದು ಕ್ಷೌರಿಕ ಕೊಲೆ ಮಾಡಿರುವ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿತ್ತು. ಯಮನೂರಪ್ಪ ಬಂಡಿಹಾಳ (23) ಕೊಲೆಯಾದ ಮೃತ ದಲಿತ ಯುವಕನಾಗಿದ್ದಾನೆ.

ಯಮನೂರಪ್ಪ ಕ್ಷೌರ ಮಾಡಿಸಿಕೊಳ್ಳಲು ಸೆಲೂನ್‌ಗೆ ಹೋಗಿದ್ದ ಈ ವೇಳೆ ಸೆಲೂನ್ ಮಾಲೀಕ ಮುದುಕಪ್ಪ ಅಂದಪ್ಪ ಹಡಪದ ಅವರು, ‘ನೀನು ದಲಿತ. ಹಾಗಾಗಿ, ನಾವು ಕ್ಷೌರ ಮಾಡುವುದಿಲ್ಲ’ ಎಂದು ಹೇಳಿದ್ದಾನೆ. ಇದನ್ನ ಯುವಕ ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಮುದುಕಪ್ಪ ಹಡಪದ ಕೈಯ್ಯಲ್ಲಿದ್ದ ಕತ್ತರಿಯಿಂದ ಯಮನೂರಪ್ಪ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ, ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನ ಮೇಲೆ ದೂರು ನೀಡಿದ ಕಾರಣಕ್ಕಾಗಿ, ಇಡೀ ಗ್ರಾಮದ ಪರಿಶಿಷ್ಟ ಸಮುದಾಯದ ಜನರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮೂರ್ನಾಲ್ಕು ದಿನಗಳ ಹಿಂದಷ್ಟೇ ಬೆಳಕಿಗೆ ಬಂದಿತ್ತು.

“14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ. ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಇದೀಗ ದೇವಸ್ಥಾನ ಪ್ರವೇಶಿಸಿದ ಎಂಬ ಕಾರಣಕ್ಕೆ ದಲಿತ ಯುವಕನಿಗೆ ಸವರ್ಣೀಯರು ಥಳಿಸಿದ್ದು, ತಿಂಗಳಲ್ಲಿ ಬೆಳಕಿಗೆ ಬಂದ ಮೂರನೇ ದಲಿತ ದೌರ್ಜನ್ಯ ಪ್ರಕರಣ ಇದಾಗಿದೆ.

ಇದನ್ನೂ ಓದಿ; ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...