Homeಕರ್ನಾಟಕಬಾಗಲಕೋಟೆ: ವಿವಾದಿತ ಸಿನಿಮಾ 'ದಿ ಕೇರಳ ಸ್ಟೋರಿ' ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ; ಬಿಜೆಪಿ ಮಾಜಿ...

ಬಾಗಲಕೋಟೆ: ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ; ಬಿಜೆಪಿ ಮಾಜಿ ಶಾಸಕನಿಂದ ಫ್ರೀ ಶೋ

- Advertisement -
- Advertisement -

ದೇಶಾದ್ಯಂತ ಭಾರೀ ಸಂಚಲನ ಎಬ್ಬಿಸಿರುವ ಬಾಲಿವುಡ್​ನ ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಕಾಲೇಜು ಆಡಳಿತ ಮಂಡಲಿ ವಿದ್ಯಾರ್ಥಿಗಳಿಗೆ ಅರ್ಧ ದಿನದ ರಜೆ ನೀಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಬುಧವಾರ ಮಧ್ಯಾಹ್ನ ತನ್ನ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಿ, ವಿವಾದಾತ್ಮಕ ಚಲನಚಿತ್ರ ‘ದಿ ಕೇರಳ ಸ್ಟೋರಿ’ ವೀಕ್ಷಿಸಬೇಕು ಎಂದು ಸೂಚನೆ ನೀಡಿದೆ.

”ಎಲ್ಲಾ ಪದವಿ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (ಬಿಎಎಂಎಸ್) ವಿದ್ಯಾರ್ಥಿಗಳಿಗೆ ನಾಳೆ ಅಂದರೆ 24.05.2023 ರಂದು 12.00 ರಿಂದ ಕೇರಳ ಚಲನಚಿತ್ರವನ್ನು ನೋಡಲು ನೀವೆಲ್ಲರೂ “ಶ್ರೀನಿವಾಸ್ ಟಾಕೀಸ್” ಗೆ ಹೋಗಿ ಎಂದು ಇಲ್ಲಿ ತಿಳಿಸಲಾಗಿದೆ. ಮಧ್ಯಾಹ್ನ 3.00 ರವರೆಗೆ. ನೀವು 9.00 ರಿಂದ 11.00 ರವರೆಗೆ ಬೆಳಿಗ್ಗೆ ತರಗತಿಗೆ ಮಾತ್ರ ಹಾಜರಾಗಬೇಕು. ನೀವು ಚಲನಚಿತ್ರವನ್ನು ಉಚಿತವಾಗಿ ನೋಡಬಹುದು. ನಾಳೆ ಮಧ್ಯಾಹ್ನದ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ನೀವೆಲ್ಲರೂ ಸಿನಿಮಾ ನೋಡಲೇಬೇಕು” ಎಂದು ಪ್ರಾಂಶುಪಾಲರು ಕಾಲೇಜಿನಲ್ಲಿ ನೋಟಿಸ್ ಅಂಟಿಸಿದ್ದಾರೆ. ಸಿನಿಮಾಗಾಗಿ ತರಗತಿಗಳನ್ನು ಸ್ಥಗಿತಗೊಳಿಸಿದ್ದಾರೆ.

ಸಾರ್ವಜನಿರಿಂದ ಆಕ್ಷೇಪ

ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಿಬ್ಬಂದಿಯೊಂದಿಗೆ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಕಾಲೇಜು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.

”ಸಿನಿಮಾ ನೋಡಲು ಆದೇಶ ಹೊರಡಿಸಲು ನೀವು ಕಾಲೇಜು ನಡೆಸುತ್ತಿರೋ ಅಥವಾ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತೀರಾ? ಇದೇ ಸಿನಿಮಾ ನೋಡಲು ನೀವು ಆದೇಶ ಹೊರಡಿಸಿರುವ ಹಿಂದಿನ ಉದ್ದೇಶವಾದರೂ ಏನು? ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವ ಸಿನಿಮಾಗಳನ್ನು ತೋರಿಸುವು ಉದ್ದೇಶವಿದೆ. ಆದರೆ ಈ ವಿವಾದಿತ ಸಿನಿಮಾ ತೋರಿಸಲು ಹೊರಟ್ಟಿದ್ದಿರಿ, ಆ ಸಿನಿಮಾದಲ್ಲಿ ಅಂತಹ ಒಳ್ಳೆಯ ಸಂದೇಶ ನೀಡುವಂತಹದ್ದೇನಿದೆ? ನಿಮ್ಮ ಪ್ರಿನ್ಸಿಪಾಲರು ಆ ಸಿನಿಮಾ ನೋಡಿದ್ದಾರಾ? ಎಂದು ಸರಣಿ ಪ್ರಶ್ನೆ ಕೇಳಿದಾಗ ಸಿಬ್ಬಂದಿ ತಡಬಡಾಯಿಸಿ, ನಮ್ಮ ಆದೇಶವನ್ನು ರದ್ದು ಮಾಡಿದ್ದೇವೆ, ತರಗತಿಗಳನ್ನು ನಡೆಸುತ್ತೇವೆ” ಎಂದು ಸಿಬ್ಬಂದಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ವಿಮರ್ಶೆ: ಮತ್ತೊಂದು ಇಸ್ಲಮಾಫೋಬಿಕ್ ಸಿನಿಮಾ ’ದ ಕೇರಳ ಸ್ಟೋರಿ’

ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠನಿಂದ ಫ್ರೀ ಶೋ

ಬಾಗಲಕೋಟೆ ನಗರದ ಚಂದನ ಥಿಯೇಟರ್ ‌ನಲ್ಲಿ ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಂದ ‘ದಿ ಕೇರಳ ಸ್ಟೋರಿ’ ಸಿನಿಮಾ ಫ್ರೀ ಶೋ ಆಯೋಜನೆ ಮಾಡಲಾಗಿದೆ. ಮೇ 23ರಿಂದ ಮೇ 25ರ ವರೆಗೆ ಮೂರು ದಿನ ಫ್ರೀ ಶೋ ಆಯೋಜಿಸಲಾಗಿದೆ. ಪ್ರತಿದಿನ 3 ಗಂಟೆಯಿಂದ ಸಂಜೆ 6 ರ ಶೋವನ್ನು ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಎಲ್ಲ ಹಿಂದೂ ವಿದ್ಯಾರ್ಥಿಗಳು ಒಟ್ಟಾಗಿ ನೋಡಿ ಎಂದು ಮಾಜಿ ಶಾಸಕ, ಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5 ರಂದು ದೇಶಾದ್ಯಂತ ಬಿಡುಗಡೆಯಾಗಿತ್ತು. ಇದಕ್ಕೆ ಅನೇಕ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ನಿಂದ ಮಹಿಳೆಯರನ್ನು ಬಲವಂತವಾಗಿ ಮತಾಂತರಿಸಲಾಗುತ್ತದೆ ಎನ್ನುವ ಕಾಲ್ಪಣಿಕ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕಾಲ್ಪಣಿಕ ಚಿತ್ರದ ಬಗ್ಗೆ ಮಾತನಾಡಿದ್ದು ಖೇದಕರ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...