Homeಕರ್ನಾಟಕಬಾಗಲಕೋಟೆ: ವಿವಾದಿತ ಸಿನಿಮಾ 'ದಿ ಕೇರಳ ಸ್ಟೋರಿ' ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ; ಬಿಜೆಪಿ ಮಾಜಿ...

ಬಾಗಲಕೋಟೆ: ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ; ಬಿಜೆಪಿ ಮಾಜಿ ಶಾಸಕನಿಂದ ಫ್ರೀ ಶೋ

- Advertisement -
- Advertisement -

ದೇಶಾದ್ಯಂತ ಭಾರೀ ಸಂಚಲನ ಎಬ್ಬಿಸಿರುವ ಬಾಲಿವುಡ್​ನ ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಕಾಲೇಜು ಆಡಳಿತ ಮಂಡಲಿ ವಿದ್ಯಾರ್ಥಿಗಳಿಗೆ ಅರ್ಧ ದಿನದ ರಜೆ ನೀಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಬುಧವಾರ ಮಧ್ಯಾಹ್ನ ತನ್ನ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಿ, ವಿವಾದಾತ್ಮಕ ಚಲನಚಿತ್ರ ‘ದಿ ಕೇರಳ ಸ್ಟೋರಿ’ ವೀಕ್ಷಿಸಬೇಕು ಎಂದು ಸೂಚನೆ ನೀಡಿದೆ.

”ಎಲ್ಲಾ ಪದವಿ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (ಬಿಎಎಂಎಸ್) ವಿದ್ಯಾರ್ಥಿಗಳಿಗೆ ನಾಳೆ ಅಂದರೆ 24.05.2023 ರಂದು 12.00 ರಿಂದ ಕೇರಳ ಚಲನಚಿತ್ರವನ್ನು ನೋಡಲು ನೀವೆಲ್ಲರೂ “ಶ್ರೀನಿವಾಸ್ ಟಾಕೀಸ್” ಗೆ ಹೋಗಿ ಎಂದು ಇಲ್ಲಿ ತಿಳಿಸಲಾಗಿದೆ. ಮಧ್ಯಾಹ್ನ 3.00 ರವರೆಗೆ. ನೀವು 9.00 ರಿಂದ 11.00 ರವರೆಗೆ ಬೆಳಿಗ್ಗೆ ತರಗತಿಗೆ ಮಾತ್ರ ಹಾಜರಾಗಬೇಕು. ನೀವು ಚಲನಚಿತ್ರವನ್ನು ಉಚಿತವಾಗಿ ನೋಡಬಹುದು. ನಾಳೆ ಮಧ್ಯಾಹ್ನದ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ನೀವೆಲ್ಲರೂ ಸಿನಿಮಾ ನೋಡಲೇಬೇಕು” ಎಂದು ಪ್ರಾಂಶುಪಾಲರು ಕಾಲೇಜಿನಲ್ಲಿ ನೋಟಿಸ್ ಅಂಟಿಸಿದ್ದಾರೆ. ಸಿನಿಮಾಗಾಗಿ ತರಗತಿಗಳನ್ನು ಸ್ಥಗಿತಗೊಳಿಸಿದ್ದಾರೆ.

ಸಾರ್ವಜನಿರಿಂದ ಆಕ್ಷೇಪ

ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಿಬ್ಬಂದಿಯೊಂದಿಗೆ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಕಾಲೇಜು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.

”ಸಿನಿಮಾ ನೋಡಲು ಆದೇಶ ಹೊರಡಿಸಲು ನೀವು ಕಾಲೇಜು ನಡೆಸುತ್ತಿರೋ ಅಥವಾ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತೀರಾ? ಇದೇ ಸಿನಿಮಾ ನೋಡಲು ನೀವು ಆದೇಶ ಹೊರಡಿಸಿರುವ ಹಿಂದಿನ ಉದ್ದೇಶವಾದರೂ ಏನು? ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವ ಸಿನಿಮಾಗಳನ್ನು ತೋರಿಸುವು ಉದ್ದೇಶವಿದೆ. ಆದರೆ ಈ ವಿವಾದಿತ ಸಿನಿಮಾ ತೋರಿಸಲು ಹೊರಟ್ಟಿದ್ದಿರಿ, ಆ ಸಿನಿಮಾದಲ್ಲಿ ಅಂತಹ ಒಳ್ಳೆಯ ಸಂದೇಶ ನೀಡುವಂತಹದ್ದೇನಿದೆ? ನಿಮ್ಮ ಪ್ರಿನ್ಸಿಪಾಲರು ಆ ಸಿನಿಮಾ ನೋಡಿದ್ದಾರಾ? ಎಂದು ಸರಣಿ ಪ್ರಶ್ನೆ ಕೇಳಿದಾಗ ಸಿಬ್ಬಂದಿ ತಡಬಡಾಯಿಸಿ, ನಮ್ಮ ಆದೇಶವನ್ನು ರದ್ದು ಮಾಡಿದ್ದೇವೆ, ತರಗತಿಗಳನ್ನು ನಡೆಸುತ್ತೇವೆ” ಎಂದು ಸಿಬ್ಬಂದಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ವಿಮರ್ಶೆ: ಮತ್ತೊಂದು ಇಸ್ಲಮಾಫೋಬಿಕ್ ಸಿನಿಮಾ ’ದ ಕೇರಳ ಸ್ಟೋರಿ’

ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠನಿಂದ ಫ್ರೀ ಶೋ

ಬಾಗಲಕೋಟೆ ನಗರದ ಚಂದನ ಥಿಯೇಟರ್ ‌ನಲ್ಲಿ ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಂದ ‘ದಿ ಕೇರಳ ಸ್ಟೋರಿ’ ಸಿನಿಮಾ ಫ್ರೀ ಶೋ ಆಯೋಜನೆ ಮಾಡಲಾಗಿದೆ. ಮೇ 23ರಿಂದ ಮೇ 25ರ ವರೆಗೆ ಮೂರು ದಿನ ಫ್ರೀ ಶೋ ಆಯೋಜಿಸಲಾಗಿದೆ. ಪ್ರತಿದಿನ 3 ಗಂಟೆಯಿಂದ ಸಂಜೆ 6 ರ ಶೋವನ್ನು ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಎಲ್ಲ ಹಿಂದೂ ವಿದ್ಯಾರ್ಥಿಗಳು ಒಟ್ಟಾಗಿ ನೋಡಿ ಎಂದು ಮಾಜಿ ಶಾಸಕ, ಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5 ರಂದು ದೇಶಾದ್ಯಂತ ಬಿಡುಗಡೆಯಾಗಿತ್ತು. ಇದಕ್ಕೆ ಅನೇಕ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ನಿಂದ ಮಹಿಳೆಯರನ್ನು ಬಲವಂತವಾಗಿ ಮತಾಂತರಿಸಲಾಗುತ್ತದೆ ಎನ್ನುವ ಕಾಲ್ಪಣಿಕ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕಾಲ್ಪಣಿಕ ಚಿತ್ರದ ಬಗ್ಗೆ ಮಾತನಾಡಿದ್ದು ಖೇದಕರ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....