Homeಕರ್ನಾಟಕಬಾಗಲಕೋಟೆ: ವಿವಾದಿತ ಸಿನಿಮಾ 'ದಿ ಕೇರಳ ಸ್ಟೋರಿ' ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ; ಬಿಜೆಪಿ ಮಾಜಿ...

ಬಾಗಲಕೋಟೆ: ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ; ಬಿಜೆಪಿ ಮಾಜಿ ಶಾಸಕನಿಂದ ಫ್ರೀ ಶೋ

- Advertisement -
- Advertisement -

ದೇಶಾದ್ಯಂತ ಭಾರೀ ಸಂಚಲನ ಎಬ್ಬಿಸಿರುವ ಬಾಲಿವುಡ್​ನ ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಕಾಲೇಜು ಆಡಳಿತ ಮಂಡಲಿ ವಿದ್ಯಾರ್ಥಿಗಳಿಗೆ ಅರ್ಧ ದಿನದ ರಜೆ ನೀಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಬುಧವಾರ ಮಧ್ಯಾಹ್ನ ತನ್ನ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಿ, ವಿವಾದಾತ್ಮಕ ಚಲನಚಿತ್ರ ‘ದಿ ಕೇರಳ ಸ್ಟೋರಿ’ ವೀಕ್ಷಿಸಬೇಕು ಎಂದು ಸೂಚನೆ ನೀಡಿದೆ.

”ಎಲ್ಲಾ ಪದವಿ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (ಬಿಎಎಂಎಸ್) ವಿದ್ಯಾರ್ಥಿಗಳಿಗೆ ನಾಳೆ ಅಂದರೆ 24.05.2023 ರಂದು 12.00 ರಿಂದ ಕೇರಳ ಚಲನಚಿತ್ರವನ್ನು ನೋಡಲು ನೀವೆಲ್ಲರೂ “ಶ್ರೀನಿವಾಸ್ ಟಾಕೀಸ್” ಗೆ ಹೋಗಿ ಎಂದು ಇಲ್ಲಿ ತಿಳಿಸಲಾಗಿದೆ. ಮಧ್ಯಾಹ್ನ 3.00 ರವರೆಗೆ. ನೀವು 9.00 ರಿಂದ 11.00 ರವರೆಗೆ ಬೆಳಿಗ್ಗೆ ತರಗತಿಗೆ ಮಾತ್ರ ಹಾಜರಾಗಬೇಕು. ನೀವು ಚಲನಚಿತ್ರವನ್ನು ಉಚಿತವಾಗಿ ನೋಡಬಹುದು. ನಾಳೆ ಮಧ್ಯಾಹ್ನದ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ನೀವೆಲ್ಲರೂ ಸಿನಿಮಾ ನೋಡಲೇಬೇಕು” ಎಂದು ಪ್ರಾಂಶುಪಾಲರು ಕಾಲೇಜಿನಲ್ಲಿ ನೋಟಿಸ್ ಅಂಟಿಸಿದ್ದಾರೆ. ಸಿನಿಮಾಗಾಗಿ ತರಗತಿಗಳನ್ನು ಸ್ಥಗಿತಗೊಳಿಸಿದ್ದಾರೆ.

ಸಾರ್ವಜನಿರಿಂದ ಆಕ್ಷೇಪ

ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಿಬ್ಬಂದಿಯೊಂದಿಗೆ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಕಾಲೇಜು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.

”ಸಿನಿಮಾ ನೋಡಲು ಆದೇಶ ಹೊರಡಿಸಲು ನೀವು ಕಾಲೇಜು ನಡೆಸುತ್ತಿರೋ ಅಥವಾ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತೀರಾ? ಇದೇ ಸಿನಿಮಾ ನೋಡಲು ನೀವು ಆದೇಶ ಹೊರಡಿಸಿರುವ ಹಿಂದಿನ ಉದ್ದೇಶವಾದರೂ ಏನು? ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವ ಸಿನಿಮಾಗಳನ್ನು ತೋರಿಸುವು ಉದ್ದೇಶವಿದೆ. ಆದರೆ ಈ ವಿವಾದಿತ ಸಿನಿಮಾ ತೋರಿಸಲು ಹೊರಟ್ಟಿದ್ದಿರಿ, ಆ ಸಿನಿಮಾದಲ್ಲಿ ಅಂತಹ ಒಳ್ಳೆಯ ಸಂದೇಶ ನೀಡುವಂತಹದ್ದೇನಿದೆ? ನಿಮ್ಮ ಪ್ರಿನ್ಸಿಪಾಲರು ಆ ಸಿನಿಮಾ ನೋಡಿದ್ದಾರಾ? ಎಂದು ಸರಣಿ ಪ್ರಶ್ನೆ ಕೇಳಿದಾಗ ಸಿಬ್ಬಂದಿ ತಡಬಡಾಯಿಸಿ, ನಮ್ಮ ಆದೇಶವನ್ನು ರದ್ದು ಮಾಡಿದ್ದೇವೆ, ತರಗತಿಗಳನ್ನು ನಡೆಸುತ್ತೇವೆ” ಎಂದು ಸಿಬ್ಬಂದಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ವಿಮರ್ಶೆ: ಮತ್ತೊಂದು ಇಸ್ಲಮಾಫೋಬಿಕ್ ಸಿನಿಮಾ ’ದ ಕೇರಳ ಸ್ಟೋರಿ’

ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠನಿಂದ ಫ್ರೀ ಶೋ

ಬಾಗಲಕೋಟೆ ನಗರದ ಚಂದನ ಥಿಯೇಟರ್ ‌ನಲ್ಲಿ ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಂದ ‘ದಿ ಕೇರಳ ಸ್ಟೋರಿ’ ಸಿನಿಮಾ ಫ್ರೀ ಶೋ ಆಯೋಜನೆ ಮಾಡಲಾಗಿದೆ. ಮೇ 23ರಿಂದ ಮೇ 25ರ ವರೆಗೆ ಮೂರು ದಿನ ಫ್ರೀ ಶೋ ಆಯೋಜಿಸಲಾಗಿದೆ. ಪ್ರತಿದಿನ 3 ಗಂಟೆಯಿಂದ ಸಂಜೆ 6 ರ ಶೋವನ್ನು ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಎಲ್ಲ ಹಿಂದೂ ವಿದ್ಯಾರ್ಥಿಗಳು ಒಟ್ಟಾಗಿ ನೋಡಿ ಎಂದು ಮಾಜಿ ಶಾಸಕ, ಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5 ರಂದು ದೇಶಾದ್ಯಂತ ಬಿಡುಗಡೆಯಾಗಿತ್ತು. ಇದಕ್ಕೆ ಅನೇಕ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ನಿಂದ ಮಹಿಳೆಯರನ್ನು ಬಲವಂತವಾಗಿ ಮತಾಂತರಿಸಲಾಗುತ್ತದೆ ಎನ್ನುವ ಕಾಲ್ಪಣಿಕ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕಾಲ್ಪಣಿಕ ಚಿತ್ರದ ಬಗ್ಗೆ ಮಾತನಾಡಿದ್ದು ಖೇದಕರ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...