Homeಕರ್ನಾಟಕಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

- Advertisement -
- Advertisement -

ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಯು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕು ಸೀಬಿ ದೇವಸ್ಥಾನದ ಸಮೀಪದ ಕೆಂಪರಾಯನ ಹಳ್ಳಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಕಾವಲುಗಾರನೊಬ್ಬ ಮಹಿಳೆಯನ್ನು ಎಳೆದಾಡುತ್ತಿದ್ದ ವೇಳೆ ರಕ್ಷಣೆಗೆ ಹೋದ ಆ ಮಹಿಳೆಯ ಪತಿಯ ಕೈ ಕಚ್ಚಿರುವ ಘಟನೆ ಜರುಗಿದೆ.

ಈ ಸಂಬಂಧ ರೈತ ಮಹಿಳೆ ಮತ್ತು ಆಕೆಯ ಪತಿ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿರುವುದು ಮತ್ತು ಮಾರಾಣಾಂತಿಕ ಹಲ್ಲೆ ಬಗ್ಗೆ FIR ದಾಖಲಾಗಿದೆ.

ತುಮಕೂರು ತಾಲೂಕು ಕೆಂಪರಾಯನಹಳ್ಳಿ ಸಮೀಪ ಸರ್ಕಾರಿ ಗೋಮಾಳ ಇದೆ. ಇಲ್ಲಿ 49 ಎಕರೆ ಭೂಮಿಯಲ್ಲಿ ಹತ್ತಾರು ಕುಟುಂಬಗಳು 1970 ರಿಂದಲೂ ಬಗರ್ ಹುಕುಂ ಸಾಗುವಳಿ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಿಂದ ಅರಣ್ಯ ಇಲಾಖೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಲೇ ಇದ್ದಾರೆ.

ತಮಗೆ ಹಂಚಿಕೆ ಮಾಡಿದ ಜಮೀನಿನಲ್ಲಿ ನರಸಿಂಹಮೂರ್ತಿ ಮತ್ತು ಲಕ್ಷ್ಮಮ್ಮ ಕುಟುಂಬ ಶೆಡ್ ನಿರ್ಮಾಣ ಮಾಡಿಕೊಂಡಿತ್ತು. ಜೂನ್ 30ರಂದು ಜಮೀನನ್ನು ಉಳುಮೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶೆಡ್ ಮೇಲೆ ಹಾಕಿದ್ದ ತಗಡುಗಳನ್ನು ಕಿತ್ತುಹಾಕಿದ್ದಾರೆ. ಇದನ್ನು ತಡೆಯಲು ಬಂದ ಲಕ್ಷ್ಮಮ್ಮ ಅವರನ್ನು ಫಾರೆಸ್ಟ್ ಗಾರ್ಡ್ ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕರಾದ ಸಿ. ಅಜ್ಜಪ್ಪ ಮತ್ತು ಬಿ.ಉಮೇಶ್ ಅರಣ್ಯ ಸಿಬ್ಬಂದಿಯ ಕ್ರಮವನ್ನು ಪ್ರಶ್ನಿಸಿದರು. ಹಲ್ಲೆಗೊಳಗಾದ ಲಕ್ಷ್ಮಮ್ಮ ಮತ್ತು ನರಸಿಂಹಮೂರ್ತಿ ಅವರನ್ನು ಕರೆದುಕೊಂಡು ಬಂದು ಕೋರಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಸಂಚಾಲಕ ಸಿ.ಅಜ್ಜಪ್ಪ, ಸರ್ಕಾರಿ ಗೋಮಾಳದಲ್ಲಿ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಕುಟುಂಬಗಳು ಸಾಗುವಳಿ ಮಾಡಿಕೊಂಡು ಬರುತ್ತಿವೆ. 98, 99ರಡಿ ರೈತರ ಹೆಸರಿನಲ್ಲಿ ಪಹಣಿಗಳು ಬರುತ್ತಿವೆ. ಅದರಲ್ಲಿ ಗೋಮಾಳ ಎಂದು ಇದ್ದು ಉಳುಮೆ ಮಾಡಿಕೊಂಡು ಬರುತ್ತಿರುವ ಸಾಗುವಳಿದಾರರ ಹೆಸರುಗಳು ಇವೆ. ಹಾಗಿದ್ದರೂ ಅರಣ್ಯ ಇಲಾಖೆ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ಅರಣ್ಯ ಇಲಾಖೆಯ ಬಳಿ ಯಾವುದೇ ದಾಖಲೆ ಇಲ್ಲ. ಇಲ್ಲಿ ಉಳುಮೆ ಮಾಡುತ್ತಿರುವವರು ಬಡವರು, ಭೂರಹಿತರು, ಅತಿಸಣ್ಣ ರೈತರು. ಅರಣ್ಯ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದು ಸರಿಯಲ್ಲ ಎಂದರು.

ಸಹಸಂಚಾಲಕ ಬಿ.ಉಮೇಶ್ ಮಾತನಾಡಿ ಗೋಮಾಳದಲ್ಲಿ ಒಂದೇ ಒಂದು ಮರಗಿಡ ಇಲ್ಲ. ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡಬಹುದೆಂಬ ಸರ್ಕಾರದ ಅದೇಶವಿದೆ. ಭೂಮಿ ಹಂಚಿಕೆ ಮಾಡಿದ್ದಾರೆ. ಬೆಳೆಯು ಬೆಳೆಯುತ್ತಿದ್ದಾರೆ. ಆದರೂ ಅರಣ್ಯ ಇಲಾಖೆಯ ಸಿಬ್ಬಂದಿ ರೈತ ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿದ್ದಾರೆ. ಆ ಮಹಿಳೆ ಪ್ರಜ್ಞೆ ತಪ್ಪಿದಾಗ ಪತಿ ನರಸಿಂಹಮೂರ್ತಿ ನೆರವಿಗೆ ಹೋಗಿದ್ದಾರೆ. ಆಗ ಫಾರೆಸ್ಟ್ ಗಾರ್ಡ್ ಬಸವರಾಜು ಕೈಕಚ್ಚಿ ಗಾಯಗೊಳಿಸಿದ್ದು ಇದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು.

ಅರಣ್ಯ ಇಲಾಖೆಯಿಂದ ನಿರಂತರ ಕಿರುಕುಳ ಅನುಭವಿಸುವಂತೆ ಆಗಿದೆ. ನಾವು ಹಿಂದೆ ಹಾಕಿದ್ದ ಗುಡಿಸಲನ್ನು ಸುಟ್ಟುಹಾಕಿದ್ದರು. ಈಗ ಶೆಡ್ ಕೆಡವಿಹಾಕಿದ್ದಾರೆ. ಹೊಲ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದನ್ನು ತಪ್ಪಿಸಬೇಕು ಎಂದು ಬಗರ್ ಹುಕುಂ ಸಾಗುವಳಿದಾರ ರೈತರು ಮನವಿ ಮಾಡಿದ್ದಾರೆ.


ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...