Homeಕರ್ನಾಟಕಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

- Advertisement -
- Advertisement -

ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಯು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕು ಸೀಬಿ ದೇವಸ್ಥಾನದ ಸಮೀಪದ ಕೆಂಪರಾಯನ ಹಳ್ಳಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಕಾವಲುಗಾರನೊಬ್ಬ ಮಹಿಳೆಯನ್ನು ಎಳೆದಾಡುತ್ತಿದ್ದ ವೇಳೆ ರಕ್ಷಣೆಗೆ ಹೋದ ಆ ಮಹಿಳೆಯ ಪತಿಯ ಕೈ ಕಚ್ಚಿರುವ ಘಟನೆ ಜರುಗಿದೆ.

ಈ ಸಂಬಂಧ ರೈತ ಮಹಿಳೆ ಮತ್ತು ಆಕೆಯ ಪತಿ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿರುವುದು ಮತ್ತು ಮಾರಾಣಾಂತಿಕ ಹಲ್ಲೆ ಬಗ್ಗೆ FIR ದಾಖಲಾಗಿದೆ.

ತುಮಕೂರು ತಾಲೂಕು ಕೆಂಪರಾಯನಹಳ್ಳಿ ಸಮೀಪ ಸರ್ಕಾರಿ ಗೋಮಾಳ ಇದೆ. ಇಲ್ಲಿ 49 ಎಕರೆ ಭೂಮಿಯಲ್ಲಿ ಹತ್ತಾರು ಕುಟುಂಬಗಳು 1970 ರಿಂದಲೂ ಬಗರ್ ಹುಕುಂ ಸಾಗುವಳಿ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಿಂದ ಅರಣ್ಯ ಇಲಾಖೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಲೇ ಇದ್ದಾರೆ.

ತಮಗೆ ಹಂಚಿಕೆ ಮಾಡಿದ ಜಮೀನಿನಲ್ಲಿ ನರಸಿಂಹಮೂರ್ತಿ ಮತ್ತು ಲಕ್ಷ್ಮಮ್ಮ ಕುಟುಂಬ ಶೆಡ್ ನಿರ್ಮಾಣ ಮಾಡಿಕೊಂಡಿತ್ತು. ಜೂನ್ 30ರಂದು ಜಮೀನನ್ನು ಉಳುಮೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶೆಡ್ ಮೇಲೆ ಹಾಕಿದ್ದ ತಗಡುಗಳನ್ನು ಕಿತ್ತುಹಾಕಿದ್ದಾರೆ. ಇದನ್ನು ತಡೆಯಲು ಬಂದ ಲಕ್ಷ್ಮಮ್ಮ ಅವರನ್ನು ಫಾರೆಸ್ಟ್ ಗಾರ್ಡ್ ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕರಾದ ಸಿ. ಅಜ್ಜಪ್ಪ ಮತ್ತು ಬಿ.ಉಮೇಶ್ ಅರಣ್ಯ ಸಿಬ್ಬಂದಿಯ ಕ್ರಮವನ್ನು ಪ್ರಶ್ನಿಸಿದರು. ಹಲ್ಲೆಗೊಳಗಾದ ಲಕ್ಷ್ಮಮ್ಮ ಮತ್ತು ನರಸಿಂಹಮೂರ್ತಿ ಅವರನ್ನು ಕರೆದುಕೊಂಡು ಬಂದು ಕೋರಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಸಂಚಾಲಕ ಸಿ.ಅಜ್ಜಪ್ಪ, ಸರ್ಕಾರಿ ಗೋಮಾಳದಲ್ಲಿ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಕುಟುಂಬಗಳು ಸಾಗುವಳಿ ಮಾಡಿಕೊಂಡು ಬರುತ್ತಿವೆ. 98, 99ರಡಿ ರೈತರ ಹೆಸರಿನಲ್ಲಿ ಪಹಣಿಗಳು ಬರುತ್ತಿವೆ. ಅದರಲ್ಲಿ ಗೋಮಾಳ ಎಂದು ಇದ್ದು ಉಳುಮೆ ಮಾಡಿಕೊಂಡು ಬರುತ್ತಿರುವ ಸಾಗುವಳಿದಾರರ ಹೆಸರುಗಳು ಇವೆ. ಹಾಗಿದ್ದರೂ ಅರಣ್ಯ ಇಲಾಖೆ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ಅರಣ್ಯ ಇಲಾಖೆಯ ಬಳಿ ಯಾವುದೇ ದಾಖಲೆ ಇಲ್ಲ. ಇಲ್ಲಿ ಉಳುಮೆ ಮಾಡುತ್ತಿರುವವರು ಬಡವರು, ಭೂರಹಿತರು, ಅತಿಸಣ್ಣ ರೈತರು. ಅರಣ್ಯ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದು ಸರಿಯಲ್ಲ ಎಂದರು.

ಸಹಸಂಚಾಲಕ ಬಿ.ಉಮೇಶ್ ಮಾತನಾಡಿ ಗೋಮಾಳದಲ್ಲಿ ಒಂದೇ ಒಂದು ಮರಗಿಡ ಇಲ್ಲ. ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡಬಹುದೆಂಬ ಸರ್ಕಾರದ ಅದೇಶವಿದೆ. ಭೂಮಿ ಹಂಚಿಕೆ ಮಾಡಿದ್ದಾರೆ. ಬೆಳೆಯು ಬೆಳೆಯುತ್ತಿದ್ದಾರೆ. ಆದರೂ ಅರಣ್ಯ ಇಲಾಖೆಯ ಸಿಬ್ಬಂದಿ ರೈತ ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿದ್ದಾರೆ. ಆ ಮಹಿಳೆ ಪ್ರಜ್ಞೆ ತಪ್ಪಿದಾಗ ಪತಿ ನರಸಿಂಹಮೂರ್ತಿ ನೆರವಿಗೆ ಹೋಗಿದ್ದಾರೆ. ಆಗ ಫಾರೆಸ್ಟ್ ಗಾರ್ಡ್ ಬಸವರಾಜು ಕೈಕಚ್ಚಿ ಗಾಯಗೊಳಿಸಿದ್ದು ಇದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು.

ಅರಣ್ಯ ಇಲಾಖೆಯಿಂದ ನಿರಂತರ ಕಿರುಕುಳ ಅನುಭವಿಸುವಂತೆ ಆಗಿದೆ. ನಾವು ಹಿಂದೆ ಹಾಕಿದ್ದ ಗುಡಿಸಲನ್ನು ಸುಟ್ಟುಹಾಕಿದ್ದರು. ಈಗ ಶೆಡ್ ಕೆಡವಿಹಾಕಿದ್ದಾರೆ. ಹೊಲ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದನ್ನು ತಪ್ಪಿಸಬೇಕು ಎಂದು ಬಗರ್ ಹುಕುಂ ಸಾಗುವಳಿದಾರ ರೈತರು ಮನವಿ ಮಾಡಿದ್ದಾರೆ.


ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...