Homeಕರ್ನಾಟಕಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

- Advertisement -
- Advertisement -

ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಯು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕು ಸೀಬಿ ದೇವಸ್ಥಾನದ ಸಮೀಪದ ಕೆಂಪರಾಯನ ಹಳ್ಳಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಕಾವಲುಗಾರನೊಬ್ಬ ಮಹಿಳೆಯನ್ನು ಎಳೆದಾಡುತ್ತಿದ್ದ ವೇಳೆ ರಕ್ಷಣೆಗೆ ಹೋದ ಆ ಮಹಿಳೆಯ ಪತಿಯ ಕೈ ಕಚ್ಚಿರುವ ಘಟನೆ ಜರುಗಿದೆ.

ಈ ಸಂಬಂಧ ರೈತ ಮಹಿಳೆ ಮತ್ತು ಆಕೆಯ ಪತಿ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿರುವುದು ಮತ್ತು ಮಾರಾಣಾಂತಿಕ ಹಲ್ಲೆ ಬಗ್ಗೆ FIR ದಾಖಲಾಗಿದೆ.

ತುಮಕೂರು ತಾಲೂಕು ಕೆಂಪರಾಯನಹಳ್ಳಿ ಸಮೀಪ ಸರ್ಕಾರಿ ಗೋಮಾಳ ಇದೆ. ಇಲ್ಲಿ 49 ಎಕರೆ ಭೂಮಿಯಲ್ಲಿ ಹತ್ತಾರು ಕುಟುಂಬಗಳು 1970 ರಿಂದಲೂ ಬಗರ್ ಹುಕುಂ ಸಾಗುವಳಿ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಿಂದ ಅರಣ್ಯ ಇಲಾಖೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಲೇ ಇದ್ದಾರೆ.

ತಮಗೆ ಹಂಚಿಕೆ ಮಾಡಿದ ಜಮೀನಿನಲ್ಲಿ ನರಸಿಂಹಮೂರ್ತಿ ಮತ್ತು ಲಕ್ಷ್ಮಮ್ಮ ಕುಟುಂಬ ಶೆಡ್ ನಿರ್ಮಾಣ ಮಾಡಿಕೊಂಡಿತ್ತು. ಜೂನ್ 30ರಂದು ಜಮೀನನ್ನು ಉಳುಮೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶೆಡ್ ಮೇಲೆ ಹಾಕಿದ್ದ ತಗಡುಗಳನ್ನು ಕಿತ್ತುಹಾಕಿದ್ದಾರೆ. ಇದನ್ನು ತಡೆಯಲು ಬಂದ ಲಕ್ಷ್ಮಮ್ಮ ಅವರನ್ನು ಫಾರೆಸ್ಟ್ ಗಾರ್ಡ್ ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕರಾದ ಸಿ. ಅಜ್ಜಪ್ಪ ಮತ್ತು ಬಿ.ಉಮೇಶ್ ಅರಣ್ಯ ಸಿಬ್ಬಂದಿಯ ಕ್ರಮವನ್ನು ಪ್ರಶ್ನಿಸಿದರು. ಹಲ್ಲೆಗೊಳಗಾದ ಲಕ್ಷ್ಮಮ್ಮ ಮತ್ತು ನರಸಿಂಹಮೂರ್ತಿ ಅವರನ್ನು ಕರೆದುಕೊಂಡು ಬಂದು ಕೋರಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಸಂಚಾಲಕ ಸಿ.ಅಜ್ಜಪ್ಪ, ಸರ್ಕಾರಿ ಗೋಮಾಳದಲ್ಲಿ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಕುಟುಂಬಗಳು ಸಾಗುವಳಿ ಮಾಡಿಕೊಂಡು ಬರುತ್ತಿವೆ. 98, 99ರಡಿ ರೈತರ ಹೆಸರಿನಲ್ಲಿ ಪಹಣಿಗಳು ಬರುತ್ತಿವೆ. ಅದರಲ್ಲಿ ಗೋಮಾಳ ಎಂದು ಇದ್ದು ಉಳುಮೆ ಮಾಡಿಕೊಂಡು ಬರುತ್ತಿರುವ ಸಾಗುವಳಿದಾರರ ಹೆಸರುಗಳು ಇವೆ. ಹಾಗಿದ್ದರೂ ಅರಣ್ಯ ಇಲಾಖೆ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ಅರಣ್ಯ ಇಲಾಖೆಯ ಬಳಿ ಯಾವುದೇ ದಾಖಲೆ ಇಲ್ಲ. ಇಲ್ಲಿ ಉಳುಮೆ ಮಾಡುತ್ತಿರುವವರು ಬಡವರು, ಭೂರಹಿತರು, ಅತಿಸಣ್ಣ ರೈತರು. ಅರಣ್ಯ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದು ಸರಿಯಲ್ಲ ಎಂದರು.

ಸಹಸಂಚಾಲಕ ಬಿ.ಉಮೇಶ್ ಮಾತನಾಡಿ ಗೋಮಾಳದಲ್ಲಿ ಒಂದೇ ಒಂದು ಮರಗಿಡ ಇಲ್ಲ. ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡಬಹುದೆಂಬ ಸರ್ಕಾರದ ಅದೇಶವಿದೆ. ಭೂಮಿ ಹಂಚಿಕೆ ಮಾಡಿದ್ದಾರೆ. ಬೆಳೆಯು ಬೆಳೆಯುತ್ತಿದ್ದಾರೆ. ಆದರೂ ಅರಣ್ಯ ಇಲಾಖೆಯ ಸಿಬ್ಬಂದಿ ರೈತ ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿದ್ದಾರೆ. ಆ ಮಹಿಳೆ ಪ್ರಜ್ಞೆ ತಪ್ಪಿದಾಗ ಪತಿ ನರಸಿಂಹಮೂರ್ತಿ ನೆರವಿಗೆ ಹೋಗಿದ್ದಾರೆ. ಆಗ ಫಾರೆಸ್ಟ್ ಗಾರ್ಡ್ ಬಸವರಾಜು ಕೈಕಚ್ಚಿ ಗಾಯಗೊಳಿಸಿದ್ದು ಇದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು.

ಅರಣ್ಯ ಇಲಾಖೆಯಿಂದ ನಿರಂತರ ಕಿರುಕುಳ ಅನುಭವಿಸುವಂತೆ ಆಗಿದೆ. ನಾವು ಹಿಂದೆ ಹಾಕಿದ್ದ ಗುಡಿಸಲನ್ನು ಸುಟ್ಟುಹಾಕಿದ್ದರು. ಈಗ ಶೆಡ್ ಕೆಡವಿಹಾಕಿದ್ದಾರೆ. ಹೊಲ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದನ್ನು ತಪ್ಪಿಸಬೇಕು ಎಂದು ಬಗರ್ ಹುಕುಂ ಸಾಗುವಳಿದಾರ ರೈತರು ಮನವಿ ಮಾಡಿದ್ದಾರೆ.


ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....