Homeಕರ್ನಾಟಕಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

- Advertisement -
- Advertisement -

ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಯು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕು ಸೀಬಿ ದೇವಸ್ಥಾನದ ಸಮೀಪದ ಕೆಂಪರಾಯನ ಹಳ್ಳಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಕಾವಲುಗಾರನೊಬ್ಬ ಮಹಿಳೆಯನ್ನು ಎಳೆದಾಡುತ್ತಿದ್ದ ವೇಳೆ ರಕ್ಷಣೆಗೆ ಹೋದ ಆ ಮಹಿಳೆಯ ಪತಿಯ ಕೈ ಕಚ್ಚಿರುವ ಘಟನೆ ಜರುಗಿದೆ.

ಈ ಸಂಬಂಧ ರೈತ ಮಹಿಳೆ ಮತ್ತು ಆಕೆಯ ಪತಿ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿರುವುದು ಮತ್ತು ಮಾರಾಣಾಂತಿಕ ಹಲ್ಲೆ ಬಗ್ಗೆ FIR ದಾಖಲಾಗಿದೆ.

ತುಮಕೂರು ತಾಲೂಕು ಕೆಂಪರಾಯನಹಳ್ಳಿ ಸಮೀಪ ಸರ್ಕಾರಿ ಗೋಮಾಳ ಇದೆ. ಇಲ್ಲಿ 49 ಎಕರೆ ಭೂಮಿಯಲ್ಲಿ ಹತ್ತಾರು ಕುಟುಂಬಗಳು 1970 ರಿಂದಲೂ ಬಗರ್ ಹುಕುಂ ಸಾಗುವಳಿ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಿಂದ ಅರಣ್ಯ ಇಲಾಖೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಲೇ ಇದ್ದಾರೆ.

ತಮಗೆ ಹಂಚಿಕೆ ಮಾಡಿದ ಜಮೀನಿನಲ್ಲಿ ನರಸಿಂಹಮೂರ್ತಿ ಮತ್ತು ಲಕ್ಷ್ಮಮ್ಮ ಕುಟುಂಬ ಶೆಡ್ ನಿರ್ಮಾಣ ಮಾಡಿಕೊಂಡಿತ್ತು. ಜೂನ್ 30ರಂದು ಜಮೀನನ್ನು ಉಳುಮೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶೆಡ್ ಮೇಲೆ ಹಾಕಿದ್ದ ತಗಡುಗಳನ್ನು ಕಿತ್ತುಹಾಕಿದ್ದಾರೆ. ಇದನ್ನು ತಡೆಯಲು ಬಂದ ಲಕ್ಷ್ಮಮ್ಮ ಅವರನ್ನು ಫಾರೆಸ್ಟ್ ಗಾರ್ಡ್ ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕರಾದ ಸಿ. ಅಜ್ಜಪ್ಪ ಮತ್ತು ಬಿ.ಉಮೇಶ್ ಅರಣ್ಯ ಸಿಬ್ಬಂದಿಯ ಕ್ರಮವನ್ನು ಪ್ರಶ್ನಿಸಿದರು. ಹಲ್ಲೆಗೊಳಗಾದ ಲಕ್ಷ್ಮಮ್ಮ ಮತ್ತು ನರಸಿಂಹಮೂರ್ತಿ ಅವರನ್ನು ಕರೆದುಕೊಂಡು ಬಂದು ಕೋರಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಸಂಚಾಲಕ ಸಿ.ಅಜ್ಜಪ್ಪ, ಸರ್ಕಾರಿ ಗೋಮಾಳದಲ್ಲಿ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಕುಟುಂಬಗಳು ಸಾಗುವಳಿ ಮಾಡಿಕೊಂಡು ಬರುತ್ತಿವೆ. 98, 99ರಡಿ ರೈತರ ಹೆಸರಿನಲ್ಲಿ ಪಹಣಿಗಳು ಬರುತ್ತಿವೆ. ಅದರಲ್ಲಿ ಗೋಮಾಳ ಎಂದು ಇದ್ದು ಉಳುಮೆ ಮಾಡಿಕೊಂಡು ಬರುತ್ತಿರುವ ಸಾಗುವಳಿದಾರರ ಹೆಸರುಗಳು ಇವೆ. ಹಾಗಿದ್ದರೂ ಅರಣ್ಯ ಇಲಾಖೆ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ಅರಣ್ಯ ಇಲಾಖೆಯ ಬಳಿ ಯಾವುದೇ ದಾಖಲೆ ಇಲ್ಲ. ಇಲ್ಲಿ ಉಳುಮೆ ಮಾಡುತ್ತಿರುವವರು ಬಡವರು, ಭೂರಹಿತರು, ಅತಿಸಣ್ಣ ರೈತರು. ಅರಣ್ಯ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದು ಸರಿಯಲ್ಲ ಎಂದರು.

ಸಹಸಂಚಾಲಕ ಬಿ.ಉಮೇಶ್ ಮಾತನಾಡಿ ಗೋಮಾಳದಲ್ಲಿ ಒಂದೇ ಒಂದು ಮರಗಿಡ ಇಲ್ಲ. ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡಬಹುದೆಂಬ ಸರ್ಕಾರದ ಅದೇಶವಿದೆ. ಭೂಮಿ ಹಂಚಿಕೆ ಮಾಡಿದ್ದಾರೆ. ಬೆಳೆಯು ಬೆಳೆಯುತ್ತಿದ್ದಾರೆ. ಆದರೂ ಅರಣ್ಯ ಇಲಾಖೆಯ ಸಿಬ್ಬಂದಿ ರೈತ ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿದ್ದಾರೆ. ಆ ಮಹಿಳೆ ಪ್ರಜ್ಞೆ ತಪ್ಪಿದಾಗ ಪತಿ ನರಸಿಂಹಮೂರ್ತಿ ನೆರವಿಗೆ ಹೋಗಿದ್ದಾರೆ. ಆಗ ಫಾರೆಸ್ಟ್ ಗಾರ್ಡ್ ಬಸವರಾಜು ಕೈಕಚ್ಚಿ ಗಾಯಗೊಳಿಸಿದ್ದು ಇದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು.

ಅರಣ್ಯ ಇಲಾಖೆಯಿಂದ ನಿರಂತರ ಕಿರುಕುಳ ಅನುಭವಿಸುವಂತೆ ಆಗಿದೆ. ನಾವು ಹಿಂದೆ ಹಾಕಿದ್ದ ಗುಡಿಸಲನ್ನು ಸುಟ್ಟುಹಾಕಿದ್ದರು. ಈಗ ಶೆಡ್ ಕೆಡವಿಹಾಕಿದ್ದಾರೆ. ಹೊಲ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದನ್ನು ತಪ್ಪಿಸಬೇಕು ಎಂದು ಬಗರ್ ಹುಕುಂ ಸಾಗುವಳಿದಾರ ರೈತರು ಮನವಿ ಮಾಡಿದ್ದಾರೆ.


ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...