Homeಮುಖಪುಟಬಗ್ಗಾ ಬಂಧನ: ಮೂರು ರಾಜ್ಯಗಳ ಪೊಲೀಸರ ನಡುವೆ ತಿಕ್ಕಾಟ - ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಬಗ್ಗಾ ಬಂಧನ: ಮೂರು ರಾಜ್ಯಗಳ ಪೊಲೀಸರ ನಡುವೆ ತಿಕ್ಕಾಟ – ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

- Advertisement -
- Advertisement -

ಪಂಜಾಬ್ ಪೊಲೀಸರಿಂದ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗಾ ಬಂಧನವು ಹಲವು ಪ್ರಹಸನಗಳಿಗೆ ಕಾರಣವಾಗಿವೆ. ಬಗ್ಗಾರನ್ನು ಪಂಜಾಬ್‌ಗೆ ಕರೆದೊಯ್ಯುವಾಗ ಬಿಜೆಪಿ ಆಡಳಿತದ ಹರಿಯಾಣ ಪೊಲೀಸರು ಕುರುಕ್ಷೇತ್ರದಲ್ಲ ತಡೆದಿದ್ದಾರೆ. ನಂತರ ಆರೋಪಿಯನ್ನು ಪಂಜಾಬ್ ಪೊಲೀಸರಿಂದ ಬಿಡಿಸಿ ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನು ಪಂಜಾಬ್ ಪೊಲೀಸರು ಪಂಜಾಬ್ – ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪಂಜಾಬ್ ಎಜಿ ಅನ್ಮೋಲ್ ರತನ್ ಸಿಧು ಮಾತನಾಡಿ, “ಎಲ್ಲವೂ ಕಾರ್ಯವಿಧಾನದ ಪ್ರಕಾರವೇ ನಡೆಯುತ್ತಿತ್ತು. ಆದರೆ ಹರ್ಯಾಣ ಪೊಲೀಸರು ತಪ್ಪಾಗಿ ಮಧ್ಯಪ್ರವೇಶ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. 6 ಗಂಟೆಗಳ ಕಾಲ ಪಂಜಾಬ್ ಪೊಲೀಸರು ಕಾಯುವಂತೆ ಮಾಡಿ ನ್ಯಾಯ ಪ್ರಕ್ರಿಯೆಯನ್ನು ವಿಳಂಬ ಮಾಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಮಾರ್ಚ್ 25 ರಂದು ಟ್ವೀಟ್ ಮತ್ತು ಖಾಸಗಿ ಟಿವಿ ವಾಹಿನಿ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗಾರನ್ನು ಇಂದು ಬೆಳಿಗ್ಗೆ ಪಂಜಾಬ್ ಪೊಲೀಸರು ಬಂಧಿಸಿದ್ದರು.

ಒಂದು ತಿಂಗಳ ಹಿಂದೆಯೇ ಪಟಿಯಾಲ ಪೊಲೀಸ್ ಠಾಣೆಯಲ್ಲಿ ಬಗ್ಗಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ 5 ಬಾರಿ ನೋಟಿಸ್ ಕಳಿಸಲಾಗಿತ್ತು. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗದ ಕಾರಣ ಇಂದು ದೆಹಲಿಯ ಅವರ ಮನೆಯಿಂದ ಬಂಧಿಸಲಾಗಿದೆ. ಈ ಕುರಿತು ಸ್ಥಳೀಯ ಜನಕಪುರಿ ಪೊಲೀಸ್ ಠಾಣೆಗೆ ಪೂರ್ಣ ಮಾಹಿತಿ ಒದಗಿಸಲಾಗಿತ್ತು ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಬಂಧಿಸುವ ಮುನ್ನ ಸಮರ್ಪಕ ವಿಧಾನಗಳನ್ನು ಅನುಸರಿಸಿಲ್ಲ ಎಂದು ಪಂಜಾಬ್ ಪೊಲೀಸರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೊಲೀಸರು ಏಕಾಏಕಿ ಬಗ್ಗಾರನ್ನು ಬಂಧಿಸಿದ್ದಾರೆ. ಬಂಧನಕ್ಕೂ ಮುನ್ನ ತಲೆ ಪೇಟ ಧರಿಸಲು ಅವಕಾಶ ನೀಡಿಲ್ಲ, ಅವರ ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಗ್ಗಾರವರ ತಾಯಿ ಕಮಲ್‌ಜಿತ್ ಕೌರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ದಹೆಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಕೊಲ್ಲಿ ಎಂದು ತಾಜಿಂದರ್ ಬಗ್ಗಾ ಖಾಸಗಿ ಟಿವಿ ಚರ್ಚೆ ವೇಳೆ ಕರೆ ನೀಡಿದ್ದರು. ಅಲ್ಲದೇ ಟ್ವೀಟ್‌ ನಲ್ಲಿಯೂ ಕೂಡ ಅದೇ ರೀತಿಯ ಪ್ರಚೋದನೆ ನೀಡಿದ ಕಾರಣಕ್ಕೆ ಅವರ ಮೇಲೆ ದೂರು ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...