Homeಮುಖಪುಟಬಹ್ರೈಚ್: 'ಅತಿಕ್ರಮಣ' ಆರೋಪದಡಿ ಬುಲ್ಡೋಜರ್ ಬಳಸಿ 4 ದರ್ಗಾ ಕೆಡವಿದ ಅರಣ್ಯ ಇಲಾಖೆ

ಬಹ್ರೈಚ್: ‘ಅತಿಕ್ರಮಣ’ ಆರೋಪದಡಿ ಬುಲ್ಡೋಜರ್ ಬಳಸಿ 4 ದರ್ಗಾ ಕೆಡವಿದ ಅರಣ್ಯ ಇಲಾಖೆ

- Advertisement -
- Advertisement -

ಬಹ್ರೈಚ್: ರಾಜ್ಯ ಅರಣ್ಯ ಇಲಾಖೆಯು ಬಹ್ರೈಚ್ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸರೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಮೂರ್ತಿಯಾ ಶ್ರೇಣಿಯಲ್ಲಿರುವ ನಾಲ್ಕು ಹಳೆಯ ದರ್ಗಾ ಅಥವಾ ಸೂಫಿ ಸಂತರ ಸಮಾಧಿಗಳನ್ನು ಬುಲ್ಡೊಜರ್ ಬಳಸಿ ಕೆಡವಿ ಹಾಕಿದೆ.

ಅರಣ್ಯ ಭೂಮಿಯಲ್ಲಿ ಈ ದರ್ಗಾಗಳ ನಿರ್ಮಾಣವು ಅಕ್ರಮ ಎಂದು ಅರಣ್ಯ ಇಲಾಖೆಯು ಉಲ್ಲೇಖಿಸಿದೆ. ಈ ಧಾರ್ಮಿಕ ಕಟ್ಟಡಗಳು ಸಂರಕ್ಷಿತ ಅರಣ್ಯ ಪ್ರದೇಶದೊಳಗೆ ಇವೆ ಮತ್ತು ಅವುಗಳನ್ನು “ಅತಿಕ್ರಮಣ” ಎಂದು ವರ್ಗೀಕರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಡವಲಾದ ನಾಲ್ಕು ದರ್ಗಾಗಳಲ್ಲಿ ಲಕ್ಕಡ್ ಷಾ ಬಾಬಾ ಎಂದೂ ಕರೆಯಲ್ಪಡುವ ಹಜರತ್ ಸಯ್ಯದ್ ಮೊಹಮ್ಮದ್ ಹಾಶಿಮ್ ಅಲಿ ಶಾ ಅವರ ದರ್ಗಾ ಕೂಡ ಸೇರಿದೆ. ಅಲ್ಲಿ ಈ ಹಿಂದೆ ನಿಯಮಿತವಾಗಿ  ಉರೂಸ್ ಗಳನ್ನು ಯೋಜಿಸಲಾಗುತ್ತಿತ್ತು. ಇತ್ತೀಚೆಗೆ ಅರಣ್ಯ ಇಲಾಖೆ ಅಲ್ಲಿ ಉರೂಸ್ ಮತ್ತು ಜಾತ್ರೆಗೆ ಅನುಮತಿ ನಿರಾಕರಿಸಿತು. ನಂತರ ದರ್ಗಾ ನಿರ್ವಹಣಾ ಸಮಿತಿಯು ಆಕ್ಷೇಪಣೆ ವ್ಯಕ್ತಪಡಿಸಿತು.

ಪ್ರಸ್ತಾವಿತ ಉರೂಸ್ ಸ್ಥಳವು ಅರಣ್ಯದ ಪ್ರಮುಖ ಪ್ರದೇಶದೊಳಗೆ ಬರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಅಲ್ಲಿ ಸಾರ್ವಜನಿಕ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತರ ಮೂರು ದರ್ಗಾಗಳಾದ ಭವರ್ ಶಾ, ಚಮನ್ ಶಾ ಮತ್ತು ಶಹೆನ್ ಶಾಗಳನ್ನು ಕೆಡವಲಾಗಿದೆ. ಇವುಗಳೆಲ್ಲಾ ಸುಮಾರು ಅರ್ಧ ಕಿಲೋಮೀಟರ್ ವ್ಯಾಪ್ತಿಯಲ್ಲಿವೆ. ಭಾನುವಾರ ರಾತ್ರಿಯಿಂದ ಪ್ರಾರಂಭವಾದ ಕೆಡವುವಿಕೆ ಕಾರ್ಯವು ಸೋಮವಾರ ಬೆಳಿಗ್ಗೆಯವರೆಗೆ ಮುಂದುವರೆಯಿತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಭಾನುವಾರ ರಾತ್ರಿಯಂದು ಸ್ಥಳೀಯ ಪೊಲೀಸರು ಮತ್ತು ಜಿಲ್ಲಾ ಆಡಳಿತದ ಬೆಂಬಲದೊಂದಿಗೆ ಅರಣ್ಯ ಇಲಾಖೆಯು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಪ್ರಾಂತೀಯ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಸೇರಿದಂತೆ ಭಾರೀ ಪೊಲೀಸ್ ಉಪಸ್ಥಿತಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು ಮತ್ತು ನಾಲ್ಕು ದರ್ಗಾಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸಲಾಯಿತು. ವನ್ಯಜೀವಿಗಳ ದಾಳಿಯ ಅಪಾಯದಿಂದಾಗಿ ಪ್ರದೇಶಕ್ಕೆ ಪ್ರವೇಶ ಸೀಮಿತವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕತರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಬಿ.ಶಿವಶಂಕರ್ ಅವರು, ಅರಣ್ಯ ನ್ಯಾಯಾಲಯವು ಈ ನಿರ್ಮಾಣಗಳನ್ನು “ಅರಣ್ಯ ಭೂಮಿಯ ಮೇಲಿನ ಅತಿಕ್ರಮಣ” ಎಂದು ಘೋಷಿಸಿದೆ ಎಂದು ಹೇಳಿದರು.

ಅರಣ್ಯ ಸಿಬ್ಬಂದಿ, ವಿಶೇಷ ಹುಲಿ ರಕ್ಷಣಾ ಪಡೆ, ಸ್ಥಳೀಯ ಪೊಲೀಸರು ಮತ್ತು ಪ್ರಾಂತೀಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಮಾಧ್ಯಮ ಪ್ರತಿನಿಧಿಗಳನ್ನು ಸ್ಥಳದಿಂದ ಏಕೆ ದೂರವಿಡಲಾಗಿದೆ ಎಂದು ಪ್ರಶ್ನಿಸಿದಾಗ, “ಈ ಪ್ರದೇಶವು ಕಾಡು ಪ್ರಾಣಿಗಳ ಉಪಸ್ಥಿತಿಯು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗುವ ಅರಣ್ಯ ವಲಯದಲ್ಲಿದೆ. ಆದ್ದರಿಂದ ಪ್ರವೇಶವನ್ನು ನಿರ್ಬಂಧಿಸಲಾಗಿದೆ” ಎಂದು ಶಿವಶಂಕರ್ ಹೇಳಿದರು.

ಆದಾಗ್ಯೂ, ಜಿಲ್ಲಾಧಿಕಾರಿ ಮೋನಿಕಾ ರಾಣಿಯವರು ಅರಣ್ಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸ್ಥಳಕ್ಕೆ ಸೀಮಿತ ಪ್ರವೇಶವನ್ನು ಅನುಮತಿಸಬಹುದು ಎಂದು ನಿರ್ದೇಶಿಸಿದರು. ಅರಣ್ಯ ಇಲಾಖೆ ನೀಡಿದ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ದರ್ಗಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿ, ಭೂಮಿಯು ವಕ್ಫ್ ಆಸ್ತಿ ಎಂದು ಪ್ರತಿಪಾದಿಸುವ ದಾಖಲೆಗಳನ್ನು ಸಲ್ಲಿಸಿತು. ತಮ್ಮ ಹಕ್ಕನ್ನು ಬೆಂಬಲಿಸಲು ದರ್ಗಾ ಸಮಿತಿಯು 1986ರಲ್ಲಿ ಭೂಮಿಯನ್ನು ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ ಎಂದು ತೋರಿಸುವ ದಾಖಲೆಗಳನ್ನು ಪ್ರಸ್ತುತಪಡಿಸಿತು.

ಆದಾಗ್ಯೂ, ಅರಣ್ಯ ಇಲಾಖೆ ಅಧಿಕಾರಿಗಳು ಸಮಿತಿಯು 1986ರ ಮೊದಲು ಮಾಲೀಕತ್ವದ ಯಾವುದೇ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಭಾರತೀಯ ಅರಣ್ಯ ಕಾಯ್ದೆಯು ಆ ನೋಂದಣಿಗಿಂತ ಹಿಂದಿನದು. ಈ ನಿರ್ಮಾಣವು ಅರಣ್ಯ ಭೂಮಿಯ ಮೇಲಿನ ಅತಿಕ್ರಮಣ ಎಂದು ನಿರ್ಧರಿಸಲಾಗಿದೆ ಎಂದು ಡಿಎಫ್‌ಒ ಹೇಳಿದರು.

ಜೂನ್ 5ರಂದು ತೆರವು ಆದೇಶ ಹೊರಡಿಸಲಾಯಿತು ಮತ್ತು ಅತಿಕ್ರಮಣವನ್ನು ಸ್ವಯಂಪ್ರೇರಣೆಯಿಂದ ತೆಗೆದುಹಾಕದಿದ್ದಾಗ, ಭಾನುವಾರ ರಾತ್ರಿ ನೆಲಸಮ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
ಲಕ್ಕಡ್ ಶಾ ಬಾಬಾ ದರ್ಗಾವು ಸುಮಾರು 1,000 ವರ್ಷಗಳಷ್ಟು ಹಳೆಯದಾಗಿದ್ದು, ಪ್ರತಿ ಶುಕ್ರವಾರ ಪ್ರಾರ್ಥನೆಗಳು ನಡೆಯುತ್ತಿದ್ದವು. ಜೊತೆಗೆ ಜಿಲ್ಲೆಯಾದ್ಯಂತ ಮತ್ತು ಅದರಾಚೆಗಿನ ಜನರು ಭಾಗವಹಿಸುವ ಬಸಂತ್ ಪಂಚಮಿ ಜಾತ್ರೆಯೂ ನಡೆಯುತ್ತಿತ್ತು ಎಂದು ದರ್ಗಾ ಸಮಿತಿಯ ಕಾರ್ಯದರ್ಶಿ ಎಸ್ರಾರ್ ಅಹ್ಮದ್ ಹೇಳಿದ್ದಾರೆ.

ಏಪ್ರಿಲ್ 30ರಂದು ಅರಣ್ಯ ನ್ಯಾಯಮಂಡಳಿಯಿಂದ ಸಮಿತಿಗೆ ನೋಟಿಸ್ ಬಂದಿದ್ದು, ದೇವಾಲಯಗಳಿರುವ ಭೂಮಿಯನ್ನು “ಅರಣ್ಯ ಭೂಮಿ” ಎಂದು ಘೋಷಿಸಿ, ನಿರ್ಮಾಣಗಳು “ಅತಿಕ್ರಮಣ” ಎಂದು ಕರೆದಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರ: 41 ಲಕ್ಷ ‘ಅನಧಿಕೃತ’ ಮತದಾರರ ಸೇರ್ಪಡೆ ಆರೋಪ; ಆಯೋಗದಿಂದ ಉತ್ತರ ಬಯಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...