Homeಮುಖಪುಟಬಹ್ರೈಚ್: 'ಅತಿಕ್ರಮಣ' ಆರೋಪದಡಿ ಬುಲ್ಡೋಜರ್ ಬಳಸಿ 4 ದರ್ಗಾ ಕೆಡವಿದ ಅರಣ್ಯ ಇಲಾಖೆ

ಬಹ್ರೈಚ್: ‘ಅತಿಕ್ರಮಣ’ ಆರೋಪದಡಿ ಬುಲ್ಡೋಜರ್ ಬಳಸಿ 4 ದರ್ಗಾ ಕೆಡವಿದ ಅರಣ್ಯ ಇಲಾಖೆ

- Advertisement -
- Advertisement -

ಬಹ್ರೈಚ್: ರಾಜ್ಯ ಅರಣ್ಯ ಇಲಾಖೆಯು ಬಹ್ರೈಚ್ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸರೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಮೂರ್ತಿಯಾ ಶ್ರೇಣಿಯಲ್ಲಿರುವ ನಾಲ್ಕು ಹಳೆಯ ದರ್ಗಾ ಅಥವಾ ಸೂಫಿ ಸಂತರ ಸಮಾಧಿಗಳನ್ನು ಬುಲ್ಡೊಜರ್ ಬಳಸಿ ಕೆಡವಿ ಹಾಕಿದೆ.

ಅರಣ್ಯ ಭೂಮಿಯಲ್ಲಿ ಈ ದರ್ಗಾಗಳ ನಿರ್ಮಾಣವು ಅಕ್ರಮ ಎಂದು ಅರಣ್ಯ ಇಲಾಖೆಯು ಉಲ್ಲೇಖಿಸಿದೆ. ಈ ಧಾರ್ಮಿಕ ಕಟ್ಟಡಗಳು ಸಂರಕ್ಷಿತ ಅರಣ್ಯ ಪ್ರದೇಶದೊಳಗೆ ಇವೆ ಮತ್ತು ಅವುಗಳನ್ನು “ಅತಿಕ್ರಮಣ” ಎಂದು ವರ್ಗೀಕರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಡವಲಾದ ನಾಲ್ಕು ದರ್ಗಾಗಳಲ್ಲಿ ಲಕ್ಕಡ್ ಷಾ ಬಾಬಾ ಎಂದೂ ಕರೆಯಲ್ಪಡುವ ಹಜರತ್ ಸಯ್ಯದ್ ಮೊಹಮ್ಮದ್ ಹಾಶಿಮ್ ಅಲಿ ಶಾ ಅವರ ದರ್ಗಾ ಕೂಡ ಸೇರಿದೆ. ಅಲ್ಲಿ ಈ ಹಿಂದೆ ನಿಯಮಿತವಾಗಿ  ಉರೂಸ್ ಗಳನ್ನು ಯೋಜಿಸಲಾಗುತ್ತಿತ್ತು. ಇತ್ತೀಚೆಗೆ ಅರಣ್ಯ ಇಲಾಖೆ ಅಲ್ಲಿ ಉರೂಸ್ ಮತ್ತು ಜಾತ್ರೆಗೆ ಅನುಮತಿ ನಿರಾಕರಿಸಿತು. ನಂತರ ದರ್ಗಾ ನಿರ್ವಹಣಾ ಸಮಿತಿಯು ಆಕ್ಷೇಪಣೆ ವ್ಯಕ್ತಪಡಿಸಿತು.

ಪ್ರಸ್ತಾವಿತ ಉರೂಸ್ ಸ್ಥಳವು ಅರಣ್ಯದ ಪ್ರಮುಖ ಪ್ರದೇಶದೊಳಗೆ ಬರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಅಲ್ಲಿ ಸಾರ್ವಜನಿಕ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತರ ಮೂರು ದರ್ಗಾಗಳಾದ ಭವರ್ ಶಾ, ಚಮನ್ ಶಾ ಮತ್ತು ಶಹೆನ್ ಶಾಗಳನ್ನು ಕೆಡವಲಾಗಿದೆ. ಇವುಗಳೆಲ್ಲಾ ಸುಮಾರು ಅರ್ಧ ಕಿಲೋಮೀಟರ್ ವ್ಯಾಪ್ತಿಯಲ್ಲಿವೆ. ಭಾನುವಾರ ರಾತ್ರಿಯಿಂದ ಪ್ರಾರಂಭವಾದ ಕೆಡವುವಿಕೆ ಕಾರ್ಯವು ಸೋಮವಾರ ಬೆಳಿಗ್ಗೆಯವರೆಗೆ ಮುಂದುವರೆಯಿತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಭಾನುವಾರ ರಾತ್ರಿಯಂದು ಸ್ಥಳೀಯ ಪೊಲೀಸರು ಮತ್ತು ಜಿಲ್ಲಾ ಆಡಳಿತದ ಬೆಂಬಲದೊಂದಿಗೆ ಅರಣ್ಯ ಇಲಾಖೆಯು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಪ್ರಾಂತೀಯ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಸೇರಿದಂತೆ ಭಾರೀ ಪೊಲೀಸ್ ಉಪಸ್ಥಿತಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು ಮತ್ತು ನಾಲ್ಕು ದರ್ಗಾಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸಲಾಯಿತು. ವನ್ಯಜೀವಿಗಳ ದಾಳಿಯ ಅಪಾಯದಿಂದಾಗಿ ಪ್ರದೇಶಕ್ಕೆ ಪ್ರವೇಶ ಸೀಮಿತವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕತರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಬಿ.ಶಿವಶಂಕರ್ ಅವರು, ಅರಣ್ಯ ನ್ಯಾಯಾಲಯವು ಈ ನಿರ್ಮಾಣಗಳನ್ನು “ಅರಣ್ಯ ಭೂಮಿಯ ಮೇಲಿನ ಅತಿಕ್ರಮಣ” ಎಂದು ಘೋಷಿಸಿದೆ ಎಂದು ಹೇಳಿದರು.

ಅರಣ್ಯ ಸಿಬ್ಬಂದಿ, ವಿಶೇಷ ಹುಲಿ ರಕ್ಷಣಾ ಪಡೆ, ಸ್ಥಳೀಯ ಪೊಲೀಸರು ಮತ್ತು ಪ್ರಾಂತೀಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಮಾಧ್ಯಮ ಪ್ರತಿನಿಧಿಗಳನ್ನು ಸ್ಥಳದಿಂದ ಏಕೆ ದೂರವಿಡಲಾಗಿದೆ ಎಂದು ಪ್ರಶ್ನಿಸಿದಾಗ, “ಈ ಪ್ರದೇಶವು ಕಾಡು ಪ್ರಾಣಿಗಳ ಉಪಸ್ಥಿತಿಯು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗುವ ಅರಣ್ಯ ವಲಯದಲ್ಲಿದೆ. ಆದ್ದರಿಂದ ಪ್ರವೇಶವನ್ನು ನಿರ್ಬಂಧಿಸಲಾಗಿದೆ” ಎಂದು ಶಿವಶಂಕರ್ ಹೇಳಿದರು.

ಆದಾಗ್ಯೂ, ಜಿಲ್ಲಾಧಿಕಾರಿ ಮೋನಿಕಾ ರಾಣಿಯವರು ಅರಣ್ಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸ್ಥಳಕ್ಕೆ ಸೀಮಿತ ಪ್ರವೇಶವನ್ನು ಅನುಮತಿಸಬಹುದು ಎಂದು ನಿರ್ದೇಶಿಸಿದರು. ಅರಣ್ಯ ಇಲಾಖೆ ನೀಡಿದ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ದರ್ಗಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿ, ಭೂಮಿಯು ವಕ್ಫ್ ಆಸ್ತಿ ಎಂದು ಪ್ರತಿಪಾದಿಸುವ ದಾಖಲೆಗಳನ್ನು ಸಲ್ಲಿಸಿತು. ತಮ್ಮ ಹಕ್ಕನ್ನು ಬೆಂಬಲಿಸಲು ದರ್ಗಾ ಸಮಿತಿಯು 1986ರಲ್ಲಿ ಭೂಮಿಯನ್ನು ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ ಎಂದು ತೋರಿಸುವ ದಾಖಲೆಗಳನ್ನು ಪ್ರಸ್ತುತಪಡಿಸಿತು.

ಆದಾಗ್ಯೂ, ಅರಣ್ಯ ಇಲಾಖೆ ಅಧಿಕಾರಿಗಳು ಸಮಿತಿಯು 1986ರ ಮೊದಲು ಮಾಲೀಕತ್ವದ ಯಾವುದೇ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಭಾರತೀಯ ಅರಣ್ಯ ಕಾಯ್ದೆಯು ಆ ನೋಂದಣಿಗಿಂತ ಹಿಂದಿನದು. ಈ ನಿರ್ಮಾಣವು ಅರಣ್ಯ ಭೂಮಿಯ ಮೇಲಿನ ಅತಿಕ್ರಮಣ ಎಂದು ನಿರ್ಧರಿಸಲಾಗಿದೆ ಎಂದು ಡಿಎಫ್‌ಒ ಹೇಳಿದರು.

ಜೂನ್ 5ರಂದು ತೆರವು ಆದೇಶ ಹೊರಡಿಸಲಾಯಿತು ಮತ್ತು ಅತಿಕ್ರಮಣವನ್ನು ಸ್ವಯಂಪ್ರೇರಣೆಯಿಂದ ತೆಗೆದುಹಾಕದಿದ್ದಾಗ, ಭಾನುವಾರ ರಾತ್ರಿ ನೆಲಸಮ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
ಲಕ್ಕಡ್ ಶಾ ಬಾಬಾ ದರ್ಗಾವು ಸುಮಾರು 1,000 ವರ್ಷಗಳಷ್ಟು ಹಳೆಯದಾಗಿದ್ದು, ಪ್ರತಿ ಶುಕ್ರವಾರ ಪ್ರಾರ್ಥನೆಗಳು ನಡೆಯುತ್ತಿದ್ದವು. ಜೊತೆಗೆ ಜಿಲ್ಲೆಯಾದ್ಯಂತ ಮತ್ತು ಅದರಾಚೆಗಿನ ಜನರು ಭಾಗವಹಿಸುವ ಬಸಂತ್ ಪಂಚಮಿ ಜಾತ್ರೆಯೂ ನಡೆಯುತ್ತಿತ್ತು ಎಂದು ದರ್ಗಾ ಸಮಿತಿಯ ಕಾರ್ಯದರ್ಶಿ ಎಸ್ರಾರ್ ಅಹ್ಮದ್ ಹೇಳಿದ್ದಾರೆ.

ಏಪ್ರಿಲ್ 30ರಂದು ಅರಣ್ಯ ನ್ಯಾಯಮಂಡಳಿಯಿಂದ ಸಮಿತಿಗೆ ನೋಟಿಸ್ ಬಂದಿದ್ದು, ದೇವಾಲಯಗಳಿರುವ ಭೂಮಿಯನ್ನು “ಅರಣ್ಯ ಭೂಮಿ” ಎಂದು ಘೋಷಿಸಿ, ನಿರ್ಮಾಣಗಳು “ಅತಿಕ್ರಮಣ” ಎಂದು ಕರೆದಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರ: 41 ಲಕ್ಷ ‘ಅನಧಿಕೃತ’ ಮತದಾರರ ಸೇರ್ಪಡೆ ಆರೋಪ; ಆಯೋಗದಿಂದ ಉತ್ತರ ಬಯಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...