Homeಮುಖಪುಟಬಹ್ರೈಚ್: 'ಅತಿಕ್ರಮಣ' ಆರೋಪದಡಿ ಬುಲ್ಡೋಜರ್ ಬಳಸಿ 4 ದರ್ಗಾ ಕೆಡವಿದ ಅರಣ್ಯ ಇಲಾಖೆ

ಬಹ್ರೈಚ್: ‘ಅತಿಕ್ರಮಣ’ ಆರೋಪದಡಿ ಬುಲ್ಡೋಜರ್ ಬಳಸಿ 4 ದರ್ಗಾ ಕೆಡವಿದ ಅರಣ್ಯ ಇಲಾಖೆ

- Advertisement -
- Advertisement -

ಬಹ್ರೈಚ್: ರಾಜ್ಯ ಅರಣ್ಯ ಇಲಾಖೆಯು ಬಹ್ರೈಚ್ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸರೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಮೂರ್ತಿಯಾ ಶ್ರೇಣಿಯಲ್ಲಿರುವ ನಾಲ್ಕು ಹಳೆಯ ದರ್ಗಾ ಅಥವಾ ಸೂಫಿ ಸಂತರ ಸಮಾಧಿಗಳನ್ನು ಬುಲ್ಡೊಜರ್ ಬಳಸಿ ಕೆಡವಿ ಹಾಕಿದೆ.

ಅರಣ್ಯ ಭೂಮಿಯಲ್ಲಿ ಈ ದರ್ಗಾಗಳ ನಿರ್ಮಾಣವು ಅಕ್ರಮ ಎಂದು ಅರಣ್ಯ ಇಲಾಖೆಯು ಉಲ್ಲೇಖಿಸಿದೆ. ಈ ಧಾರ್ಮಿಕ ಕಟ್ಟಡಗಳು ಸಂರಕ್ಷಿತ ಅರಣ್ಯ ಪ್ರದೇಶದೊಳಗೆ ಇವೆ ಮತ್ತು ಅವುಗಳನ್ನು “ಅತಿಕ್ರಮಣ” ಎಂದು ವರ್ಗೀಕರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಡವಲಾದ ನಾಲ್ಕು ದರ್ಗಾಗಳಲ್ಲಿ ಲಕ್ಕಡ್ ಷಾ ಬಾಬಾ ಎಂದೂ ಕರೆಯಲ್ಪಡುವ ಹಜರತ್ ಸಯ್ಯದ್ ಮೊಹಮ್ಮದ್ ಹಾಶಿಮ್ ಅಲಿ ಶಾ ಅವರ ದರ್ಗಾ ಕೂಡ ಸೇರಿದೆ. ಅಲ್ಲಿ ಈ ಹಿಂದೆ ನಿಯಮಿತವಾಗಿ  ಉರೂಸ್ ಗಳನ್ನು ಯೋಜಿಸಲಾಗುತ್ತಿತ್ತು. ಇತ್ತೀಚೆಗೆ ಅರಣ್ಯ ಇಲಾಖೆ ಅಲ್ಲಿ ಉರೂಸ್ ಮತ್ತು ಜಾತ್ರೆಗೆ ಅನುಮತಿ ನಿರಾಕರಿಸಿತು. ನಂತರ ದರ್ಗಾ ನಿರ್ವಹಣಾ ಸಮಿತಿಯು ಆಕ್ಷೇಪಣೆ ವ್ಯಕ್ತಪಡಿಸಿತು.

ಪ್ರಸ್ತಾವಿತ ಉರೂಸ್ ಸ್ಥಳವು ಅರಣ್ಯದ ಪ್ರಮುಖ ಪ್ರದೇಶದೊಳಗೆ ಬರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಅಲ್ಲಿ ಸಾರ್ವಜನಿಕ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತರ ಮೂರು ದರ್ಗಾಗಳಾದ ಭವರ್ ಶಾ, ಚಮನ್ ಶಾ ಮತ್ತು ಶಹೆನ್ ಶಾಗಳನ್ನು ಕೆಡವಲಾಗಿದೆ. ಇವುಗಳೆಲ್ಲಾ ಸುಮಾರು ಅರ್ಧ ಕಿಲೋಮೀಟರ್ ವ್ಯಾಪ್ತಿಯಲ್ಲಿವೆ. ಭಾನುವಾರ ರಾತ್ರಿಯಿಂದ ಪ್ರಾರಂಭವಾದ ಕೆಡವುವಿಕೆ ಕಾರ್ಯವು ಸೋಮವಾರ ಬೆಳಿಗ್ಗೆಯವರೆಗೆ ಮುಂದುವರೆಯಿತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಭಾನುವಾರ ರಾತ್ರಿಯಂದು ಸ್ಥಳೀಯ ಪೊಲೀಸರು ಮತ್ತು ಜಿಲ್ಲಾ ಆಡಳಿತದ ಬೆಂಬಲದೊಂದಿಗೆ ಅರಣ್ಯ ಇಲಾಖೆಯು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಪ್ರಾಂತೀಯ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಸೇರಿದಂತೆ ಭಾರೀ ಪೊಲೀಸ್ ಉಪಸ್ಥಿತಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು ಮತ್ತು ನಾಲ್ಕು ದರ್ಗಾಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸಲಾಯಿತು. ವನ್ಯಜೀವಿಗಳ ದಾಳಿಯ ಅಪಾಯದಿಂದಾಗಿ ಪ್ರದೇಶಕ್ಕೆ ಪ್ರವೇಶ ಸೀಮಿತವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕತರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಬಿ.ಶಿವಶಂಕರ್ ಅವರು, ಅರಣ್ಯ ನ್ಯಾಯಾಲಯವು ಈ ನಿರ್ಮಾಣಗಳನ್ನು “ಅರಣ್ಯ ಭೂಮಿಯ ಮೇಲಿನ ಅತಿಕ್ರಮಣ” ಎಂದು ಘೋಷಿಸಿದೆ ಎಂದು ಹೇಳಿದರು.

ಅರಣ್ಯ ಸಿಬ್ಬಂದಿ, ವಿಶೇಷ ಹುಲಿ ರಕ್ಷಣಾ ಪಡೆ, ಸ್ಥಳೀಯ ಪೊಲೀಸರು ಮತ್ತು ಪ್ರಾಂತೀಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಮಾಧ್ಯಮ ಪ್ರತಿನಿಧಿಗಳನ್ನು ಸ್ಥಳದಿಂದ ಏಕೆ ದೂರವಿಡಲಾಗಿದೆ ಎಂದು ಪ್ರಶ್ನಿಸಿದಾಗ, “ಈ ಪ್ರದೇಶವು ಕಾಡು ಪ್ರಾಣಿಗಳ ಉಪಸ್ಥಿತಿಯು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗುವ ಅರಣ್ಯ ವಲಯದಲ್ಲಿದೆ. ಆದ್ದರಿಂದ ಪ್ರವೇಶವನ್ನು ನಿರ್ಬಂಧಿಸಲಾಗಿದೆ” ಎಂದು ಶಿವಶಂಕರ್ ಹೇಳಿದರು.

ಆದಾಗ್ಯೂ, ಜಿಲ್ಲಾಧಿಕಾರಿ ಮೋನಿಕಾ ರಾಣಿಯವರು ಅರಣ್ಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸ್ಥಳಕ್ಕೆ ಸೀಮಿತ ಪ್ರವೇಶವನ್ನು ಅನುಮತಿಸಬಹುದು ಎಂದು ನಿರ್ದೇಶಿಸಿದರು. ಅರಣ್ಯ ಇಲಾಖೆ ನೀಡಿದ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ದರ್ಗಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿ, ಭೂಮಿಯು ವಕ್ಫ್ ಆಸ್ತಿ ಎಂದು ಪ್ರತಿಪಾದಿಸುವ ದಾಖಲೆಗಳನ್ನು ಸಲ್ಲಿಸಿತು. ತಮ್ಮ ಹಕ್ಕನ್ನು ಬೆಂಬಲಿಸಲು ದರ್ಗಾ ಸಮಿತಿಯು 1986ರಲ್ಲಿ ಭೂಮಿಯನ್ನು ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ ಎಂದು ತೋರಿಸುವ ದಾಖಲೆಗಳನ್ನು ಪ್ರಸ್ತುತಪಡಿಸಿತು.

ಆದಾಗ್ಯೂ, ಅರಣ್ಯ ಇಲಾಖೆ ಅಧಿಕಾರಿಗಳು ಸಮಿತಿಯು 1986ರ ಮೊದಲು ಮಾಲೀಕತ್ವದ ಯಾವುದೇ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಭಾರತೀಯ ಅರಣ್ಯ ಕಾಯ್ದೆಯು ಆ ನೋಂದಣಿಗಿಂತ ಹಿಂದಿನದು. ಈ ನಿರ್ಮಾಣವು ಅರಣ್ಯ ಭೂಮಿಯ ಮೇಲಿನ ಅತಿಕ್ರಮಣ ಎಂದು ನಿರ್ಧರಿಸಲಾಗಿದೆ ಎಂದು ಡಿಎಫ್‌ಒ ಹೇಳಿದರು.

ಜೂನ್ 5ರಂದು ತೆರವು ಆದೇಶ ಹೊರಡಿಸಲಾಯಿತು ಮತ್ತು ಅತಿಕ್ರಮಣವನ್ನು ಸ್ವಯಂಪ್ರೇರಣೆಯಿಂದ ತೆಗೆದುಹಾಕದಿದ್ದಾಗ, ಭಾನುವಾರ ರಾತ್ರಿ ನೆಲಸಮ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
ಲಕ್ಕಡ್ ಶಾ ಬಾಬಾ ದರ್ಗಾವು ಸುಮಾರು 1,000 ವರ್ಷಗಳಷ್ಟು ಹಳೆಯದಾಗಿದ್ದು, ಪ್ರತಿ ಶುಕ್ರವಾರ ಪ್ರಾರ್ಥನೆಗಳು ನಡೆಯುತ್ತಿದ್ದವು. ಜೊತೆಗೆ ಜಿಲ್ಲೆಯಾದ್ಯಂತ ಮತ್ತು ಅದರಾಚೆಗಿನ ಜನರು ಭಾಗವಹಿಸುವ ಬಸಂತ್ ಪಂಚಮಿ ಜಾತ್ರೆಯೂ ನಡೆಯುತ್ತಿತ್ತು ಎಂದು ದರ್ಗಾ ಸಮಿತಿಯ ಕಾರ್ಯದರ್ಶಿ ಎಸ್ರಾರ್ ಅಹ್ಮದ್ ಹೇಳಿದ್ದಾರೆ.

ಏಪ್ರಿಲ್ 30ರಂದು ಅರಣ್ಯ ನ್ಯಾಯಮಂಡಳಿಯಿಂದ ಸಮಿತಿಗೆ ನೋಟಿಸ್ ಬಂದಿದ್ದು, ದೇವಾಲಯಗಳಿರುವ ಭೂಮಿಯನ್ನು “ಅರಣ್ಯ ಭೂಮಿ” ಎಂದು ಘೋಷಿಸಿ, ನಿರ್ಮಾಣಗಳು “ಅತಿಕ್ರಮಣ” ಎಂದು ಕರೆದಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರ: 41 ಲಕ್ಷ ‘ಅನಧಿಕೃತ’ ಮತದಾರರ ಸೇರ್ಪಡೆ ಆರೋಪ; ಆಯೋಗದಿಂದ ಉತ್ತರ ಬಯಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...