Homeಮುಖಪುಟಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

ಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿಯ ಆದಿತ್ಯನಾಥ್ ಆಡಳಿತರ ಬುಲ್ಡೋಜರ್ ದಾಳಿ ಮುಂದುವರೆದಿದ್ದು, ಬಹ್ರೈಚ್‌ನ ಜಿಲ್ಲಾ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧಿಕಾರಿಗಳು ಅಕ್ಟೋಬರ್ 13 ರಂದು ಬಹ್ರೈಚ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ 23 ಜನರ ಮನೆಗಳಿಗೆ ಶುಕ್ರವಾರ ನೋಟಿಸ್ ಅಂಟಿಸಿದ್ದಾರೆ. ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ತೆಗೆದುಹಾಕಬೇಕು ಇಲ್ಲದಿದ್ದರೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನೋಟೀಸ್ ಎಚ್ಚರಿಸಿದೆ. ಬಹ್ರೈಚ್ ಹಿಂಸಾಚಾರ

24 ವರ್ಷದ ರಾಮ್ ಗೋಪಾಲ್ ಮಿಶ್ರಾ ಅವರ ಹತ್ಯೆಯ ನಂತರ ಬಹ್ರೈಚ್‌ನಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರಕ್ಕೆ ಕಾರಣ ಎಂದು ಆರೋಪಿಸಲಾಗಿದ್ದ ಐದು ಜನರಲ್ಲಿ ಒಬ್ಬರಾದ ಅಬ್ದುಲ್ ಹಮೀದ್ ಸೇರಿದಂತೆ 23 ಜನರ ವಿರುದ್ಧ ಬುಲ್ಡೋಜರ್ ಕ್ರಮವನ್ನು ಪ್ರಾರಂಭಿಸುವ ಮೊದಲ ಹೆಜ್ಜೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಲಾಖಾ ಮಾನದಂಡಗಳ ಪ್ರಕಾರ, ಗ್ರಾಮೀಣ ಪ್ರದೇಶದ ಮುಖ್ಯ ಜಿಲ್ಲಾ ರಸ್ತೆಯಲ್ಲಿ ಇಲಾಖೆಯ ಅನುಮತಿಯಿಲ್ಲದೆ, ರಸ್ತೆಯ ಮಧ್ಯಭಾಗದಿಂದ 60 ಅಡಿ ಅಂತರದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಅಕ್ರಮ ನಿರ್ಮಾಣದ ವರ್ಗಕ್ಕೆ ಸೇರುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

“ಬಹ್ರೈಚ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಪೂರ್ವ ಇಲಾಖಾ ಅನುಮತಿಯೊಂದಿಗೆ ನಿರ್ಮಾಣ ಕಾರ್ಯವನ್ನು ಮಾಡಿದ್ದರೆ, ಅದರ ಮೂಲ ಪ್ರತಿಯನ್ನು ತಕ್ಷಣವೇ ಒದಗಿಸಿ, ಇಲ್ಲದಿದ್ದರೆ ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ನೀವೇ ತೆಗೆದುಹಾಕಿ. ಇಲ್ಲವಾದಲ್ಲಿ ಪೊಲೀಸರು ಹಾಗೂ ಜಿಲ್ಲಾಡಳಿತದ ನೆರವಿನೊಂದಿಗೆ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಐವರು ಆರೋಪಿಗಳಾದ ಅಬ್ದುಲ್ ಹಮೀದ್, ಮೊಹಮ್ಮದ್ ಅಫ್ಜಲ್, ಮೊಹಮ್ಮದ್ ಫಹೀಮ್, ಮೊಹಮ್ಮದ್ ಸರ್ಫರಾಜ್ ಮತ್ತು ಮೊಹಮ್ಮದ್ ತಾಲೀಮ್ ಅವರನ್ನು ಗುರುವಾರ ಬಂಧಿಸಲಾಯಿತು. ಆರಂಭದಲ್ಲಿ ಮೂವರನ್ನು ಬಂಧಿಸಲಾಗಿದ್ದರೆ, ಸರ್ಫರಾಜ್ ಮತ್ತು ತಾಲೀಮ್ ಅವರನ್ನು ಎನ್‌ಕೌಂಟರ್ ನಂತರ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ನನ್‌ಪಾರಾ ಪ್ರದೇಶದಲ್ಲಿ ಅವರ ಕಾಲಿಗೆ ಗುಂಡುಗಳನ್ನು ಹಾರಿಸಲಾಗಿತ್ತು. ಪೊಲೀಸರು ಪ್ರತಿಪಾದನೆಯನ್ನು ಅವರ ಕುಟುಂಬಿಕರು ನಿರಾಕರಿಸಿದ್ದು, ಅವರನ್ನು ಮನೆಯಿಂದ ವಶಕ್ಕೆ ಪಡೆದು ಕರೆದುಕೊಂಡು ಹೋಗಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ

23 ಮನೆಗಳಿಗೆ ನೋಟಿಸ್ ಅಂಟಿಸಲಾಗಿದೆ ಎಂದು ಮಹಸಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಹೇಮಂತ್ ಕುಮಾರ್ ಯಾದವ್ ಅವರು ಖಚಿತಪಡಿಸಿದ್ದು, ಪ್ರದೇಶದಲ್ಲಿ ಭಾರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಅಕ್ರಮ ಕಟ್ಟಡಗಳಲ್ಲಿ ವಾಸ ಮಾಡುತ್ತಿರುವ ಅಕ್ರಮ ನಿವಾಸಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅತಿಕ್ರಮಣದಾರರಿಗೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದ್ದು, ಸೂಚನೆ ಮೇರೆಗೆ ಭಾನುವಾರ ಅಥವಾ ಸೋಮವಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಹ್ರೈಚ್‌ನ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಾರ್ಯನಿರ್ವಾಹಕ ಇಂಜಿನಿಯರ್‌ರ ಕಚೇರಿಯಿಂದ ನೋಟಿಸ್ ಅಕ್ಟೋಬರ್ 17, 2024 ರಂದು ನೀಡಲಾಗಿತ್ತು.

ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಸೋಮವಾರ ರಾತ್ರಿಯವರೆಗೆ ಮುಂದುವರೆದಿತ್ತು. ಒಂದು ದಿನದ ನಂತರ ದುರ್ಗಾಪೂಜೆ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಗುಂಡು ಹಾರಾಟ ನಡೆದು ರಾಮ್‌ ಮಿಶ್ರಾ ಅವರ ಹತ್ಯೆಯಾಗಿತ್ತು ಹಾಗೂ ನಾಲ್ಕು ಜನರು ಗಾಯಗೊಂಡಿದ್ದರು. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ನಡೆಸಲಾಗಿದ್ದ ಮೆರವಣಿಗೆಯ ವೇಳೆ ಉದ್ರೇಕಕಾರಿ ಹಾಡುಗಳನ್ನು ನುಡಿಸುವ ಮೂಲಕ ಹಿಂಸಾಚಾರವನ್ನು ಪ್ರಚೋದಿಸಲಾಗಿತ್ತು. ಇದರ ಪರಿಣಾಮ ಹಿಂಸಾಚಾರ ಪ್ರಾರಂಭವಾಗಿತ್ತು ಎಂದು ವರದಿಯಾಗಿದೆ.

ಎಲ್ಲಾ ಐವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನದ ಮೇಲೆ ಜೈಲಿಗೆ ಕಳುಹಿಸಲಾಗಿದೆ. ಈ ನಡುವೆ ನೋಟೀಸ್‌ಗಳು ಆ ಪ್ರದೇಶದ ಜನರಲ್ಲಿ ಆತಂಕ ಮೂಡಿಸಿದೆ. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಈ ಬೆಳವಣಿಗೆಯನ್ನು ಖಂಡಿಸಿವೆ.

ಇದನ್ನೂ ಓದಿ: ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...