Homeಮುಖಪುಟಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

ಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿಯ ಆದಿತ್ಯನಾಥ್ ಆಡಳಿತರ ಬುಲ್ಡೋಜರ್ ದಾಳಿ ಮುಂದುವರೆದಿದ್ದು, ಬಹ್ರೈಚ್‌ನ ಜಿಲ್ಲಾ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧಿಕಾರಿಗಳು ಅಕ್ಟೋಬರ್ 13 ರಂದು ಬಹ್ರೈಚ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ 23 ಜನರ ಮನೆಗಳಿಗೆ ಶುಕ್ರವಾರ ನೋಟಿಸ್ ಅಂಟಿಸಿದ್ದಾರೆ. ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ತೆಗೆದುಹಾಕಬೇಕು ಇಲ್ಲದಿದ್ದರೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನೋಟೀಸ್ ಎಚ್ಚರಿಸಿದೆ. ಬಹ್ರೈಚ್ ಹಿಂಸಾಚಾರ

24 ವರ್ಷದ ರಾಮ್ ಗೋಪಾಲ್ ಮಿಶ್ರಾ ಅವರ ಹತ್ಯೆಯ ನಂತರ ಬಹ್ರೈಚ್‌ನಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರಕ್ಕೆ ಕಾರಣ ಎಂದು ಆರೋಪಿಸಲಾಗಿದ್ದ ಐದು ಜನರಲ್ಲಿ ಒಬ್ಬರಾದ ಅಬ್ದುಲ್ ಹಮೀದ್ ಸೇರಿದಂತೆ 23 ಜನರ ವಿರುದ್ಧ ಬುಲ್ಡೋಜರ್ ಕ್ರಮವನ್ನು ಪ್ರಾರಂಭಿಸುವ ಮೊದಲ ಹೆಜ್ಜೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಲಾಖಾ ಮಾನದಂಡಗಳ ಪ್ರಕಾರ, ಗ್ರಾಮೀಣ ಪ್ರದೇಶದ ಮುಖ್ಯ ಜಿಲ್ಲಾ ರಸ್ತೆಯಲ್ಲಿ ಇಲಾಖೆಯ ಅನುಮತಿಯಿಲ್ಲದೆ, ರಸ್ತೆಯ ಮಧ್ಯಭಾಗದಿಂದ 60 ಅಡಿ ಅಂತರದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಅಕ್ರಮ ನಿರ್ಮಾಣದ ವರ್ಗಕ್ಕೆ ಸೇರುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

“ಬಹ್ರೈಚ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಪೂರ್ವ ಇಲಾಖಾ ಅನುಮತಿಯೊಂದಿಗೆ ನಿರ್ಮಾಣ ಕಾರ್ಯವನ್ನು ಮಾಡಿದ್ದರೆ, ಅದರ ಮೂಲ ಪ್ರತಿಯನ್ನು ತಕ್ಷಣವೇ ಒದಗಿಸಿ, ಇಲ್ಲದಿದ್ದರೆ ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ನೀವೇ ತೆಗೆದುಹಾಕಿ. ಇಲ್ಲವಾದಲ್ಲಿ ಪೊಲೀಸರು ಹಾಗೂ ಜಿಲ್ಲಾಡಳಿತದ ನೆರವಿನೊಂದಿಗೆ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಐವರು ಆರೋಪಿಗಳಾದ ಅಬ್ದುಲ್ ಹಮೀದ್, ಮೊಹಮ್ಮದ್ ಅಫ್ಜಲ್, ಮೊಹಮ್ಮದ್ ಫಹೀಮ್, ಮೊಹಮ್ಮದ್ ಸರ್ಫರಾಜ್ ಮತ್ತು ಮೊಹಮ್ಮದ್ ತಾಲೀಮ್ ಅವರನ್ನು ಗುರುವಾರ ಬಂಧಿಸಲಾಯಿತು. ಆರಂಭದಲ್ಲಿ ಮೂವರನ್ನು ಬಂಧಿಸಲಾಗಿದ್ದರೆ, ಸರ್ಫರಾಜ್ ಮತ್ತು ತಾಲೀಮ್ ಅವರನ್ನು ಎನ್‌ಕೌಂಟರ್ ನಂತರ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ನನ್‌ಪಾರಾ ಪ್ರದೇಶದಲ್ಲಿ ಅವರ ಕಾಲಿಗೆ ಗುಂಡುಗಳನ್ನು ಹಾರಿಸಲಾಗಿತ್ತು. ಪೊಲೀಸರು ಪ್ರತಿಪಾದನೆಯನ್ನು ಅವರ ಕುಟುಂಬಿಕರು ನಿರಾಕರಿಸಿದ್ದು, ಅವರನ್ನು ಮನೆಯಿಂದ ವಶಕ್ಕೆ ಪಡೆದು ಕರೆದುಕೊಂಡು ಹೋಗಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ

23 ಮನೆಗಳಿಗೆ ನೋಟಿಸ್ ಅಂಟಿಸಲಾಗಿದೆ ಎಂದು ಮಹಸಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಹೇಮಂತ್ ಕುಮಾರ್ ಯಾದವ್ ಅವರು ಖಚಿತಪಡಿಸಿದ್ದು, ಪ್ರದೇಶದಲ್ಲಿ ಭಾರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಅಕ್ರಮ ಕಟ್ಟಡಗಳಲ್ಲಿ ವಾಸ ಮಾಡುತ್ತಿರುವ ಅಕ್ರಮ ನಿವಾಸಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅತಿಕ್ರಮಣದಾರರಿಗೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದ್ದು, ಸೂಚನೆ ಮೇರೆಗೆ ಭಾನುವಾರ ಅಥವಾ ಸೋಮವಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಹ್ರೈಚ್‌ನ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಾರ್ಯನಿರ್ವಾಹಕ ಇಂಜಿನಿಯರ್‌ರ ಕಚೇರಿಯಿಂದ ನೋಟಿಸ್ ಅಕ್ಟೋಬರ್ 17, 2024 ರಂದು ನೀಡಲಾಗಿತ್ತು.

ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಸೋಮವಾರ ರಾತ್ರಿಯವರೆಗೆ ಮುಂದುವರೆದಿತ್ತು. ಒಂದು ದಿನದ ನಂತರ ದುರ್ಗಾಪೂಜೆ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಗುಂಡು ಹಾರಾಟ ನಡೆದು ರಾಮ್‌ ಮಿಶ್ರಾ ಅವರ ಹತ್ಯೆಯಾಗಿತ್ತು ಹಾಗೂ ನಾಲ್ಕು ಜನರು ಗಾಯಗೊಂಡಿದ್ದರು. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ನಡೆಸಲಾಗಿದ್ದ ಮೆರವಣಿಗೆಯ ವೇಳೆ ಉದ್ರೇಕಕಾರಿ ಹಾಡುಗಳನ್ನು ನುಡಿಸುವ ಮೂಲಕ ಹಿಂಸಾಚಾರವನ್ನು ಪ್ರಚೋದಿಸಲಾಗಿತ್ತು. ಇದರ ಪರಿಣಾಮ ಹಿಂಸಾಚಾರ ಪ್ರಾರಂಭವಾಗಿತ್ತು ಎಂದು ವರದಿಯಾಗಿದೆ.

ಎಲ್ಲಾ ಐವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನದ ಮೇಲೆ ಜೈಲಿಗೆ ಕಳುಹಿಸಲಾಗಿದೆ. ಈ ನಡುವೆ ನೋಟೀಸ್‌ಗಳು ಆ ಪ್ರದೇಶದ ಜನರಲ್ಲಿ ಆತಂಕ ಮೂಡಿಸಿದೆ. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಈ ಬೆಳವಣಿಗೆಯನ್ನು ಖಂಡಿಸಿವೆ.

ಇದನ್ನೂ ಓದಿ: ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...