Homeಅಂತರಾಷ್ಟ್ರೀಯಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

ಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

- Advertisement -
- Advertisement -

ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಆರೋಪದ ಮೇಲೆ ಬಹ್ರೈನ್‌‌ನ ಅಧಿಕಾರಿಗಳು ಭಾರತೀಯ ರೆಸ್ಟೋರೆಂಟ್‌ ಅನ್ನು ಮುಚ್ಚಿದ್ದಾರೆ ಎಂದು ‘‘ಗಲ್ಫ್‌ ಡೈಲಿ ನ್ಯೂಸ್‌ ಆನ್‌ಲೈನ್‌’’ ವರದಿ ಮಾಡಿದೆ. ಘಟನೆಯ ಕುರಿತು ಬಹ್ರೈನ್‌ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನಗಳ ಪ್ರಾಧಿಕಾರ (BTEA) ತನಿಖೆಯನ್ನು ಪ್ರಾರಂಭಿಸಿದೆ. ಬಹ್ರೈನ್‌ನ ರಾಜಧಾನಿ ಮನಾಮಾದ ಅದ್ಲಿಯಾ ಪ್ರದೇಶದಲ್ಲಿರುವ ‘ಲ್ಯಾಂಟರ್ನ್ಸ್ ರೆಸ್ಟೋರೆಂಟ್‌’ನಲ್ಲಿ ಈ ಘಟನೆ ನಡೆದಿದೆ.

“ಜನರ ವಿರುದ್ಧ ತಾರತಮ್ಯ ಮಾಡುವ ಎಲ್ಲಾ ನಡೆಗಳನ್ನು ನಾವು ತಿರಸ್ಕರಿಸುತ್ತೇವೆ. ವಿಶೇಷವಾಗಿ ಅವರ ರಾಷ್ಟ್ರೀಯ ಗುರುತಿನ ತಾರತಮ್ಯವನ್ನು ನಾವು ತಿರಸ್ಕರಿಸುತ್ತೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ಕರ್ತವ್ಯದಲ್ಲಿದ್ದ ಮ್ಯಾನೇಜರ್‌ ಭಾರತೀಯ ಎಂದು ವರದಿಗಳು ಉಲ್ಲೇಖಿಸಿದೆ. ಆತನನ್ನು ರೆಸ್ಟೋರೆಂಟ್ ಅಮಾನುತುಗೊಳಿಸಿದೆ ಎಂದು ಹೇಳಿದ್ದು, ಘಟನೆಗೆ ವಿಷಾದ ವ್ಯಕ್ತಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಕ್ಷಮೆ ಕೇಳಿರುವ ರೆಸ್ಟೋರೆಂಟ್‌‌, “ಬಹ್ರೈನ್‌ನ ಸುಂದರ ಸಾಮ್ರಾಜ್ಯದಲ್ಲಿ 35 ವರ್ಷಗಳಿಗೂ ಹೆಚ್ಚು ಕಾಲ ನಾವು ಎಲ್ಲಾ ದೇಶಗಳ ಜನರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಲ್ಯಾಂಟರ್ನ್ಸ್‌‌ ಪ್ರತಿಯೊಬ್ಬರೂ ತಮ್ಮ ಕುಟುಂಬಗಳೊಂದಿಗೆ ಬಂದು ಆನಂದಪಡುವ ಮನೆಯ ಅನುಭವ ನೀಡುವ ಒಂದು ಸ್ಥಳವಾಗಿದೆ” ಎಂದು ಹೇಳಿದೆ.

“ಈ ನಿದರ್ಶನದಲ್ಲಿ, ಈಗ ಅಮಾನತುಗೊಂಡಿರುವ ನಿರ್ವಾಹಕರಿಂದ ತಪ್ಪಾಗಿದ್ದು, ಈ ಘಟನೆಯು ನಮ್ಮನ್ನು ಪ್ರತಿನಿಧಿಸುವುದಿಲ್ಲ. ಸದ್ಭಾವನೆಯ ಸೂಚಕವಾಗಿ, ನಾವು ನಮ್ಮ ಎಲ್ಲಾ ಬಹ್ರೈನ್‌ನ ಪೋಷಕರನ್ನು ಮಾರ್ಚ್ 29 ರ ಮಂಗಳವಾರದಂದು ಲ್ಯಾಂಟರ್ನ್ಸ್‌‌ ಸ್ವಾಗತಿಸುತ್ತಿದ್ದು ಅಂದು ಕಾಂಪ್ಲಿಮೆಂಟರಿ ಆಹಾರ ನೀಡಲಿದ್ದೇವೆ” ಎಂದು ಲ್ಯಾಂಟರ್ನ್ಸ್‌‌‌ ರೆಸ್ಟೋರೆಂಟ್‌ ಹೇಳಿದೆ.

 

View this post on Instagram

 

A post shared by LanternsBahrain (@lanternsbahrain)

ಪ್ರವಾಸೋದ್ಯಮ ಸಂಬಂಧಿತ ಸಂಸ್ಥೆಗಳಿಗೆ ಸಂಬಂಧಿಸಿದ 1986 ರ ಡಿಕ್ರಿ ಕಾನೂನು ಸಂಖ್ಯೆ 15 ರ ಪ್ರಕಾರ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ ಎಂದು BTEA ಹೇಳಿದೆ.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ನಡುವೆಯೇ ಬಹ್ರೈನ್‌ನಲ್ಲಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಪ್ರಾಯೋಜಿತ ಇಸ್ಲಾಮೊಫೋಬಿಯಾ ವಿರುದ್ದ ಈಗಾಗಲೆ ಅಂತರಾಷ್ಟ್ರೀಯವಾಗಿ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...