Homeಅಂತರಾಷ್ಟ್ರೀಯಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

ಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

- Advertisement -
- Advertisement -

ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಆರೋಪದ ಮೇಲೆ ಬಹ್ರೈನ್‌‌ನ ಅಧಿಕಾರಿಗಳು ಭಾರತೀಯ ರೆಸ್ಟೋರೆಂಟ್‌ ಅನ್ನು ಮುಚ್ಚಿದ್ದಾರೆ ಎಂದು ‘‘ಗಲ್ಫ್‌ ಡೈಲಿ ನ್ಯೂಸ್‌ ಆನ್‌ಲೈನ್‌’’ ವರದಿ ಮಾಡಿದೆ. ಘಟನೆಯ ಕುರಿತು ಬಹ್ರೈನ್‌ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನಗಳ ಪ್ರಾಧಿಕಾರ (BTEA) ತನಿಖೆಯನ್ನು ಪ್ರಾರಂಭಿಸಿದೆ. ಬಹ್ರೈನ್‌ನ ರಾಜಧಾನಿ ಮನಾಮಾದ ಅದ್ಲಿಯಾ ಪ್ರದೇಶದಲ್ಲಿರುವ ‘ಲ್ಯಾಂಟರ್ನ್ಸ್ ರೆಸ್ಟೋರೆಂಟ್‌’ನಲ್ಲಿ ಈ ಘಟನೆ ನಡೆದಿದೆ.

“ಜನರ ವಿರುದ್ಧ ತಾರತಮ್ಯ ಮಾಡುವ ಎಲ್ಲಾ ನಡೆಗಳನ್ನು ನಾವು ತಿರಸ್ಕರಿಸುತ್ತೇವೆ. ವಿಶೇಷವಾಗಿ ಅವರ ರಾಷ್ಟ್ರೀಯ ಗುರುತಿನ ತಾರತಮ್ಯವನ್ನು ನಾವು ತಿರಸ್ಕರಿಸುತ್ತೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ಕರ್ತವ್ಯದಲ್ಲಿದ್ದ ಮ್ಯಾನೇಜರ್‌ ಭಾರತೀಯ ಎಂದು ವರದಿಗಳು ಉಲ್ಲೇಖಿಸಿದೆ. ಆತನನ್ನು ರೆಸ್ಟೋರೆಂಟ್ ಅಮಾನುತುಗೊಳಿಸಿದೆ ಎಂದು ಹೇಳಿದ್ದು, ಘಟನೆಗೆ ವಿಷಾದ ವ್ಯಕ್ತಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಕ್ಷಮೆ ಕೇಳಿರುವ ರೆಸ್ಟೋರೆಂಟ್‌‌, “ಬಹ್ರೈನ್‌ನ ಸುಂದರ ಸಾಮ್ರಾಜ್ಯದಲ್ಲಿ 35 ವರ್ಷಗಳಿಗೂ ಹೆಚ್ಚು ಕಾಲ ನಾವು ಎಲ್ಲಾ ದೇಶಗಳ ಜನರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಲ್ಯಾಂಟರ್ನ್ಸ್‌‌ ಪ್ರತಿಯೊಬ್ಬರೂ ತಮ್ಮ ಕುಟುಂಬಗಳೊಂದಿಗೆ ಬಂದು ಆನಂದಪಡುವ ಮನೆಯ ಅನುಭವ ನೀಡುವ ಒಂದು ಸ್ಥಳವಾಗಿದೆ” ಎಂದು ಹೇಳಿದೆ.

“ಈ ನಿದರ್ಶನದಲ್ಲಿ, ಈಗ ಅಮಾನತುಗೊಂಡಿರುವ ನಿರ್ವಾಹಕರಿಂದ ತಪ್ಪಾಗಿದ್ದು, ಈ ಘಟನೆಯು ನಮ್ಮನ್ನು ಪ್ರತಿನಿಧಿಸುವುದಿಲ್ಲ. ಸದ್ಭಾವನೆಯ ಸೂಚಕವಾಗಿ, ನಾವು ನಮ್ಮ ಎಲ್ಲಾ ಬಹ್ರೈನ್‌ನ ಪೋಷಕರನ್ನು ಮಾರ್ಚ್ 29 ರ ಮಂಗಳವಾರದಂದು ಲ್ಯಾಂಟರ್ನ್ಸ್‌‌ ಸ್ವಾಗತಿಸುತ್ತಿದ್ದು ಅಂದು ಕಾಂಪ್ಲಿಮೆಂಟರಿ ಆಹಾರ ನೀಡಲಿದ್ದೇವೆ” ಎಂದು ಲ್ಯಾಂಟರ್ನ್ಸ್‌‌‌ ರೆಸ್ಟೋರೆಂಟ್‌ ಹೇಳಿದೆ.

 

View this post on Instagram

 

A post shared by LanternsBahrain (@lanternsbahrain)

ಪ್ರವಾಸೋದ್ಯಮ ಸಂಬಂಧಿತ ಸಂಸ್ಥೆಗಳಿಗೆ ಸಂಬಂಧಿಸಿದ 1986 ರ ಡಿಕ್ರಿ ಕಾನೂನು ಸಂಖ್ಯೆ 15 ರ ಪ್ರಕಾರ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ ಎಂದು BTEA ಹೇಳಿದೆ.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ನಡುವೆಯೇ ಬಹ್ರೈನ್‌ನಲ್ಲಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಪ್ರಾಯೋಜಿತ ಇಸ್ಲಾಮೊಫೋಬಿಯಾ ವಿರುದ್ದ ಈಗಾಗಲೆ ಅಂತರಾಷ್ಟ್ರೀಯವಾಗಿ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...