Homeಅಂತರಾಷ್ಟ್ರೀಯಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

ಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

- Advertisement -
- Advertisement -

ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಆರೋಪದ ಮೇಲೆ ಬಹ್ರೈನ್‌‌ನ ಅಧಿಕಾರಿಗಳು ಭಾರತೀಯ ರೆಸ್ಟೋರೆಂಟ್‌ ಅನ್ನು ಮುಚ್ಚಿದ್ದಾರೆ ಎಂದು ‘‘ಗಲ್ಫ್‌ ಡೈಲಿ ನ್ಯೂಸ್‌ ಆನ್‌ಲೈನ್‌’’ ವರದಿ ಮಾಡಿದೆ. ಘಟನೆಯ ಕುರಿತು ಬಹ್ರೈನ್‌ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನಗಳ ಪ್ರಾಧಿಕಾರ (BTEA) ತನಿಖೆಯನ್ನು ಪ್ರಾರಂಭಿಸಿದೆ. ಬಹ್ರೈನ್‌ನ ರಾಜಧಾನಿ ಮನಾಮಾದ ಅದ್ಲಿಯಾ ಪ್ರದೇಶದಲ್ಲಿರುವ ‘ಲ್ಯಾಂಟರ್ನ್ಸ್ ರೆಸ್ಟೋರೆಂಟ್‌’ನಲ್ಲಿ ಈ ಘಟನೆ ನಡೆದಿದೆ.

“ಜನರ ವಿರುದ್ಧ ತಾರತಮ್ಯ ಮಾಡುವ ಎಲ್ಲಾ ನಡೆಗಳನ್ನು ನಾವು ತಿರಸ್ಕರಿಸುತ್ತೇವೆ. ವಿಶೇಷವಾಗಿ ಅವರ ರಾಷ್ಟ್ರೀಯ ಗುರುತಿನ ತಾರತಮ್ಯವನ್ನು ನಾವು ತಿರಸ್ಕರಿಸುತ್ತೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ಕರ್ತವ್ಯದಲ್ಲಿದ್ದ ಮ್ಯಾನೇಜರ್‌ ಭಾರತೀಯ ಎಂದು ವರದಿಗಳು ಉಲ್ಲೇಖಿಸಿದೆ. ಆತನನ್ನು ರೆಸ್ಟೋರೆಂಟ್ ಅಮಾನುತುಗೊಳಿಸಿದೆ ಎಂದು ಹೇಳಿದ್ದು, ಘಟನೆಗೆ ವಿಷಾದ ವ್ಯಕ್ತಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಕ್ಷಮೆ ಕೇಳಿರುವ ರೆಸ್ಟೋರೆಂಟ್‌‌, “ಬಹ್ರೈನ್‌ನ ಸುಂದರ ಸಾಮ್ರಾಜ್ಯದಲ್ಲಿ 35 ವರ್ಷಗಳಿಗೂ ಹೆಚ್ಚು ಕಾಲ ನಾವು ಎಲ್ಲಾ ದೇಶಗಳ ಜನರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಲ್ಯಾಂಟರ್ನ್ಸ್‌‌ ಪ್ರತಿಯೊಬ್ಬರೂ ತಮ್ಮ ಕುಟುಂಬಗಳೊಂದಿಗೆ ಬಂದು ಆನಂದಪಡುವ ಮನೆಯ ಅನುಭವ ನೀಡುವ ಒಂದು ಸ್ಥಳವಾಗಿದೆ” ಎಂದು ಹೇಳಿದೆ.

“ಈ ನಿದರ್ಶನದಲ್ಲಿ, ಈಗ ಅಮಾನತುಗೊಂಡಿರುವ ನಿರ್ವಾಹಕರಿಂದ ತಪ್ಪಾಗಿದ್ದು, ಈ ಘಟನೆಯು ನಮ್ಮನ್ನು ಪ್ರತಿನಿಧಿಸುವುದಿಲ್ಲ. ಸದ್ಭಾವನೆಯ ಸೂಚಕವಾಗಿ, ನಾವು ನಮ್ಮ ಎಲ್ಲಾ ಬಹ್ರೈನ್‌ನ ಪೋಷಕರನ್ನು ಮಾರ್ಚ್ 29 ರ ಮಂಗಳವಾರದಂದು ಲ್ಯಾಂಟರ್ನ್ಸ್‌‌ ಸ್ವಾಗತಿಸುತ್ತಿದ್ದು ಅಂದು ಕಾಂಪ್ಲಿಮೆಂಟರಿ ಆಹಾರ ನೀಡಲಿದ್ದೇವೆ” ಎಂದು ಲ್ಯಾಂಟರ್ನ್ಸ್‌‌‌ ರೆಸ್ಟೋರೆಂಟ್‌ ಹೇಳಿದೆ.

 

View this post on Instagram

 

A post shared by LanternsBahrain (@lanternsbahrain)

ಪ್ರವಾಸೋದ್ಯಮ ಸಂಬಂಧಿತ ಸಂಸ್ಥೆಗಳಿಗೆ ಸಂಬಂಧಿಸಿದ 1986 ರ ಡಿಕ್ರಿ ಕಾನೂನು ಸಂಖ್ಯೆ 15 ರ ಪ್ರಕಾರ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ ಎಂದು BTEA ಹೇಳಿದೆ.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ನಡುವೆಯೇ ಬಹ್ರೈನ್‌ನಲ್ಲಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಪ್ರಾಯೋಜಿತ ಇಸ್ಲಾಮೊಫೋಬಿಯಾ ವಿರುದ್ದ ಈಗಾಗಲೆ ಅಂತರಾಷ್ಟ್ರೀಯವಾಗಿ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...