Homeಅಂತರಾಷ್ಟ್ರೀಯಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

ಬಹ್ರೈನ್: ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ; ಭಾರತೀಯ ಮೂಲದ ರೆಸ್ಟೋರೆಂಟ್‌ ಮುಚ್ಚಿದ ಅಧಿಕಾರಿಗಳು

- Advertisement -
- Advertisement -

ಶಾಲು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಆರೋಪದ ಮೇಲೆ ಬಹ್ರೈನ್‌‌ನ ಅಧಿಕಾರಿಗಳು ಭಾರತೀಯ ರೆಸ್ಟೋರೆಂಟ್‌ ಅನ್ನು ಮುಚ್ಚಿದ್ದಾರೆ ಎಂದು ‘‘ಗಲ್ಫ್‌ ಡೈಲಿ ನ್ಯೂಸ್‌ ಆನ್‌ಲೈನ್‌’’ ವರದಿ ಮಾಡಿದೆ. ಘಟನೆಯ ಕುರಿತು ಬಹ್ರೈನ್‌ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನಗಳ ಪ್ರಾಧಿಕಾರ (BTEA) ತನಿಖೆಯನ್ನು ಪ್ರಾರಂಭಿಸಿದೆ. ಬಹ್ರೈನ್‌ನ ರಾಜಧಾನಿ ಮನಾಮಾದ ಅದ್ಲಿಯಾ ಪ್ರದೇಶದಲ್ಲಿರುವ ‘ಲ್ಯಾಂಟರ್ನ್ಸ್ ರೆಸ್ಟೋರೆಂಟ್‌’ನಲ್ಲಿ ಈ ಘಟನೆ ನಡೆದಿದೆ.

“ಜನರ ವಿರುದ್ಧ ತಾರತಮ್ಯ ಮಾಡುವ ಎಲ್ಲಾ ನಡೆಗಳನ್ನು ನಾವು ತಿರಸ್ಕರಿಸುತ್ತೇವೆ. ವಿಶೇಷವಾಗಿ ಅವರ ರಾಷ್ಟ್ರೀಯ ಗುರುತಿನ ತಾರತಮ್ಯವನ್ನು ನಾವು ತಿರಸ್ಕರಿಸುತ್ತೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ಕರ್ತವ್ಯದಲ್ಲಿದ್ದ ಮ್ಯಾನೇಜರ್‌ ಭಾರತೀಯ ಎಂದು ವರದಿಗಳು ಉಲ್ಲೇಖಿಸಿದೆ. ಆತನನ್ನು ರೆಸ್ಟೋರೆಂಟ್ ಅಮಾನುತುಗೊಳಿಸಿದೆ ಎಂದು ಹೇಳಿದ್ದು, ಘಟನೆಗೆ ವಿಷಾದ ವ್ಯಕ್ತಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಕ್ಷಮೆ ಕೇಳಿರುವ ರೆಸ್ಟೋರೆಂಟ್‌‌, “ಬಹ್ರೈನ್‌ನ ಸುಂದರ ಸಾಮ್ರಾಜ್ಯದಲ್ಲಿ 35 ವರ್ಷಗಳಿಗೂ ಹೆಚ್ಚು ಕಾಲ ನಾವು ಎಲ್ಲಾ ದೇಶಗಳ ಜನರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಲ್ಯಾಂಟರ್ನ್ಸ್‌‌ ಪ್ರತಿಯೊಬ್ಬರೂ ತಮ್ಮ ಕುಟುಂಬಗಳೊಂದಿಗೆ ಬಂದು ಆನಂದಪಡುವ ಮನೆಯ ಅನುಭವ ನೀಡುವ ಒಂದು ಸ್ಥಳವಾಗಿದೆ” ಎಂದು ಹೇಳಿದೆ.

“ಈ ನಿದರ್ಶನದಲ್ಲಿ, ಈಗ ಅಮಾನತುಗೊಂಡಿರುವ ನಿರ್ವಾಹಕರಿಂದ ತಪ್ಪಾಗಿದ್ದು, ಈ ಘಟನೆಯು ನಮ್ಮನ್ನು ಪ್ರತಿನಿಧಿಸುವುದಿಲ್ಲ. ಸದ್ಭಾವನೆಯ ಸೂಚಕವಾಗಿ, ನಾವು ನಮ್ಮ ಎಲ್ಲಾ ಬಹ್ರೈನ್‌ನ ಪೋಷಕರನ್ನು ಮಾರ್ಚ್ 29 ರ ಮಂಗಳವಾರದಂದು ಲ್ಯಾಂಟರ್ನ್ಸ್‌‌ ಸ್ವಾಗತಿಸುತ್ತಿದ್ದು ಅಂದು ಕಾಂಪ್ಲಿಮೆಂಟರಿ ಆಹಾರ ನೀಡಲಿದ್ದೇವೆ” ಎಂದು ಲ್ಯಾಂಟರ್ನ್ಸ್‌‌‌ ರೆಸ್ಟೋರೆಂಟ್‌ ಹೇಳಿದೆ.

 

View this post on Instagram

 

A post shared by LanternsBahrain (@lanternsbahrain)

ಪ್ರವಾಸೋದ್ಯಮ ಸಂಬಂಧಿತ ಸಂಸ್ಥೆಗಳಿಗೆ ಸಂಬಂಧಿಸಿದ 1986 ರ ಡಿಕ್ರಿ ಕಾನೂನು ಸಂಖ್ಯೆ 15 ರ ಪ್ರಕಾರ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ ಎಂದು BTEA ಹೇಳಿದೆ.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ನಡುವೆಯೇ ಬಹ್ರೈನ್‌ನಲ್ಲಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಪ್ರಾಯೋಜಿತ ಇಸ್ಲಾಮೊಫೋಬಿಯಾ ವಿರುದ್ದ ಈಗಾಗಲೆ ಅಂತರಾಷ್ಟ್ರೀಯವಾಗಿ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....