Homeಕರ್ನಾಟಕ'ಬಹುಜನ' ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ

‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ

- Advertisement -
- Advertisement -

“ಬಹುಜನರೆಂದರೆ ಬಿಜೆಪಿಗೆ ಹಿಂದೂಗಳು; ನಮಗೆ ಬಹುಜನರೆಂದರೆ ಈ ದೇಶದ ದುಡಿಯುವ ಜನ. ಮಧ್ಯಮ ವರ್ಗದ ಹಿಂದೂಗಳನ್ನು ಕೇಂದ್ರ ಬಜೆಟ್‌ ಮೂಲಕ ಓಲೈಸಲಾಗುತ್ತಿದೆ, ಮಾಧ್ಯಮಗಳಲ್ಲೂ ಅದೇ ರೀತಿ ಬಿಂಬಿಸಲಾಗುತ್ತಿದೆ” ಎಂದು ಕಾರ್ಮಿಕ ಮುಖಂಡರಾದ ಮೀನಾಕ್ಷಿ ಸುದರಂ ಹೇಳಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯದ ಬಜೆಟ್ ಎರಡೂ ನಮ್ಮ ಮುಂದಿವೆ; ದೇಶದ ಶ್ರಮಜೀವಿಗಳು ಹಾಗೂ ದುಡಿಯುವ ಜನರ ಪರವಾಗಿ ಒಕ್ಕೂಟ ಸರ್ಕಾರ-ಕರ್ನಾಟಕ ಬಜೆಟ್‌ನಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಹಲವು ವರ್ಷಗಳಿಂದ ಮಾತನಾಡುತ್ತಿದ್ದೇವೆ. ಬಜೆಟ್ ಪೂರ್ವ ಸಭೆಗಳಲ್ಲಿ ನಮ್ಮ ಸಲಹೆಗಳನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ. ದೇಶದ ಎಲ್ಲರನ್ನೂ ಒಳಗೊಂಡ ಬಜೆಟ್ ಹಾಗೂ ನೀತಿಗಳು ಬಿಂಬಿತ ಆಗಬೇಕು ಎಂಬುದು ನಮ್ಮ ಉದ್ದೇಶ. ಆದರೆ, ಆಗುತ್ತಿಲ್ಲ” ಎಂದರು.

“ಕೇಂದ್ರದ ಬಜೆಟ್ ದೇಶದ ದುಡಿಯುವ ಜನರಲ್ಲಿ ಬದಲಾವಣೆ ತರುತ್ತದೆ ಎಂಬ ನಿರೀಕ್ಷೆ ಏನೂ ಇರಲಿಲ್ಲ. ದೇಶದ ಬಹುಜನರಿಗೆ ಮಾನ್ಯತೆ ನೀಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಏಕೆಂದರೆ, ಬಿಜೆಪಿ ಪಾಲಿಗೆ ಬಹುಜನರೆಂದರೆ ಹಿಂದೂಗಳು, ನಮಗೆ ಬಹುಜನರೆಂದರೆ ಈ ದೇಶದ ದುಡಿಯುವ ಜನ. ಮಾಧ್ಯಮಗಳಲ್ಲಿ ಕೂಡ ಇದೇ ರೀತಿ ಬಿಂಬಿಸಲಾಗುತ್ತಿದೆ” ಎಂದು ಹೇಳಿದರು.

“ಮಧ್ಯಮ ವರ್ಗಕ್ಕೆ ಸ್ವರ್ಗವನ್ನೇ ತಂದಿದ್ದೇವೆ ಎಂದು ಮಾಧ್ಯಮಗಳಲ್ಲಿ ಕೇಂದ್ರ ಬಜೆಟ್ ಬಗ್ಗೆ ಚರ್ಚೆಯಾಗುತ್ತಿದೆ. ಎಲ್ಲ ವೇದಿಕೆಗಳಲ್ಲಿ ಈ ಬಗ್ಗೆ ವ್ಯವಸ್ಥಿತವಾಗಿ ಚರ್ಚೆ ಮಾಡುತ್ತಿದ್ದಾರೆ. ಆದರೆ, ಕೇಂದ್ರದ ಬಜೆಟ್‌ನಲ್ಲಿ, ನಮ್ಮ ದೇಶದ ದುಡಿಯುವ ಜನ ಹಾಗೂ ಸ್ವ-ಉದ್ಯೋಗಿಗಳ ವೇತನ ಮಟ್ಟ ಕೋವಿಡ್ ಪೂರ್ವದಲ್ಲಿ ಇದ್ದಷ್ಟೇ 2025 ರಲ್ಲೂ ಇದೆ ಎಂದು ಹೇಳುತ್ತದೆ. ಆದರೆ, ಕಳೆದ 15 ವರ್ಷಗಳಲ್ಲಿ ಕಾರ್ಪೊರೇಟ್ ಕಂಪನಿಗಳ ಆದಾಯ ಹೆಚ್ಚಾಗಿದೆ.. ಅದಕ್ಕೆ ಕಾರಣ ಏನಿರಬಹುದು? ಅವರ ‘ವಿಕಸಿತ ಭಾರತ’ದಲ್ಲಿ ಯಾರು ಅಭಿವೃದ್ಧಿ ಆಗಿದ್ದಾರೆ ಎಂಬ ಪ್ರಶ್ನೆ ಮೂಡುತ್ತದೆ” ಎಂದು ಕೇಂದ್ರ ಬಜೆಟ್ ಕುರಿತು ವಿಶ್ಲೇಷಿಸಿದರು.

“ಸಾರ್ವಜನಿಕ ನಿಧಿಯ ಮೂಲಕ ಖಾಸಗಿ ಕಂಪನಿಗಳ ಲಾಭ ಖಾತ್ರಿಪಡಿಸುವುದಕ್ಕೆ ಸಾಕಷ್ಟು ಕಾರ್ಯಕ್ರಮ ಜಾರಿ ಮಾಡಿ, ಅದಕ್ಕೆ ಬೇರೆಬೇರೆ ಹೆಸರು ಇಟ್ಟಿದ್ದಾರೆ. ಅದರಲ್ಲಿ ಸಾರ್ವಜನಿಕ ಆಸ್ತಿಯನ್ನು ಖಾಸಗಿಯವರಿಗೆ ಉಚಿತವಾಗಿ ನೀಡುವುದು ಸೇರಿದೆ. ಕೇವಲ ಸ್ಥಿರ ಆಸ್ತಿಗಳು ಮಾತ್ರವಲ್ಲ, ಅದರಲ್ಲಿ ನಾವು ಕೊಡುವ ತೆರಿಗೆ ಹಣವೂ ಸೇರಿದೆ. ನಾವು ದುಡಿಯುವ ಒಂದು ರೂಪಾಯಿಯಲ್ಲಿ ಕನಿಷ್ಠ 20 ಪೈಸೆ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಕೊಡುತ್ತಿದ್ದೇವೆ. ಪಬ್ಲಿಕ್ ಫಂಡ್ಸ್‌ ಫಾರ್ ಪ್ರೈವೇಟ್ (ಪಿಪಿಪಿ) ಮತ್ತು ಹಣಕಾಸಿನ ಶಿಸ್ತು ಹೆಸರಿನಲ್ಲಿ ಇದನ್ನೆಲ್ಲಾ ಮಾಡಲಾಗುತ್ತಿದೆ. ಆದಾಯಕ್ಕಿಂತ ಖರ್ಚಿನ ಪ್ರಮಾಣ ಶೇ.3ಕ್ಕೆ ಇಳಿದರೆ ಮಾತ್ರ ಶಿಸ್ತುಬದ್ಧ ಆರ್ಥಿಕತೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದು, ಕಳೆದ ಬಜೆಟ್‌ನಲ್ಲಿ ನಮ್ಮ ಆದಾಯಕ್ಕಿಂತ ಖರ್ಚಿನ ಪ್ರಮಾಣ ಶೇ.5ರಷ್ಟಿತ್ತು. ಅದನ್ನು ಈ ಬಜೆಟ್‌ನಲ್ಲಿ ಸರಿದೂಗಿಸಲಾಗಿದೆ ಎಂದು ಕೇಂದ್ರ ಹೇಳಿದೆ” ಎಂದರು.

“ಕಾರ್ಪೊರೇಟ್ ಕಂಪನಿಗಳು ಕೇಂದ್ರಕ್ಕೆ ಪಾವತಿಸುತ್ತಿರುವ ತೆರಿಗೆ ಕೇವಲ ಶೇ.10 ಮಾತ್ರ. ಆದರೆ, ಜನರ ಪರೋಕ್ಷ ತೆರಿಗೆ ಮೂಲಕ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿದೆ. ಬಡವರಮೇಲೆ ತೆರಿಗೆ ಹೊರೆ ಹೆಚ್ಚಿಸಿ, ಶ್ರೀಮಮಂತರಿಗೆ ವಿನಾಯಿತಿ ನೀಡಲಾಗುತ್ತಿದೆ” ಎಂದು ಹೇಳಿದರು.

“ರಾಷ್ಟ್ರದ ಅಭಿವೃದ್ಧಿ ಉದ್ದೇಶದಿಂದ ಹಲವು ಹೊಸ ಸ್ವರೂಪದ ನಿಧಿಗಳನ್ನು ಸ್ಥಾಪನೆ ಮಾಡಬೇಕು ಎಂದು ಸರ್ಕಾರ ಹೇಳುತ್ತಿದೆ. ಸರ್ಕಾರದ ಹಣ ಹೂಡಿ, ಅದರ ಮೂಲಕ ದೇಶದ ಅಭಿವೃದ್ಧಿ ಮಾಡುವುದು ಇದರ ಉದ್ದೇಶ. ಅದರಲ್ಲಿ ನಾಗರೀಕರ ಸವಾಲುಗಳ ನಿಧಿ, ಮೂಲಭೂತ ಸೌಕರ್ಯ ನಿಧಿ ಸೇರಿದಂತೆ ಹಲವು ನಿಧಿಗಳಿಗೆ ಕೇಂದ್ರ ಸರ್ಕಾರ ಹಣ ನೀಡುತ್ತದೆ. ಈ ಫಂಡ್ ನಿರ್ವಹಣೆ ಮಾಡುವುದು ‘ಪ್ರೈವೇಟ್ ಪಬ್ಲಿಕ್’ ಸಹಯೋಗದಲ್ಲಿ. ಅಂದರೆ, ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವುದು ಇದರ ಉದ್ದೇಶ” ಎಂದು ವಿವರಿಸಿದರು.

“ಕೇಂದ್ರದ ಬಜೆಟ್‌ನಲ್ಲಿ ಉತ್ಪಾದಕರಿಗೆ ಕೊಡುವ ಪ್ರೋತ್ಸಾಹ ವಾರ್ಷಿಕ ಧನ ₹2 ಲಕ್ಷ ಕೋಟಿ. ಆದರೆ, ಅದನ್ನು ಕಾರ್ಮಿಕರಿಗೆ ಕೊಡುವುದಿಲ್ಲ, ಹೊಸದಾಗಿ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯೋಗದಾತರಿಗೆ ನೀಡಲಾಗುತ್ತದೆ. ಸರ್ಕಾರ ನೇರವಾಗಿ ಬಡವರಿಗೆ ಹಣ ಕೊಡುವುದಕ್ಕೆ ತಯಾರಿಲ್ಲ. ಮನರೇಗಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಹಣ ಹೆಚ್ಚಿಸಿಲ್ಲ. ಬಂಡವಾಳ ಹೂಡಿದವರಿಗೆ ರಿಯಾಯಿತಿ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ₹76 ಸಾವಿರ ಕೋಟಿ ನಿಗದಿ ಮಾಡಿದೆ” ” ಎಂದರು.

ಕೇಂದ್ರವನ್ನು ಅನುಸರಿಸಿರುವ ಸಿದ್ದರಾಮಯ್ಯ

“ಕೇಂದ್ರದ ಬಜೆಟ್ ಅನ್ನೇ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲೂ ಅನುಕರಿಸಿದ್ದಾರೆ. ಇಡೀ ಬಜೆಟ್‌ನಲ್ಲಿ ಕಾರ್ಮಿಕರಿಗಾಗಿ ಕೊಟ್ಟಿರುವುದು, ಸೆಸ್ ಮೂಲಕ ಸಂಗ್ರಹವಾಗುವ ಹಣದ ಯೋಜನೆಗಳು ಮಾತ್ರ. ಇಡೀ ಬಜೆಟ್‌ನಲ್ಲಿ ಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ” ಎಂದು ಹೇಳಿದರು.

“ಕರ್ನಾಟಕದ ಆರ್ಥಿಕ ಸಮೀಕ್ಷೆ ಪ್ರಕಾರ, ನಮ್ಮ ರಾಜ್ಯದ ಸರಾಸರಿ ತಲಾ ಆದಾಯ (ಜಿಡಿಪಿ) ₹3.32 ಲಕ್ಷ ಎಂದು ಹೇಳಿದೆ. ಕೇಂದ್ರ ಸರ್ಕಾರದ ಜಿಡಿಪಿ ₹1.85 ಸಾವಿರ ಇದೆ. ದೇಶಕ್ಕಿಂತ ನಾವು ಹೆಚ್ಚಿನ ತಲಾ ಆದಾಯ ಹೊಂದಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ, ಎಲ್ಲರೂ ಇಷ್ಟೇ ಆದಾಯ ಗಳಿಸುತ್ತಿದ್ದಾರೆ ಎಂದು ನಂಬಲು ಸಾಧ್ಯವಿಲ್ಲ” ಎಂದು ಹೇಳಿದರು.

“ಬೆಂಗಳೂರಿನಲ್ಲಿ ವಾಸಿಸುವವರ ಆದಾಯ ಅಂದಾಜು ₹7 ಲಕ್ಷ ಇದ್ದರೆ, ಕಲಬುರಗಿಯಲ್ಲಿ ₹1.6 ಲಕ್ಷ ಇದೆ. ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಯಾವುದೇ ತಲಾ ಆದಾಯ ₹3 ಲಕ್ಷ ದಾಟುತ್ತಿಲ್ಲ. ಎಲ್ಲಿ ಆದಾಯ ಹೆಚ್ಚಿದೆಯೋ ಅಲ್ಲಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಡಲಾಗಿದೆ. ಆದರೆ, ಅಭಿವೃದ್ಧಿಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಪ್ರೋತ್ಸಾಹಕ ಯೋಜನೆಗಳು ಇಲ್ಲ” ಎಂದು ಆರೋಪಿಸಿದರು.

“ಅಸಂಘಟಿತ ಕಾರ್ಮಿಕರನ್ನು ಲೆಕ್ಕ ಮಾಡುವುದಕ್ಕೆ ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಬೇಕು ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ರಾಜ್ಯದಲ್ಲಿ 1.89 ಲಕ್ಷ ಜನ ನೋದದಣಿ ಆಗಿದ್ದಾರೆ. ಇವರಿಗಾಗಿ ಸರ್ಕಾರ ಬಜೆಟ್‌ನಲ್ಲಿ ಮಾಡಿವುದಾದರೂ ಏನು? ಆರು ಕೋಟಿ ಜನರ ಒಂದಲ್ಲ ಒಂದು ಕುಟುಂಬದಲ್ಲಿ ಶ್ರಮಜೀವಿಗಳು ಇದ್ದಾರೆ. ಅವರಿಲ್ಲದೆ ರಾಜ್ಯ ಸರ್ಕಾರ ನಡೆಯುವುದಿಲ್ಲ” ಎಂದರು.

“ಕೇಂದ್ರ ಸರ್ಕಾರದ ಜಿಎಸ್‌ಟಿ ಸಂಗ್ರಹಕ್ಕೆ ಕರ್ನಾಟಕದ ಜನ ಹೆಚ್ಚಿನ ಕೊಡುಗೆ ನೀಡುತ್ತಿದ್ದೇವೆ. ಆದರೆ, ನಮಗೆ ನ್ಯಾಯಯುತ ಪಾಲು ಸಿಗುತ್ತಿಲ್ಲ. ಕೇಂದ್ರ ಸರ್ಕಾರ ನಮಗೆ ಕೊಡಬೇಕಾಗಿರುವುದನ್ನು ರಾಜ್ಯ ಸರ್ಕಾರ ಪಟ್ಟಿ ಮಾಡಿದೆ. ತೆರಿಗೆ ಜೊತೆಗೆ ಕೇಂದ್ರ ಸರ್ಕಾರ ಸೆಸ್‌ ಹಾಕಿದ್ದು, ಅದರಲ್ಲಿ ರಾಜ್ಯ ಸರ್ಕಾರಕ್ಕೆ ಪಾಲಿಲ್ಲ. ಕರ್ನಾಟಕ ಸರ್ಕಾರ ಯಾವ ತರ್ಕದಲ್ಲಿ ಪಾಲು ಕೇಳುತ್ತಿದೆಯೋ,  ಅದೇ ತರ್ಕದಲ್ಲಿ ನಾವು ಕಾರ್ಮಿಕರ ಪಾಲು ಕೇಳುತ್ತಿದ್ದೇವೆ. ರಾಜ್ಯದಲ್ಲಿ ದುಡಿಯುತ್ತಿರುವ ರೈತರು ಹಾಗೂ ಕಾರ್ಮಿಕರ ಒಂದು ರೂಪಾಯಿ ಕೂಲಿಯ ಉತ್ಪಾದನೆಯ ಮೌಲ್ಯ ಏಳು ರೂಪಾಯಿ ಇದೆ. ಏಳು ರೂಪಾಯಿ ಮೌಲ್ಯ ಉತ್ಪಾದನೆ ಮಾಡುವ ಕಾರ್ಮಿಕರಿಗೆ ಒಂದು ರೂಪಾಯಿ ಕೊಡುವುದು ಎಷ್ಟು ಸರಿ? ಕೇಂದ್ರದ ತೆರಿಗೆ ಪಾಲಿನ ತರ್ಕವನ್ನೇ ಇಲ್ಲೂ ಪಾಲಿಸಬೇಕು. ನಿಮ್ಮ ತೆರಿಗೆ ತರ್ಕವನ್ನು ನಾವು ಬೆಂಬಲಿಸುತ್ತೇವೆ; ನಮ್ಮ ತರ್ಕವನ್ನೂ ನೀವೂ ಬೆಂಬಲಿಸಬೇಕು” ಎಂದು ಆಗ್ರಹಿಸಿದರು.

ವೇದಿಕೆಯಲ್ಲಿ ಎಐಸಿಸಿಯುಸಿ ರಾಜ್ಯಾಧ್ಯಕ್ಷರಾದ ಪಿಪಿ ಅಪ್ಪಣ್ಣ, ಐಎನ್‌ಟಿಯುಸಿ ರಾಜ್ಯ ಕಾರ್ಯದರ್ಶಿ ರಾಜ್ಯ ಕಾರ್ಯದರ್ಶಿ ಶಾಮಣ್ಣ ರೆಡ್ಡಿ, ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಕೆವಿ ಭಟ್, ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಸತ್ಯಾನಂದ, ಎಐಸಿಸಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಇದ್ದರು.

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...