Homeಕರ್ನಾಟಕ'ಬಹುಜನ' ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ

‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ

- Advertisement -
- Advertisement -

“ಬಹುಜನರೆಂದರೆ ಬಿಜೆಪಿಗೆ ಹಿಂದೂಗಳು; ನಮಗೆ ಬಹುಜನರೆಂದರೆ ಈ ದೇಶದ ದುಡಿಯುವ ಜನ. ಮಧ್ಯಮ ವರ್ಗದ ಹಿಂದೂಗಳನ್ನು ಕೇಂದ್ರ ಬಜೆಟ್‌ ಮೂಲಕ ಓಲೈಸಲಾಗುತ್ತಿದೆ, ಮಾಧ್ಯಮಗಳಲ್ಲೂ ಅದೇ ರೀತಿ ಬಿಂಬಿಸಲಾಗುತ್ತಿದೆ” ಎಂದು ಕಾರ್ಮಿಕ ಮುಖಂಡರಾದ ಮೀನಾಕ್ಷಿ ಸುದರಂ ಹೇಳಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯದ ಬಜೆಟ್ ಎರಡೂ ನಮ್ಮ ಮುಂದಿವೆ; ದೇಶದ ಶ್ರಮಜೀವಿಗಳು ಹಾಗೂ ದುಡಿಯುವ ಜನರ ಪರವಾಗಿ ಒಕ್ಕೂಟ ಸರ್ಕಾರ-ಕರ್ನಾಟಕ ಬಜೆಟ್‌ನಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಹಲವು ವರ್ಷಗಳಿಂದ ಮಾತನಾಡುತ್ತಿದ್ದೇವೆ. ಬಜೆಟ್ ಪೂರ್ವ ಸಭೆಗಳಲ್ಲಿ ನಮ್ಮ ಸಲಹೆಗಳನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ. ದೇಶದ ಎಲ್ಲರನ್ನೂ ಒಳಗೊಂಡ ಬಜೆಟ್ ಹಾಗೂ ನೀತಿಗಳು ಬಿಂಬಿತ ಆಗಬೇಕು ಎಂಬುದು ನಮ್ಮ ಉದ್ದೇಶ. ಆದರೆ, ಆಗುತ್ತಿಲ್ಲ” ಎಂದರು.

“ಕೇಂದ್ರದ ಬಜೆಟ್ ದೇಶದ ದುಡಿಯುವ ಜನರಲ್ಲಿ ಬದಲಾವಣೆ ತರುತ್ತದೆ ಎಂಬ ನಿರೀಕ್ಷೆ ಏನೂ ಇರಲಿಲ್ಲ. ದೇಶದ ಬಹುಜನರಿಗೆ ಮಾನ್ಯತೆ ನೀಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಏಕೆಂದರೆ, ಬಿಜೆಪಿ ಪಾಲಿಗೆ ಬಹುಜನರೆಂದರೆ ಹಿಂದೂಗಳು, ನಮಗೆ ಬಹುಜನರೆಂದರೆ ಈ ದೇಶದ ದುಡಿಯುವ ಜನ. ಮಾಧ್ಯಮಗಳಲ್ಲಿ ಕೂಡ ಇದೇ ರೀತಿ ಬಿಂಬಿಸಲಾಗುತ್ತಿದೆ” ಎಂದು ಹೇಳಿದರು.

“ಮಧ್ಯಮ ವರ್ಗಕ್ಕೆ ಸ್ವರ್ಗವನ್ನೇ ತಂದಿದ್ದೇವೆ ಎಂದು ಮಾಧ್ಯಮಗಳಲ್ಲಿ ಕೇಂದ್ರ ಬಜೆಟ್ ಬಗ್ಗೆ ಚರ್ಚೆಯಾಗುತ್ತಿದೆ. ಎಲ್ಲ ವೇದಿಕೆಗಳಲ್ಲಿ ಈ ಬಗ್ಗೆ ವ್ಯವಸ್ಥಿತವಾಗಿ ಚರ್ಚೆ ಮಾಡುತ್ತಿದ್ದಾರೆ. ಆದರೆ, ಕೇಂದ್ರದ ಬಜೆಟ್‌ನಲ್ಲಿ, ನಮ್ಮ ದೇಶದ ದುಡಿಯುವ ಜನ ಹಾಗೂ ಸ್ವ-ಉದ್ಯೋಗಿಗಳ ವೇತನ ಮಟ್ಟ ಕೋವಿಡ್ ಪೂರ್ವದಲ್ಲಿ ಇದ್ದಷ್ಟೇ 2025 ರಲ್ಲೂ ಇದೆ ಎಂದು ಹೇಳುತ್ತದೆ. ಆದರೆ, ಕಳೆದ 15 ವರ್ಷಗಳಲ್ಲಿ ಕಾರ್ಪೊರೇಟ್ ಕಂಪನಿಗಳ ಆದಾಯ ಹೆಚ್ಚಾಗಿದೆ.. ಅದಕ್ಕೆ ಕಾರಣ ಏನಿರಬಹುದು? ಅವರ ‘ವಿಕಸಿತ ಭಾರತ’ದಲ್ಲಿ ಯಾರು ಅಭಿವೃದ್ಧಿ ಆಗಿದ್ದಾರೆ ಎಂಬ ಪ್ರಶ್ನೆ ಮೂಡುತ್ತದೆ” ಎಂದು ಕೇಂದ್ರ ಬಜೆಟ್ ಕುರಿತು ವಿಶ್ಲೇಷಿಸಿದರು.

“ಸಾರ್ವಜನಿಕ ನಿಧಿಯ ಮೂಲಕ ಖಾಸಗಿ ಕಂಪನಿಗಳ ಲಾಭ ಖಾತ್ರಿಪಡಿಸುವುದಕ್ಕೆ ಸಾಕಷ್ಟು ಕಾರ್ಯಕ್ರಮ ಜಾರಿ ಮಾಡಿ, ಅದಕ್ಕೆ ಬೇರೆಬೇರೆ ಹೆಸರು ಇಟ್ಟಿದ್ದಾರೆ. ಅದರಲ್ಲಿ ಸಾರ್ವಜನಿಕ ಆಸ್ತಿಯನ್ನು ಖಾಸಗಿಯವರಿಗೆ ಉಚಿತವಾಗಿ ನೀಡುವುದು ಸೇರಿದೆ. ಕೇವಲ ಸ್ಥಿರ ಆಸ್ತಿಗಳು ಮಾತ್ರವಲ್ಲ, ಅದರಲ್ಲಿ ನಾವು ಕೊಡುವ ತೆರಿಗೆ ಹಣವೂ ಸೇರಿದೆ. ನಾವು ದುಡಿಯುವ ಒಂದು ರೂಪಾಯಿಯಲ್ಲಿ ಕನಿಷ್ಠ 20 ಪೈಸೆ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಕೊಡುತ್ತಿದ್ದೇವೆ. ಪಬ್ಲಿಕ್ ಫಂಡ್ಸ್‌ ಫಾರ್ ಪ್ರೈವೇಟ್ (ಪಿಪಿಪಿ) ಮತ್ತು ಹಣಕಾಸಿನ ಶಿಸ್ತು ಹೆಸರಿನಲ್ಲಿ ಇದನ್ನೆಲ್ಲಾ ಮಾಡಲಾಗುತ್ತಿದೆ. ಆದಾಯಕ್ಕಿಂತ ಖರ್ಚಿನ ಪ್ರಮಾಣ ಶೇ.3ಕ್ಕೆ ಇಳಿದರೆ ಮಾತ್ರ ಶಿಸ್ತುಬದ್ಧ ಆರ್ಥಿಕತೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದು, ಕಳೆದ ಬಜೆಟ್‌ನಲ್ಲಿ ನಮ್ಮ ಆದಾಯಕ್ಕಿಂತ ಖರ್ಚಿನ ಪ್ರಮಾಣ ಶೇ.5ರಷ್ಟಿತ್ತು. ಅದನ್ನು ಈ ಬಜೆಟ್‌ನಲ್ಲಿ ಸರಿದೂಗಿಸಲಾಗಿದೆ ಎಂದು ಕೇಂದ್ರ ಹೇಳಿದೆ” ಎಂದರು.

“ಕಾರ್ಪೊರೇಟ್ ಕಂಪನಿಗಳು ಕೇಂದ್ರಕ್ಕೆ ಪಾವತಿಸುತ್ತಿರುವ ತೆರಿಗೆ ಕೇವಲ ಶೇ.10 ಮಾತ್ರ. ಆದರೆ, ಜನರ ಪರೋಕ್ಷ ತೆರಿಗೆ ಮೂಲಕ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿದೆ. ಬಡವರಮೇಲೆ ತೆರಿಗೆ ಹೊರೆ ಹೆಚ್ಚಿಸಿ, ಶ್ರೀಮಮಂತರಿಗೆ ವಿನಾಯಿತಿ ನೀಡಲಾಗುತ್ತಿದೆ” ಎಂದು ಹೇಳಿದರು.

“ರಾಷ್ಟ್ರದ ಅಭಿವೃದ್ಧಿ ಉದ್ದೇಶದಿಂದ ಹಲವು ಹೊಸ ಸ್ವರೂಪದ ನಿಧಿಗಳನ್ನು ಸ್ಥಾಪನೆ ಮಾಡಬೇಕು ಎಂದು ಸರ್ಕಾರ ಹೇಳುತ್ತಿದೆ. ಸರ್ಕಾರದ ಹಣ ಹೂಡಿ, ಅದರ ಮೂಲಕ ದೇಶದ ಅಭಿವೃದ್ಧಿ ಮಾಡುವುದು ಇದರ ಉದ್ದೇಶ. ಅದರಲ್ಲಿ ನಾಗರೀಕರ ಸವಾಲುಗಳ ನಿಧಿ, ಮೂಲಭೂತ ಸೌಕರ್ಯ ನಿಧಿ ಸೇರಿದಂತೆ ಹಲವು ನಿಧಿಗಳಿಗೆ ಕೇಂದ್ರ ಸರ್ಕಾರ ಹಣ ನೀಡುತ್ತದೆ. ಈ ಫಂಡ್ ನಿರ್ವಹಣೆ ಮಾಡುವುದು ‘ಪ್ರೈವೇಟ್ ಪಬ್ಲಿಕ್’ ಸಹಯೋಗದಲ್ಲಿ. ಅಂದರೆ, ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವುದು ಇದರ ಉದ್ದೇಶ” ಎಂದು ವಿವರಿಸಿದರು.

“ಕೇಂದ್ರದ ಬಜೆಟ್‌ನಲ್ಲಿ ಉತ್ಪಾದಕರಿಗೆ ಕೊಡುವ ಪ್ರೋತ್ಸಾಹ ವಾರ್ಷಿಕ ಧನ ₹2 ಲಕ್ಷ ಕೋಟಿ. ಆದರೆ, ಅದನ್ನು ಕಾರ್ಮಿಕರಿಗೆ ಕೊಡುವುದಿಲ್ಲ, ಹೊಸದಾಗಿ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯೋಗದಾತರಿಗೆ ನೀಡಲಾಗುತ್ತದೆ. ಸರ್ಕಾರ ನೇರವಾಗಿ ಬಡವರಿಗೆ ಹಣ ಕೊಡುವುದಕ್ಕೆ ತಯಾರಿಲ್ಲ. ಮನರೇಗಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಹಣ ಹೆಚ್ಚಿಸಿಲ್ಲ. ಬಂಡವಾಳ ಹೂಡಿದವರಿಗೆ ರಿಯಾಯಿತಿ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ₹76 ಸಾವಿರ ಕೋಟಿ ನಿಗದಿ ಮಾಡಿದೆ” ” ಎಂದರು.

ಕೇಂದ್ರವನ್ನು ಅನುಸರಿಸಿರುವ ಸಿದ್ದರಾಮಯ್ಯ

“ಕೇಂದ್ರದ ಬಜೆಟ್ ಅನ್ನೇ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲೂ ಅನುಕರಿಸಿದ್ದಾರೆ. ಇಡೀ ಬಜೆಟ್‌ನಲ್ಲಿ ಕಾರ್ಮಿಕರಿಗಾಗಿ ಕೊಟ್ಟಿರುವುದು, ಸೆಸ್ ಮೂಲಕ ಸಂಗ್ರಹವಾಗುವ ಹಣದ ಯೋಜನೆಗಳು ಮಾತ್ರ. ಇಡೀ ಬಜೆಟ್‌ನಲ್ಲಿ ಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ” ಎಂದು ಹೇಳಿದರು.

“ಕರ್ನಾಟಕದ ಆರ್ಥಿಕ ಸಮೀಕ್ಷೆ ಪ್ರಕಾರ, ನಮ್ಮ ರಾಜ್ಯದ ಸರಾಸರಿ ತಲಾ ಆದಾಯ (ಜಿಡಿಪಿ) ₹3.32 ಲಕ್ಷ ಎಂದು ಹೇಳಿದೆ. ಕೇಂದ್ರ ಸರ್ಕಾರದ ಜಿಡಿಪಿ ₹1.85 ಸಾವಿರ ಇದೆ. ದೇಶಕ್ಕಿಂತ ನಾವು ಹೆಚ್ಚಿನ ತಲಾ ಆದಾಯ ಹೊಂದಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ, ಎಲ್ಲರೂ ಇಷ್ಟೇ ಆದಾಯ ಗಳಿಸುತ್ತಿದ್ದಾರೆ ಎಂದು ನಂಬಲು ಸಾಧ್ಯವಿಲ್ಲ” ಎಂದು ಹೇಳಿದರು.

“ಬೆಂಗಳೂರಿನಲ್ಲಿ ವಾಸಿಸುವವರ ಆದಾಯ ಅಂದಾಜು ₹7 ಲಕ್ಷ ಇದ್ದರೆ, ಕಲಬುರಗಿಯಲ್ಲಿ ₹1.6 ಲಕ್ಷ ಇದೆ. ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಯಾವುದೇ ತಲಾ ಆದಾಯ ₹3 ಲಕ್ಷ ದಾಟುತ್ತಿಲ್ಲ. ಎಲ್ಲಿ ಆದಾಯ ಹೆಚ್ಚಿದೆಯೋ ಅಲ್ಲಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಡಲಾಗಿದೆ. ಆದರೆ, ಅಭಿವೃದ್ಧಿಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಪ್ರೋತ್ಸಾಹಕ ಯೋಜನೆಗಳು ಇಲ್ಲ” ಎಂದು ಆರೋಪಿಸಿದರು.

“ಅಸಂಘಟಿತ ಕಾರ್ಮಿಕರನ್ನು ಲೆಕ್ಕ ಮಾಡುವುದಕ್ಕೆ ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಬೇಕು ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ರಾಜ್ಯದಲ್ಲಿ 1.89 ಲಕ್ಷ ಜನ ನೋದದಣಿ ಆಗಿದ್ದಾರೆ. ಇವರಿಗಾಗಿ ಸರ್ಕಾರ ಬಜೆಟ್‌ನಲ್ಲಿ ಮಾಡಿವುದಾದರೂ ಏನು? ಆರು ಕೋಟಿ ಜನರ ಒಂದಲ್ಲ ಒಂದು ಕುಟುಂಬದಲ್ಲಿ ಶ್ರಮಜೀವಿಗಳು ಇದ್ದಾರೆ. ಅವರಿಲ್ಲದೆ ರಾಜ್ಯ ಸರ್ಕಾರ ನಡೆಯುವುದಿಲ್ಲ” ಎಂದರು.

“ಕೇಂದ್ರ ಸರ್ಕಾರದ ಜಿಎಸ್‌ಟಿ ಸಂಗ್ರಹಕ್ಕೆ ಕರ್ನಾಟಕದ ಜನ ಹೆಚ್ಚಿನ ಕೊಡುಗೆ ನೀಡುತ್ತಿದ್ದೇವೆ. ಆದರೆ, ನಮಗೆ ನ್ಯಾಯಯುತ ಪಾಲು ಸಿಗುತ್ತಿಲ್ಲ. ಕೇಂದ್ರ ಸರ್ಕಾರ ನಮಗೆ ಕೊಡಬೇಕಾಗಿರುವುದನ್ನು ರಾಜ್ಯ ಸರ್ಕಾರ ಪಟ್ಟಿ ಮಾಡಿದೆ. ತೆರಿಗೆ ಜೊತೆಗೆ ಕೇಂದ್ರ ಸರ್ಕಾರ ಸೆಸ್‌ ಹಾಕಿದ್ದು, ಅದರಲ್ಲಿ ರಾಜ್ಯ ಸರ್ಕಾರಕ್ಕೆ ಪಾಲಿಲ್ಲ. ಕರ್ನಾಟಕ ಸರ್ಕಾರ ಯಾವ ತರ್ಕದಲ್ಲಿ ಪಾಲು ಕೇಳುತ್ತಿದೆಯೋ,  ಅದೇ ತರ್ಕದಲ್ಲಿ ನಾವು ಕಾರ್ಮಿಕರ ಪಾಲು ಕೇಳುತ್ತಿದ್ದೇವೆ. ರಾಜ್ಯದಲ್ಲಿ ದುಡಿಯುತ್ತಿರುವ ರೈತರು ಹಾಗೂ ಕಾರ್ಮಿಕರ ಒಂದು ರೂಪಾಯಿ ಕೂಲಿಯ ಉತ್ಪಾದನೆಯ ಮೌಲ್ಯ ಏಳು ರೂಪಾಯಿ ಇದೆ. ಏಳು ರೂಪಾಯಿ ಮೌಲ್ಯ ಉತ್ಪಾದನೆ ಮಾಡುವ ಕಾರ್ಮಿಕರಿಗೆ ಒಂದು ರೂಪಾಯಿ ಕೊಡುವುದು ಎಷ್ಟು ಸರಿ? ಕೇಂದ್ರದ ತೆರಿಗೆ ಪಾಲಿನ ತರ್ಕವನ್ನೇ ಇಲ್ಲೂ ಪಾಲಿಸಬೇಕು. ನಿಮ್ಮ ತೆರಿಗೆ ತರ್ಕವನ್ನು ನಾವು ಬೆಂಬಲಿಸುತ್ತೇವೆ; ನಮ್ಮ ತರ್ಕವನ್ನೂ ನೀವೂ ಬೆಂಬಲಿಸಬೇಕು” ಎಂದು ಆಗ್ರಹಿಸಿದರು.

ವೇದಿಕೆಯಲ್ಲಿ ಎಐಸಿಸಿಯುಸಿ ರಾಜ್ಯಾಧ್ಯಕ್ಷರಾದ ಪಿಪಿ ಅಪ್ಪಣ್ಣ, ಐಎನ್‌ಟಿಯುಸಿ ರಾಜ್ಯ ಕಾರ್ಯದರ್ಶಿ ರಾಜ್ಯ ಕಾರ್ಯದರ್ಶಿ ಶಾಮಣ್ಣ ರೆಡ್ಡಿ, ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಕೆವಿ ಭಟ್, ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಸತ್ಯಾನಂದ, ಎಐಸಿಸಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಇದ್ದರು.

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...