Homeಕರ್ನಾಟಕ'ಬಹುಜನ' ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ

‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ

- Advertisement -
- Advertisement -

“ಬಹುಜನರೆಂದರೆ ಬಿಜೆಪಿಗೆ ಹಿಂದೂಗಳು; ನಮಗೆ ಬಹುಜನರೆಂದರೆ ಈ ದೇಶದ ದುಡಿಯುವ ಜನ. ಮಧ್ಯಮ ವರ್ಗದ ಹಿಂದೂಗಳನ್ನು ಕೇಂದ್ರ ಬಜೆಟ್‌ ಮೂಲಕ ಓಲೈಸಲಾಗುತ್ತಿದೆ, ಮಾಧ್ಯಮಗಳಲ್ಲೂ ಅದೇ ರೀತಿ ಬಿಂಬಿಸಲಾಗುತ್ತಿದೆ” ಎಂದು ಕಾರ್ಮಿಕ ಮುಖಂಡರಾದ ಮೀನಾಕ್ಷಿ ಸುದರಂ ಹೇಳಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯದ ಬಜೆಟ್ ಎರಡೂ ನಮ್ಮ ಮುಂದಿವೆ; ದೇಶದ ಶ್ರಮಜೀವಿಗಳು ಹಾಗೂ ದುಡಿಯುವ ಜನರ ಪರವಾಗಿ ಒಕ್ಕೂಟ ಸರ್ಕಾರ-ಕರ್ನಾಟಕ ಬಜೆಟ್‌ನಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಹಲವು ವರ್ಷಗಳಿಂದ ಮಾತನಾಡುತ್ತಿದ್ದೇವೆ. ಬಜೆಟ್ ಪೂರ್ವ ಸಭೆಗಳಲ್ಲಿ ನಮ್ಮ ಸಲಹೆಗಳನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ. ದೇಶದ ಎಲ್ಲರನ್ನೂ ಒಳಗೊಂಡ ಬಜೆಟ್ ಹಾಗೂ ನೀತಿಗಳು ಬಿಂಬಿತ ಆಗಬೇಕು ಎಂಬುದು ನಮ್ಮ ಉದ್ದೇಶ. ಆದರೆ, ಆಗುತ್ತಿಲ್ಲ” ಎಂದರು.

“ಕೇಂದ್ರದ ಬಜೆಟ್ ದೇಶದ ದುಡಿಯುವ ಜನರಲ್ಲಿ ಬದಲಾವಣೆ ತರುತ್ತದೆ ಎಂಬ ನಿರೀಕ್ಷೆ ಏನೂ ಇರಲಿಲ್ಲ. ದೇಶದ ಬಹುಜನರಿಗೆ ಮಾನ್ಯತೆ ನೀಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಏಕೆಂದರೆ, ಬಿಜೆಪಿ ಪಾಲಿಗೆ ಬಹುಜನರೆಂದರೆ ಹಿಂದೂಗಳು, ನಮಗೆ ಬಹುಜನರೆಂದರೆ ಈ ದೇಶದ ದುಡಿಯುವ ಜನ. ಮಾಧ್ಯಮಗಳಲ್ಲಿ ಕೂಡ ಇದೇ ರೀತಿ ಬಿಂಬಿಸಲಾಗುತ್ತಿದೆ” ಎಂದು ಹೇಳಿದರು.

“ಮಧ್ಯಮ ವರ್ಗಕ್ಕೆ ಸ್ವರ್ಗವನ್ನೇ ತಂದಿದ್ದೇವೆ ಎಂದು ಮಾಧ್ಯಮಗಳಲ್ಲಿ ಕೇಂದ್ರ ಬಜೆಟ್ ಬಗ್ಗೆ ಚರ್ಚೆಯಾಗುತ್ತಿದೆ. ಎಲ್ಲ ವೇದಿಕೆಗಳಲ್ಲಿ ಈ ಬಗ್ಗೆ ವ್ಯವಸ್ಥಿತವಾಗಿ ಚರ್ಚೆ ಮಾಡುತ್ತಿದ್ದಾರೆ. ಆದರೆ, ಕೇಂದ್ರದ ಬಜೆಟ್‌ನಲ್ಲಿ, ನಮ್ಮ ದೇಶದ ದುಡಿಯುವ ಜನ ಹಾಗೂ ಸ್ವ-ಉದ್ಯೋಗಿಗಳ ವೇತನ ಮಟ್ಟ ಕೋವಿಡ್ ಪೂರ್ವದಲ್ಲಿ ಇದ್ದಷ್ಟೇ 2025 ರಲ್ಲೂ ಇದೆ ಎಂದು ಹೇಳುತ್ತದೆ. ಆದರೆ, ಕಳೆದ 15 ವರ್ಷಗಳಲ್ಲಿ ಕಾರ್ಪೊರೇಟ್ ಕಂಪನಿಗಳ ಆದಾಯ ಹೆಚ್ಚಾಗಿದೆ.. ಅದಕ್ಕೆ ಕಾರಣ ಏನಿರಬಹುದು? ಅವರ ‘ವಿಕಸಿತ ಭಾರತ’ದಲ್ಲಿ ಯಾರು ಅಭಿವೃದ್ಧಿ ಆಗಿದ್ದಾರೆ ಎಂಬ ಪ್ರಶ್ನೆ ಮೂಡುತ್ತದೆ” ಎಂದು ಕೇಂದ್ರ ಬಜೆಟ್ ಕುರಿತು ವಿಶ್ಲೇಷಿಸಿದರು.

“ಸಾರ್ವಜನಿಕ ನಿಧಿಯ ಮೂಲಕ ಖಾಸಗಿ ಕಂಪನಿಗಳ ಲಾಭ ಖಾತ್ರಿಪಡಿಸುವುದಕ್ಕೆ ಸಾಕಷ್ಟು ಕಾರ್ಯಕ್ರಮ ಜಾರಿ ಮಾಡಿ, ಅದಕ್ಕೆ ಬೇರೆಬೇರೆ ಹೆಸರು ಇಟ್ಟಿದ್ದಾರೆ. ಅದರಲ್ಲಿ ಸಾರ್ವಜನಿಕ ಆಸ್ತಿಯನ್ನು ಖಾಸಗಿಯವರಿಗೆ ಉಚಿತವಾಗಿ ನೀಡುವುದು ಸೇರಿದೆ. ಕೇವಲ ಸ್ಥಿರ ಆಸ್ತಿಗಳು ಮಾತ್ರವಲ್ಲ, ಅದರಲ್ಲಿ ನಾವು ಕೊಡುವ ತೆರಿಗೆ ಹಣವೂ ಸೇರಿದೆ. ನಾವು ದುಡಿಯುವ ಒಂದು ರೂಪಾಯಿಯಲ್ಲಿ ಕನಿಷ್ಠ 20 ಪೈಸೆ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಕೊಡುತ್ತಿದ್ದೇವೆ. ಪಬ್ಲಿಕ್ ಫಂಡ್ಸ್‌ ಫಾರ್ ಪ್ರೈವೇಟ್ (ಪಿಪಿಪಿ) ಮತ್ತು ಹಣಕಾಸಿನ ಶಿಸ್ತು ಹೆಸರಿನಲ್ಲಿ ಇದನ್ನೆಲ್ಲಾ ಮಾಡಲಾಗುತ್ತಿದೆ. ಆದಾಯಕ್ಕಿಂತ ಖರ್ಚಿನ ಪ್ರಮಾಣ ಶೇ.3ಕ್ಕೆ ಇಳಿದರೆ ಮಾತ್ರ ಶಿಸ್ತುಬದ್ಧ ಆರ್ಥಿಕತೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದು, ಕಳೆದ ಬಜೆಟ್‌ನಲ್ಲಿ ನಮ್ಮ ಆದಾಯಕ್ಕಿಂತ ಖರ್ಚಿನ ಪ್ರಮಾಣ ಶೇ.5ರಷ್ಟಿತ್ತು. ಅದನ್ನು ಈ ಬಜೆಟ್‌ನಲ್ಲಿ ಸರಿದೂಗಿಸಲಾಗಿದೆ ಎಂದು ಕೇಂದ್ರ ಹೇಳಿದೆ” ಎಂದರು.

“ಕಾರ್ಪೊರೇಟ್ ಕಂಪನಿಗಳು ಕೇಂದ್ರಕ್ಕೆ ಪಾವತಿಸುತ್ತಿರುವ ತೆರಿಗೆ ಕೇವಲ ಶೇ.10 ಮಾತ್ರ. ಆದರೆ, ಜನರ ಪರೋಕ್ಷ ತೆರಿಗೆ ಮೂಲಕ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿದೆ. ಬಡವರಮೇಲೆ ತೆರಿಗೆ ಹೊರೆ ಹೆಚ್ಚಿಸಿ, ಶ್ರೀಮಮಂತರಿಗೆ ವಿನಾಯಿತಿ ನೀಡಲಾಗುತ್ತಿದೆ” ಎಂದು ಹೇಳಿದರು.

“ರಾಷ್ಟ್ರದ ಅಭಿವೃದ್ಧಿ ಉದ್ದೇಶದಿಂದ ಹಲವು ಹೊಸ ಸ್ವರೂಪದ ನಿಧಿಗಳನ್ನು ಸ್ಥಾಪನೆ ಮಾಡಬೇಕು ಎಂದು ಸರ್ಕಾರ ಹೇಳುತ್ತಿದೆ. ಸರ್ಕಾರದ ಹಣ ಹೂಡಿ, ಅದರ ಮೂಲಕ ದೇಶದ ಅಭಿವೃದ್ಧಿ ಮಾಡುವುದು ಇದರ ಉದ್ದೇಶ. ಅದರಲ್ಲಿ ನಾಗರೀಕರ ಸವಾಲುಗಳ ನಿಧಿ, ಮೂಲಭೂತ ಸೌಕರ್ಯ ನಿಧಿ ಸೇರಿದಂತೆ ಹಲವು ನಿಧಿಗಳಿಗೆ ಕೇಂದ್ರ ಸರ್ಕಾರ ಹಣ ನೀಡುತ್ತದೆ. ಈ ಫಂಡ್ ನಿರ್ವಹಣೆ ಮಾಡುವುದು ‘ಪ್ರೈವೇಟ್ ಪಬ್ಲಿಕ್’ ಸಹಯೋಗದಲ್ಲಿ. ಅಂದರೆ, ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವುದು ಇದರ ಉದ್ದೇಶ” ಎಂದು ವಿವರಿಸಿದರು.

“ಕೇಂದ್ರದ ಬಜೆಟ್‌ನಲ್ಲಿ ಉತ್ಪಾದಕರಿಗೆ ಕೊಡುವ ಪ್ರೋತ್ಸಾಹ ವಾರ್ಷಿಕ ಧನ ₹2 ಲಕ್ಷ ಕೋಟಿ. ಆದರೆ, ಅದನ್ನು ಕಾರ್ಮಿಕರಿಗೆ ಕೊಡುವುದಿಲ್ಲ, ಹೊಸದಾಗಿ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯೋಗದಾತರಿಗೆ ನೀಡಲಾಗುತ್ತದೆ. ಸರ್ಕಾರ ನೇರವಾಗಿ ಬಡವರಿಗೆ ಹಣ ಕೊಡುವುದಕ್ಕೆ ತಯಾರಿಲ್ಲ. ಮನರೇಗಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಹಣ ಹೆಚ್ಚಿಸಿಲ್ಲ. ಬಂಡವಾಳ ಹೂಡಿದವರಿಗೆ ರಿಯಾಯಿತಿ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ₹76 ಸಾವಿರ ಕೋಟಿ ನಿಗದಿ ಮಾಡಿದೆ” ” ಎಂದರು.

ಕೇಂದ್ರವನ್ನು ಅನುಸರಿಸಿರುವ ಸಿದ್ದರಾಮಯ್ಯ

“ಕೇಂದ್ರದ ಬಜೆಟ್ ಅನ್ನೇ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲೂ ಅನುಕರಿಸಿದ್ದಾರೆ. ಇಡೀ ಬಜೆಟ್‌ನಲ್ಲಿ ಕಾರ್ಮಿಕರಿಗಾಗಿ ಕೊಟ್ಟಿರುವುದು, ಸೆಸ್ ಮೂಲಕ ಸಂಗ್ರಹವಾಗುವ ಹಣದ ಯೋಜನೆಗಳು ಮಾತ್ರ. ಇಡೀ ಬಜೆಟ್‌ನಲ್ಲಿ ಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ” ಎಂದು ಹೇಳಿದರು.

“ಕರ್ನಾಟಕದ ಆರ್ಥಿಕ ಸಮೀಕ್ಷೆ ಪ್ರಕಾರ, ನಮ್ಮ ರಾಜ್ಯದ ಸರಾಸರಿ ತಲಾ ಆದಾಯ (ಜಿಡಿಪಿ) ₹3.32 ಲಕ್ಷ ಎಂದು ಹೇಳಿದೆ. ಕೇಂದ್ರ ಸರ್ಕಾರದ ಜಿಡಿಪಿ ₹1.85 ಸಾವಿರ ಇದೆ. ದೇಶಕ್ಕಿಂತ ನಾವು ಹೆಚ್ಚಿನ ತಲಾ ಆದಾಯ ಹೊಂದಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ, ಎಲ್ಲರೂ ಇಷ್ಟೇ ಆದಾಯ ಗಳಿಸುತ್ತಿದ್ದಾರೆ ಎಂದು ನಂಬಲು ಸಾಧ್ಯವಿಲ್ಲ” ಎಂದು ಹೇಳಿದರು.

“ಬೆಂಗಳೂರಿನಲ್ಲಿ ವಾಸಿಸುವವರ ಆದಾಯ ಅಂದಾಜು ₹7 ಲಕ್ಷ ಇದ್ದರೆ, ಕಲಬುರಗಿಯಲ್ಲಿ ₹1.6 ಲಕ್ಷ ಇದೆ. ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಯಾವುದೇ ತಲಾ ಆದಾಯ ₹3 ಲಕ್ಷ ದಾಟುತ್ತಿಲ್ಲ. ಎಲ್ಲಿ ಆದಾಯ ಹೆಚ್ಚಿದೆಯೋ ಅಲ್ಲಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಡಲಾಗಿದೆ. ಆದರೆ, ಅಭಿವೃದ್ಧಿಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಪ್ರೋತ್ಸಾಹಕ ಯೋಜನೆಗಳು ಇಲ್ಲ” ಎಂದು ಆರೋಪಿಸಿದರು.

“ಅಸಂಘಟಿತ ಕಾರ್ಮಿಕರನ್ನು ಲೆಕ್ಕ ಮಾಡುವುದಕ್ಕೆ ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಬೇಕು ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ರಾಜ್ಯದಲ್ಲಿ 1.89 ಲಕ್ಷ ಜನ ನೋದದಣಿ ಆಗಿದ್ದಾರೆ. ಇವರಿಗಾಗಿ ಸರ್ಕಾರ ಬಜೆಟ್‌ನಲ್ಲಿ ಮಾಡಿವುದಾದರೂ ಏನು? ಆರು ಕೋಟಿ ಜನರ ಒಂದಲ್ಲ ಒಂದು ಕುಟುಂಬದಲ್ಲಿ ಶ್ರಮಜೀವಿಗಳು ಇದ್ದಾರೆ. ಅವರಿಲ್ಲದೆ ರಾಜ್ಯ ಸರ್ಕಾರ ನಡೆಯುವುದಿಲ್ಲ” ಎಂದರು.

“ಕೇಂದ್ರ ಸರ್ಕಾರದ ಜಿಎಸ್‌ಟಿ ಸಂಗ್ರಹಕ್ಕೆ ಕರ್ನಾಟಕದ ಜನ ಹೆಚ್ಚಿನ ಕೊಡುಗೆ ನೀಡುತ್ತಿದ್ದೇವೆ. ಆದರೆ, ನಮಗೆ ನ್ಯಾಯಯುತ ಪಾಲು ಸಿಗುತ್ತಿಲ್ಲ. ಕೇಂದ್ರ ಸರ್ಕಾರ ನಮಗೆ ಕೊಡಬೇಕಾಗಿರುವುದನ್ನು ರಾಜ್ಯ ಸರ್ಕಾರ ಪಟ್ಟಿ ಮಾಡಿದೆ. ತೆರಿಗೆ ಜೊತೆಗೆ ಕೇಂದ್ರ ಸರ್ಕಾರ ಸೆಸ್‌ ಹಾಕಿದ್ದು, ಅದರಲ್ಲಿ ರಾಜ್ಯ ಸರ್ಕಾರಕ್ಕೆ ಪಾಲಿಲ್ಲ. ಕರ್ನಾಟಕ ಸರ್ಕಾರ ಯಾವ ತರ್ಕದಲ್ಲಿ ಪಾಲು ಕೇಳುತ್ತಿದೆಯೋ,  ಅದೇ ತರ್ಕದಲ್ಲಿ ನಾವು ಕಾರ್ಮಿಕರ ಪಾಲು ಕೇಳುತ್ತಿದ್ದೇವೆ. ರಾಜ್ಯದಲ್ಲಿ ದುಡಿಯುತ್ತಿರುವ ರೈತರು ಹಾಗೂ ಕಾರ್ಮಿಕರ ಒಂದು ರೂಪಾಯಿ ಕೂಲಿಯ ಉತ್ಪಾದನೆಯ ಮೌಲ್ಯ ಏಳು ರೂಪಾಯಿ ಇದೆ. ಏಳು ರೂಪಾಯಿ ಮೌಲ್ಯ ಉತ್ಪಾದನೆ ಮಾಡುವ ಕಾರ್ಮಿಕರಿಗೆ ಒಂದು ರೂಪಾಯಿ ಕೊಡುವುದು ಎಷ್ಟು ಸರಿ? ಕೇಂದ್ರದ ತೆರಿಗೆ ಪಾಲಿನ ತರ್ಕವನ್ನೇ ಇಲ್ಲೂ ಪಾಲಿಸಬೇಕು. ನಿಮ್ಮ ತೆರಿಗೆ ತರ್ಕವನ್ನು ನಾವು ಬೆಂಬಲಿಸುತ್ತೇವೆ; ನಮ್ಮ ತರ್ಕವನ್ನೂ ನೀವೂ ಬೆಂಬಲಿಸಬೇಕು” ಎಂದು ಆಗ್ರಹಿಸಿದರು.

ವೇದಿಕೆಯಲ್ಲಿ ಎಐಸಿಸಿಯುಸಿ ರಾಜ್ಯಾಧ್ಯಕ್ಷರಾದ ಪಿಪಿ ಅಪ್ಪಣ್ಣ, ಐಎನ್‌ಟಿಯುಸಿ ರಾಜ್ಯ ಕಾರ್ಯದರ್ಶಿ ರಾಜ್ಯ ಕಾರ್ಯದರ್ಶಿ ಶಾಮಣ್ಣ ರೆಡ್ಡಿ, ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಕೆವಿ ಭಟ್, ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಸತ್ಯಾನಂದ, ಎಐಸಿಸಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಇದ್ದರು.

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...