Homeಕರ್ನಾಟಕಬಿಜೆಪಿ ಹೋರಾಟ ಬೆಂಬಲಿಸುತ್ತಿರುವುದು ಬಹುಜನ ವಿದ್ಯಾರ್ಥಿ ಸಂಘವಲ್ಲ; ಎನ್‌.ಮಹೇಶ್‌ ಬಣದ ಭಾರತೀಯ ವಿದ್ಯಾರ್ಥಿ ಸಂಘ!

ಬಿಜೆಪಿ ಹೋರಾಟ ಬೆಂಬಲಿಸುತ್ತಿರುವುದು ಬಹುಜನ ವಿದ್ಯಾರ್ಥಿ ಸಂಘವಲ್ಲ; ಎನ್‌.ಮಹೇಶ್‌ ಬಣದ ಭಾರತೀಯ ವಿದ್ಯಾರ್ಥಿ ಸಂಘ!

- Advertisement -
- Advertisement -

ಕಾಂಗ್ರೆಸ್ ಸರ್ಕಾರದ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ದುರ್ಬಳಕೆ ಖಂಡಿಸಿ ಹಲವು ದಲಿತ ಸಂಘಟನೆಗಳ ಮುಖಂಡರು ಪ್ರತಿಭಟಿಸಿದ್ದಾರೆ. ಹಿಂದಿನ ಬಿಜೆಪಿ ಮತ್ತು ಈಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕಾಯ್ದೆಯ 7’ಡಿ’ ಮತ್ತು 7’ಸಿ’ ಮೂಲಕ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿರುವ ಸಾವಿರಾರು ಕೋಟಿ ಹಣವನ್ನು ವಾಪಸ್‌ ಪಡೆದು, ಪರಿಶಿಷ್ಟರ ಅಭಿವೃದ್ಧಿಗೆ ಬಳಸಬೇಕು ಎಂದು ಸರ್ಕಾರದ ಮೇಲೆ ಒತ್ತಡವನ್ನೂ ಹೇರುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಕೆಲವೇ ಕೆಲವು ದಲಿತ ಮುಖಂಡರು ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ‘ಬಿವಿಎಸ್‌’ ಕೂಡ ಬಿಜೆಪಿ ನೇತೃತ್ವದ ಹೋರಾಟದಲ್ಲಿ ಭಾಗಿಯಾಗುತ್ತಿದೆ ಎಂಬ ಚರ್ಚೆಗಳು ನಡೆಯುತ್ತಿವೆ.

ಆದರೆ, “ಬಿಜೆಪಿ ಹೋರಾಟ ಬೆಂಬಲಿಸುತ್ತಿರುವುದು ‘ಬಹುಜನ ವಿದ್ಯಾರ್ಥಿ ಸಂಘವಲ್ಲ..’; ಬದಲಿಗೆ, ಇತ್ತೀಚೆಗೆ ಹುಟ್ಟಿಕೊಂಡ ಬಿಜೆಪಿಯ ಎನ್‌.ಮಹೇಶ್‌ ಬೆಂಬಲಿಗರ ಭಾರತೀಯ ವಿದ್ಯಾರ್ಥಿ ಸಂಘ” ಎಂದು ಬಹುಜನ ವಿದ್ಯಾರ್ಥಿ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಕನಕಪುರ ಶಿವಣ್ಣ ಹಾಗೂ ಕೃಷ್ಣಮೂರ್ತಿ ಚಮರಂ ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿ ಕನಕಪುರ ಶಿವಣ್ಣ, “ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್‌) 2000ನೇ ಇಸವಿಯಲ್ಲಿ ಅಧಿಕೃತವಾಗಿ ಆರಂಭವಾಯಿತು.. ಅದಕ್ಕೂ ಮೊದಲು ನಾವು ಕನಕಪುರದಲ್ಲಿ ‘ಬಹುಜನ್ ಸ್ಟೂಡೆಂಟ್‌ ಫೆಡರೇಷನ್’ (ಬಿಎಸ್‌ಎಫ್‌) ಹೆಸರಿನಲ್ಲಿ ಸಂಘಟನೆ ಆರಂಭಿಸಿದ್ದೆವು. ನಮ್ಮ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ಎನ್‌.ಮಹೇಶ್‌, ಇದನ್ನು ರಾಜ್ಯವ್ಯಾಪಿ ವಿಸ್ತರಿಸೋಣ ಎಂದು ಹೇಳಿ, ‘ಫೆಡರೇಷನ್ ಕಮ್ಯುನಿಸ್ಟ್‌ ಸಂಘಟನೆಯನ್ನು ಹೋಲುತ್ತದೆ, ಬೌದ್ಧ ಧರ್ಮಕ್ಕೆ ಹೋಲುವಂತೆ ನಾವು ಕನ್ನಡದಲ್ಲೇ ಸಂಘ ಎಂದು ಮರುನಾಮಕರಣ ಮಾಡೋಣ’ ಎಂದು ಹೇಳಿದ್ದರು. 2000ನೇ ಇಸವಿಯಲ್ಲಿ ನಡೆದ ಮೈಸೂರಿನ ಸಮಾವೇಶದಲ್ಲಿ ನಾವು ಬಹುಜನ ವಿದ್ಯಾರ್ಥಿ ಸಂಘಟನೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆವು” ಎಂದು ಹೇಳಿದರು.

“2019ರ ವರೆಗೂ ಬಹುಜನ ವಿದ್ಯಾರ್ಥಿ ಸಂಘಟನೆಯಾಗಿಯೇ ಇತ್ತು, 2018ರಲ್ಲಿ ಎನ್‌. ಮಹೇಶ್‌ ಅವರನ್ನು ಬಿಎಸ್‌ಪಿಯಿಂದ ಉಚ್ಛಾಟಿಸಲಾಯಿತು. ಬಳಿಕ, ಅವರ ಕೆಲ ಬೆಂಬಲಿಗರು ಬಿವಿಎಸ್‌ ಅನ್ನು ಭಾರತೀಯ ವಿದ್ಯಾರ್ಥಿ ಸಂಘ ಎಂದು ಮರುನಾಮಕರಣ ಮಾಡೋಣ ಎಂಬ ಪ್ರಸ್ತಾಪ ಇಟ್ಟರು. ಆದರೆ, ಬಿವಿಎಸ್‌ನ ಹಳೆಯ ನಾಯಕರು ವಿರೋಧಿಸಿದರು. ‘ಬಹುಜನ ವಿದ್ಯಾರ್ಥಿ ಸಂಘ’ವಾಗಿಯೇ ಮುಂದುವರಿಯಬೇಕು ಎಂದು ಪ್ರತಿಪಾದಿಸಿದೆವು. ನಂತರ, ಅವರ ಬೆಂಬಲಿಗ ತಂಡವು, ನಾವು ಪ್ರತ್ಯೇಕ ‘ಭಾರತೀಯ..’ ಮಾಡಿಕೊಳ್ಳುತ್ತೇವೆ ಎಂದು ಹೇಳಿ ಮುಂದುವರಿದರು. ಅವರ ಸಂಘಟನೆ ಘೋಷಣೆಯಾದ ಬಳಿಕ 2022ರವರೆಗೆ ಕೋವಿಡ್ ಕಾರಣದಿಂದ ಯಾವುದೇ ಚಟುವಟಿಕೆ ನಡೆದಿಲ್ಲ. ಭಾರತೀಯ ವಿದ್ಯಾರ್ಥಿ ಸಂಘಕ್ಕೆ 25 ವರ್ಷವಾಗಿದೆ ಎಂದು ಅವರು ಇತ್ತೀಚೆಗೆ ಮಾತನಾಡಲು ಆರಂಭಿಸಿದ್ದಾರೆ. 25 ವರ್ಷ ಪೂರೈಸಿರುವುದು ಬಹುಜನ ವಿದ್ಯಾರ್ಥಿ ಸಂಘ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

“ಭಾರತೀಯ ವಿದ್ಯಾರ್ಥಿ ಸಂಘಕ್ಕೆ ಕೇವಲ ಐದು ವರ್ಷವಾಗಿದೆ, 25 ವರ್ಷ ಪೂರೈಸಿರುವುದು ಬಹುಜನ ವಿದ್ಯಾರ್ಥಿ ಸಂಘ ಎಂದು ಹೇಳಿದ ನಾವು, ಜನವರಿ 26ನೇ ತಾರೀಕು ಮೈಸೂರು ಮಹಾರಾಜ ಕಾಲೇಜಿನ ಸೆಂಟ್ರಲ್ ಹಾಲ್‌ನಲ್ಲಿ ರಜತ ಮಹೋತ್ಸವ ಮಾಡಿದ್ದೇವೆ. ಭಾರತೀಯ ವಿದ್ಯಾರ್ಥಿ ಸಂಘಕ್ಕೂ 25 ವರ್ಷ ಆಗಿದೆ ಎಂದು ಮಹೇಶ್‌ ಬೆಂಬಲಿಗರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಮಾವೇಶ ಮಾಡಿರುವವರು ಎನ್‌. ಮಹೇಶ್‌ ಹಿಂಬಾಲಕರ ಗುಂಪು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮಹೇಶ್‌ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸದೇ ಇದ್ದರೂ, ಅದರ ಸಂಪೂರ್ಣ ಹೊಣೆ ಹೊತ್ತಿದ್ದಾರೆ. ಈಗ ಬಿಜೆಪಿಗೆ ಬೆಂಬಲಿಸಿರುವ ಹರಿರಾಮ್ ಕೂಡ ಅದೇ ತಂಡದಲ್ಲಿದ್ದಾರೆ. ಭಾರತೀಯ ವಿದ್ಯಾರ್ಥಿ ಸಂಘದ ಮುಖಂಡರು ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಆಂತರಿಕವಾಗಿ ಅವರೆಲ್ಲಾ ಬಿಜೆಪಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು, ಭಾರತೀಯ ವಿದ್ಯಾರ್ಥಿ ಸಂಘದ ಕಾರ್ಯಕ್ರಮ ನಡೆದಾಗ ಬಿಜೆಪಿಯ ಎಸ್‌ಸಿ ಮೋರ್ಚಾದ ಬಹುತೇಕ ಕಾರ್ಯಕರ್ತರು ಭಾಗವಹಿಸಿದ್ದರು” ಎಂದರು.

“ಮಹೇಶಣ್ಣ ಎಲ್ಲಿರುತ್ತಾರೋ, ನಾವು ಅಲ್ಲಿರುತ್ತೇವೆ ಎಂದು ಹೇಳುವ ಒಂದು ಗುಂಪಿದೆ. ಇದರಿಂದ ನಮಗೇನು ತೊಂದರೆ ಇಲ್ಲ, ರಾಜಕೀಯ ಮಾಡಬೇಕಾದರೆ ಇದೆಲ್ಲಾ ಸಾಮಾನ್ಯ. ಆದರೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ-ನಿಲುವು ಏನಿತ್ತು ಎಂಬುದು ಮುಖ್ಯವಾಗುತ್ತದೆ. ಬಿಜೆಪಿ ಸೇರಿದ ಬಳಿಕ ಮಹೇಶಣ್ಣ ಮಾತನಾಡಿರುವ ಹಲವು ವಿಡಿಯೋಗಳನ್ನು ನಾವೆಲ್ಲಾ ನೋಡಿದ್ದೇವೆ, ‘ಸಾವರ್ಕರ್‌ ಮತ್ತು ಹಿಂದೂ ಧರ್ಮದ ಕುರಿತು ಅಂಬೇಡ್ಕರ್ ಮೃದು ಧೋರಣೆ ಹೊಂದಿದ್ದರು, ಆರ್‌ಎಸ್‌ಎಸ್‌ ಬಗ್ಗೆ ನನಗೆ ಸರಿಯಾದ ಮಾಹಿತಿ ಇರಲಿಲ್ಲ. ಆದ್ದರಿಂದ, ಪೂರ್ವಗ್ರಹನಾಗಿದ್ದೆ; ಈಗ ನನಗೆ ಇದೆಲ್ಲಾ ಅರ್ಥ ಆಗಿದೆ’ ಎಂದು ಹೇಳಿದ್ದಾರೆ. ಈಗ ನಮಗಿರುವ ಗೊಂದಲವೆಂದರೆ, ಎನ್‌.ಮಹೇಶ್‌ ಹಿಂದೂ ಧರ್ಮದ ಬಗ್ಗೆ ನಮಗೆಲ್ಲಾ ಹಿಂದೆ ಪಾಠ ಮಾಡಿದ್ದಾರೆ. ಈಗ ನೀವು ಹೇಳುತ್ತಿರುವುದು ಸರಿಯಾ? ಅಥವಾ ಹಿಂದೆ ನಮಗೆ ಹೇಳಿದ್ದು ಸರಿಯಾ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಪ್ರಶ್ನಿಸಿದರು.

“ಮಹೇಶ್  ಈಗ ಹೇಳಿದ್ದೇ ಸರಿ ಎಂದಾದರೆ, ಅಂದು ನಮ್ಮಂತವರನ್ನು ನೀವು ದಿಕ್ಕು ತಪ್ಪಿಸಿದಂತೆ ಅಲ್ಲವೇ? ಓರ್ವ ವ್ಯಕ್ತಿಯಾಗಿ ಮಹೇಶ್ ಸುಳ್ಳು ಹೇಳಬಹುದು, ಸಂದರ್ಭಕ್ಕೆ ಅನುಕೂಲ ಆಗಲಿ ಎಂದು ಹಾಗೆ ಮಾತನಾಡಿರಬಹುದು. ಆದರೆ, ಹಿಂದೂ ಧರ್ಮದ ಬಗ್ಗೆ ಅಂಬೇಡ್ಕರ್ ಬರೆದಿರುವ ಬರಹಗಳು ಹಾಗೂ ಭಾಷಣ ಸುಳ್ಳಾಗುತ್ತವೆಯೇ? ಸಾಧ್ಯವೇ ಇಲ್ಲ. ಆದ್ದರಿಂದ, ಭಾರತೀಯ ವಿದ್ಯಾರ್ಥಿ ಸಂಘ ಹಾಗೂ ಬಹುಜನ ವಿದ್ಯಾರ್ಥಿ ಸಂಘಗಳೆರಡೂ ಪ್ರತ್ಯೇಕ. ಬಹುಜನ ವಿದ್ಯಾರ್ಥಿ ಸಂಘ ಬಾಬಾ ಸಾಹೇಬರು ಮತ್ತು ಪುಲೆ ದಂಪತಿಗಳ ಆಶಯದಂತೆ ಮುನ್ನಡೆಯುತ್ತಿದೆ. ಭಾರತೀಯ ವಿದ್ಯಾರ್ಥಿ ಸಂಘ ಬಿಜೆಪಿ ಜೊತೆಗೆ ಸಂಪರ್ಕ ಇಟ್ಟುಕೊಂಡು, ಅವರಿಗೆ ಅನುಕೂಲ ಆಗುವಂತೆ ಕೆಲಸ ಮಾಡುತ್ತಿರುವುದು ಸ್ಪಷ್ಟ” ಎಂದರು.

‘ಬಿಜೆಪಿಯ ರಾಜಕಾರಣವೇ ಬೇರೆ, ನಮ್ಮ ಸೈದ್ಧಾಂತಿಕ ವಿರೋಧವೇ ಬೇರೆ’

ಬಿವಿಎಸ್‌ ಮೊದಲ ಅಧ್ಯಕ್ಷರಾದ ಕೃಷ್ಣಮೂರ್ತಿ ಚಮರಂ ಮಾತನಾಡಿ, “ಭಾರತೀಯ ವಿದ್ಯಾರ್ಥಿ ಸಂಘಕ್ಕೂ, ನಮ್ಮ ಹಳೆಯ ಬಹುಜನ ವಿದ್ಯಾರ್ಥಿ ಸಂಘಕ್ಕೂ ಯಾವುದೇ ಸಂಬಂಧ ಇಲ್ಲ.. 25 ವರ್ಷ ಆಗಿದೆ ಎಂದು ಅವರು ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಆ ಸಂಘಟನೆಗೆ ಕೇವಲ ಐದು ವರ್ಷವಾಗಿದ್ದು, 25 ವರ್ಷ ಆಗಿದೆ ಎಂಬುದು ಅವರ ಭ್ರಮೆಯಷ್ಟೇ” ಎಂದು ಹೇಳಿದರು.

“ಕಾಂಗ್ರೆಸ್‌ ವಿರುದ್ಧದ ಬಿಜೆಪಿ ಹೋರಾಟಕ್ಕೆ ಬೆಂಬಲ ನೀಡಿರುವವರು ಭಾರತೀಯ ವಿದ್ಯಾರ್ಥಿ ಸಂಘದವರು, ಅದಕ್ಕೆ ಬಹುಜನ ವಿದ್ಯಾರ್ಥಿಗಳ ಸಂಘದ ಬೆಂಬಲವಿಲ್ಲ. ಆದರೆ, ಬಹುಜನ ವಿದ್ಯಾರ್ಥಿ ಸಂಘವು ಸರ್ಕಾರದ ಎಲ್ಲ ಜನವಿರೋಧಿ ನಡವಳಿಕೆಗಳನ್ನು ವಿರೋಧಿಸುತ್ತವೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣದ ದುರ್ಭಳಕೆಯನ್ನು ನಮ್ಮ ಸಂಘಟನೆ ಪ್ರತ್ಯೇಕವಾಗಿ ವಿರೋಧಿಸುತ್ತದೆ. ಬಿಜೆಪಿಯ ರಾಜಕಾರಣವೇ ಬೇರೆ, ನಮ್ಮ ಸೈದ್ಧಾಂತಿಕ ವಿರೋಧವೇ ಬೇರೆ. ಭಾರತೀಯ ವಿದ್ಯಾರ್ಥಿ ಸಂಘ ಬೆಂಬಲ ನೀಡುವ ಮೂಲಕ ಬಿಜೆಪಿಯ ಕೈ ಬಲಪಡಿಸುತ್ತಿದ್ದಾರೆ” ಎಂದರು.

“ಕಾಂಗ್ರೆಸ್‌ ಬಗ್ಗೆ ನಮಗೆ ಮೃದು ಧೋರಣೆ ಇಲ್ಲ.. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣದ ಅನ್ಯ ಉದ್ದೇಶ ಬಳಕೆಯನ್ನು ನಾವು ವಿರೋಧಿಸುತ್ತೇವೆ. ನಮ್ಮದು ಸಮುದಾಯ ಹಿತದೃಷ್ಟಿ ವಿರೋಧಿ ನೆಲೆ; ಆದರೆ, ಬಿಜೆಪಿ ವಿರೋಧಿಸುತ್ತಿರುವ ಕಾಂಗ್ರೆಸ್‌ ಮೇಲಿನ ಸೇಡಿನ ಕಾರಣಕ್ಕೆ. ಇದರಲ್ಲಿ ಸಮುದಾಯದ ಹಿತಚಿಂತನೆ ಇಲ್ಲ. ಕಾಂಗ್ರೆಸ್ ಸರ್ಕಾರ ಬೀಳುಸುವುದು ಅಥವಾ ಕಾಂಗ್ರೆಸ್ ವಿರುದ್ಧ ಜನಾಭಿಪ್ರಾಯ ರೂಪಿಸಬೇಕು ಎಂಬುದಷ್ಟೆ ಅವರ ದೂರದೃಷ್ಠಿ” ಎಂದು ಸ್ಪಷ್ಟನೆ ನೀಡಿದರು.

“ಪರಿಶಿಷ್ಟರ ನಿಧಿ ಅನ್ಯ ಉದ್ದೇಶಕ್ಕೆ ಬಳಕೆಗೆ ನಮ್ಮ ವಿರೋಧದಲ್ಲಿ ಯಾವುದೇ ರಾಜಕೀಯ ಇಲ್ಲ; ಸಮುದಾಯದ ಹಿತದೃಷ್ಟಿ ಮಾತ್ರ. ನಮ್ಮ ರಾಜಕೀಯ ಹಿತಾಸಕ್ತಿ ಇಲ್ಲ, ಒಂಟಿ ಧ್ವನಿಯಾಗಿ ನಾವು ವಿರೋಧಿಸುತ್ತೇವೆ. ಆದರೆ, ಬಿಜೆಪಿ ನಡೆಸುವ ಹೋರಾಕ್ಕೆ ನಮ್ಮ ಬೆಂಬಲ ಇಲ್ಲ. ಬಿವಿಎಸ್‌ ಹೆಸರಲ್ಲಿ ಬೆಂಬಲ ನೀಡಿರುವುದು ಎನ್‌. ಮಹೇಶ್‌ ಬಣ. ಭಾರತೀಯ ವಿದ್ಯಾರ್ಥಿ ಸಂಘ ಎಂದರೆ ಬಿಜೆಪಿ ಬೆಂಬಲಿತ ಸಂಘಟನೆ, ಅದರಲ್ಲಿ ಯಾವುದೇ ಅನುಮಾನ ಬೇಡ; ಎನ್‌. ಮಹೇಶ್‌ ಇದರ ಮಹಾಪೋಷಕರು. ಆ ಸಂಘಟನೆಯಲ್ಲಿ ಹರಿರಾಮ್ ಕೂಡ ಒಬ್ಬರು. ಮಹೇಶ್‌ ಬಿಜೆಪಿ ಸೇರುತ್ತಿದ್ದಂತೆಯೇ ಅವರ ಸಮ್ಮುಖದಲ್ಲಿ ‘ಬಹುಜನ’ ಕೈಬಿಟ್ಟು ‘ಭಾರತೀಯ’ ಮಾಡಿಕೊಂಡರು. ಏಕೆಂದರೆ, ಎಬಿವಿಪಿ, ಭಾರತೀಯ ಮಜ್ದೂರ್, ಭಾರತೀಯ ಜನತಾ ಪಕ್ಷಕ್ಕೆ ‘ಬಹುಜನ’ ಪದ ಹೊಂದಿಕೆಯಾಗುವುದಿಲ್ಲ ಎಂಬ ಕಾರಣಕ್ಕೆ ‘ಭಾರತೀಯ ವಿದ್ಯಾರ್ಥಿ ಸಂಘಟನೆ ಮಾಡಿಕೊಂಡಿದ್ದಾರೆ” ಎಂದರು.

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಕರೆಕೊಟ್ಟ ಬಿಜೆಪಿ

ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮುನ್ನ, ಬಿಜೆಪಿ ಭಾನುವಾರ (ಮಾರ್ಚ್ 2, 2025) ರಾಜ್ಯದ ವಿವಿಧ ದಲಿತ ಸಂಘಟನೆಗಳೊಂದಿಗೆ ದಲಿತರಿಗೆ ಮೀಸಲಾದ ಹಣವನ್ನು ಇತರ ಯೋಜನೆಗಳಿಗೆ ಬಳಸುವುದನ್ನು ತಡೆಯುವ ವಿಧಾನಗಳ ಕುರಿತು ದುಂಡು ಮೇಜಿನ ಸಮಾಲೋಚನೆ ನಡೆಸಿತು.

ಸಮಾಲೋಚನೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ದಲಿತ ಸಂಘಟನೆಗಳು ಇತರ ಯೋಜನೆಗಳಿಗೆ, ವಿಶೇಷವಾಗಿ ಸರ್ಕಾರದ ಗ್ಯಾರಂಟಿಗಳಿಗೆ ಹಣವನ್ನು ಬಳಕೆ ಮಾಡುವುದರ ಬಗ್ಗೆ ಬೇಸರಗೊಂಡಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ದಲಿತರಿಗೆ ಮೀಸಲಾದ ಹಣವನ್ನು ಗ್ಯಾರಂಟಿಗಳಿಗೆ ತಿರುಗಿಸುವುದರಿಂದ ಸರ್ಕಾರ ಘೋಷಿಸಿದ ಗ್ಯಾರಂಟಿಗಳಲ್ಲಿ ದಲಿತರನ್ನು ತಮ್ಮ ವ್ಯಾಪ್ತಿಗೆ ಒಳಪಡಿಸಿಲ್ಲ ಎಂದು ನಾವು ಭಾವಿಸುವಂತೆ ಮಾಡಿದೆ. ನಮ್ಮ ಕಲ್ಯಾಣಕ್ಕಾಗಿ ಮೀಸಲಾದ ಹಣವನ್ನು ದುರ್ಭಳಕೆ ಮಾಡುವ ಮೂಲಕ ಸರ್ಕಾರವು ಈಗ ನಮ್ಮನ್ನು ಗ್ಯಾರಂಟಿ ಅಡಿಯಲ್ಲಿ ತಂದಿದೆ” ಎಂದು ನಾರಾಯಣಸ್ವಾಮಿ ಆರೋಪಿಸಿದರು.

ಸಮಾಲೋಚನೆಯಲ್ಲಿ ಭಾಗವಹಿಸಿದ್ದ ದಲಿತ ಸಂಘಟನೆಗಳು ಮತ್ತಷ್ಟು ಹಣದ ದುಷ್ಕೃತ್ಯವನ್ನು ತಡೆಯಲು ಒಗ್ಗಟ್ಟಿನ ಹೋರಾಟ ನಡೆಸಲು ನಿರ್ಧರಿಸಿವೆ ಎಂದು ಅವರು ಹೇಳಿದರು. “ಅಗತ್ಯವಿದ್ದರೆ, ನಾವು ಕಾನೂನು ಹೋರಾಟಕ್ಕೂ ಸಿದ್ಧರಿದ್ದೇವೆ” ಎಂದು ಅವರು ಹೇಳಿದರು.

ಹಿರಿಯ ದಲಿತ ಮುಖಂಡರಾದ ವೆಂಕಟಸ್ವಾಮಿ, ವಕೀಲರಾದ ಹರಿರಾಮ್ ಸೇರಿದಂತೆ ಹಲವು ದಲಿತ ಮುಖಂಡರು ಬಿಜೆಪಿ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್‌ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...