Homeಮುಖಪುಟಬಹುಜನ ಭಾರತ : ಹಸಿವಿನ ಸಾವುಗಳು ಮತ್ತು ತುಂಬಿ ತುಳುಕಿರುವ ಗೋದಾಮುಗಳು

ಬಹುಜನ ಭಾರತ : ಹಸಿವಿನ ಸಾವುಗಳು ಮತ್ತು ತುಂಬಿ ತುಳುಕಿರುವ ಗೋದಾಮುಗಳು

ಕಂಗೆಟ್ಟ ಬಡಭಾರತದತ್ತ ಕಣ್ಣು ಮುಚ್ಚಿದ್ದಾರೆ ಮೋದಿ. ಹೆಚ್ಚುವರಿ ದಾಸ್ತಾನಿನ ಉಚಿತ ಹಂಚಿಕೆ ಮಾಡುತ್ತಿಲ್ಲ ಯಾಕೆ?

- Advertisement -
- Advertisement -

ಕೊರೊನಾ ಲಾಕ್ ಡೌನ್ 200ಕ್ಕೂ ಹೆಚ್ಚು ಬಡಜೀವಗಳನ್ನು ಬಲಿ ತೆಗೆದುಕೊಂಡಿದೆ. ಇವು ವರದಿಯಾಗಿರುವ ಪ್ರಕರಣಗಳು. ಮನೆಯ ಕದಗಳಷ್ಟೇ ಅಲ್ಲದೆ ಮನದ ಕದಗಳನ್ನೂ ಮುಚ್ಚಿಕೊಂಡಿರುವ ಭಾರತ ದೇಶದಲ್ಲಿ ಕಂಗೆಟ್ಟವರೆಡೆಗೆ ಕಣ್ಣುಮುಚ್ಚಿರುವವರೇ ಹೆಚ್ಚು. ಹೀಗಾಗಿ ಒಳನಾಡುಗಳಲ್ಲಿ, ದೂರದ ಸೀಮೆಗಳಲ್ಲಿ ವರದಿಯಾಗದಿರುವ ಪ್ರಕರಣಗಳ ಸಂಖ್ಯೆ ಕಡಿಮೆಯೇನೂ ಇರಲಿಕ್ಕಿಲ್ಲ. ದನಿ ಕಳೆದುಕೊಂಡ ಭಾರತವೊಂದಿದೆ. ಅದರ ಆಕ್ರಂದನ ಕೇಳುವವರಿಲ್ಲ. ಅಲ್ಲಿ ಹಿಂದು- ಮುಸ್ಲಿಂ ಕೋಮುವಾದಿ ಕೋನವಿದ್ದರೆ ಮಾತ್ರ ಮೀಡಿಯಾದ ಕಣ್ಣು ಕಿವಿಗಳು ಅರಳುತ್ತವೆ. ಯಾರೂ ಕೇಳದವರನ್ನು ಸರ್ಕಾರ ಯಾಕೆ ಕೇಳೀತು?

ಏಪ್ರಿಲ್ 11ರಂದು ಲಭ್ಯವಿದ್ದ ಅಂಕಿ ಅಂಶಗಳ ಪ್ರಕಾರ ಹಸಿವು, ದಣಿವು, ಪೊಲೀಸ್ ದೌರ್ಜನ್ಯ, ಹೆದ್ದಾರಿಗಳಲ್ಲಿ ಕಾಲುನಡಿಗೆಯಲ್ಲಿ ಊರು ಸೇರುವ ತವಕದಲ್ಲಿ ವೇಗದ ವಾಹನಗಳ ಚಕ್ರಗಳಿಗೆ ಸಿಕ್ಕವರು, ಮದ್ಯ ಸಿಗದೆ ಒದ್ದಾಡಿದವರು, ಸೋಂಕಿತರೆಂಬ ಸಂಶಯಕ್ಕೆ ಗುರಿಯಾಗಿ ಗುಂಪುಗಳಿಂದ ಜಜ್ಜಿಸಿಕೊಂಡವರು, ವರಮಾನವಿಲ್ಲದೆ ಆತ್ಮಹತ್ಯೆಯಂತಹ ಕಾರಣಗಳಿಂದಾಗಿ ಲಾಕ್ ಡೌನ್ ಅವಧಿಯಲ್ಲಿ ಸತ್ತವರ ಸಂಖ್ಯೆ 185. ತಮ್ಮದಲ್ಲದ ತಪ್ಪಿಗೆ ಬದುಕನ್ನು ಮುಗಿಸಿದ ಈ ಬಡಪಾಯಿಗಳಿಗಾಗಿ ದೀಪ ಮುಡಿಸಿದವರು, ಜಾಗಟೆ ಹೊಡೆದವರು ಯಾರೂ ಇಲ್ಲ. ಜನರನ್ನು ಉಳಿಸಲೆಂದು ಕೈಗೊಂಡ ಕ್ರಮಗಳೇ ಅವರಿಗೆ ಉರುಳಾಗಿವೆ. ಇದಕ್ಕಿಂತ ವ್ಯಂಗ್ಯ ಮತ್ತೊಂದು ಇದ್ದೀತೇ?

ದೇಶ ಅಳುವವರು ಹೆಚ್ಚು ವಿವೇಕಿಗಳೂ, ಬಡವರ ಬವಣೆಗಳ ಕುರಿತು ಹೆಚ್ಚು ಸಂವೇದನಾಶೀಲರೂ ಆಗಿದ್ದಲ್ಲಿ ಮಾನವೀಯವಾದ ಯೋಜಿತ ಮತ್ತು ಸುಸಜ್ಜಿತ ಲಾಕ್ ಡೌನ್ ಮಾಡುತ್ತಿದ್ದರು. ಆಗ ಸಾವುಗಳ ಸಂಖ್ಯೆಯೂ ತಗ್ಗುತ್ತಿತ್ತು.

ಅಂತಹ ಅಮೆರಿಕೆಯಲ್ಲೇ ಒಂದೂವರೆ ಕೋಟಿ ಮಂದಿ ಸರ್ಕಾರದ ಮುಂದೆ ನಿರುದ್ಯೋಗ ಪರಿಹಾರಗಳಿಗೆಂದು ಕೈ ಚಾಚಿ ನಿಂತಿದ್ದಾರೆ. ಇನ್ನು ಸಾಮಾಜಿಕ-ಆರ್ಥಿಕ ರಕ್ಷಣೆ ಇಲ್ಲದ ಜನಸಮುದಾಯಗಳ ಪಾಲಿಗೆ ಲಾಕ್ ಡೌನ್ ಎಂಬುದು ಹಸಿವು ಮತ್ತು ಮರಣದ ನಿಶ್ಚಿತ ದಾರಿ. ಬಡದೇಶಗಳ ಸುಮಾರು 200 ಕೋಟಿ ಮಂದಿಯ ಮುಂದೆ ನಿರುದ್ಯೋಗದ ಕತ್ತಲು ಕವಿದಿದೆ. ಸರ್ಕಾರಗಳು ಅವರ ನೆರವಿಗೆ ಧಾವಿಸುವ ಅವಕಾಶಗಳು ಕ್ಷೀಣ.

ದೇಶದಲ್ಲಿ ಅಸಂಘಟಿತ ಕಾರ್ಮಿಕ ವಲಯ ಮತ್ತು ವಲಸೆ ಕಾರ್ಮಿಕರ ಸಂಖ್ಯೆಯನ್ನು 39 ಕೋಟಿ ಎಂದು ಅಂದಾಜು ಮಾಡಲಾಗಿದೆ. ಸಾಮಾಜಿಕ-ಆರ್ಥಿಕ ಭದ್ರತೆಯ ನೆರಳಿನಿಂದ ವಂಚಿತರು ಇವರು. ತಮ್ಮ ಹಳ್ಳಿಗಳು ಊರುಗಳನ್ನು ಸೇರಿಕೊಂಡ ನಂತರವೂ ಹಸಿವು ಇವರನ್ನು ಕಾಡುವುದಿಲ್ಲ ಎಂಬ ಖಾತರಿ ಇಲ್ಲ. ಶ್ರಮದ ಮಾರುಕಟ್ಟೆಯಲ್ಲಿ ಇವರ ಬೆವರು ಈಗಾಗಲೆ ಬೆಲೆ ಕಳೆದುಕೊಳ್ಳತೊಡಗಿದೆ. ರೆಟ್ಟೆ ಮುರಿದರೂ ಹೊಟ್ಟೆ ತುಂಬುವ ಸೂಚನೆಗಳು ಕಾಣುತ್ತಿಲ್ಲ. ಬದುಕುಗಳು ಬಲು ದುರ್ಭರವಾಗಲಿವೆ. ಶಾಲೆಗೆ ಹೋಗುತ್ತಿರುವ ಇವರ ಮಕ್ಕಳು ಸಂಸಾರದ ನೊಗಕ್ಕೆ ಹೂಡುವ ಕರುಗಳಾಗಲಿದ್ದಾರೆ. ಈ ಜನವರ್ಗಗಳ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಹಿಂಸೆ ಮೇರೆ ಮೀರಲಿದೆ.

ವರ್ಷಾಂತ್ಯದ ಹೊತ್ತಿಗೆ ಕರೋನಾ ವೈರಸ್ ಮಹಾಮಾರಿಯು ಮಹಾಕ್ಷಾಮವೊಂದಕ್ಕೆ ದಾರಿ ಮಾಡಲಿದೆ ಎಂದು ವಿಶ್ವ ಆಹಾರ ತಜ್ಞರು ಭವಿಷ್ಯ ನುಡಿದಿದ್ದಾರೆ. 2020ರ ಅಂತ್ಯದ ವೇಳೆಗೆ ಹಸಿವಿನ ಅಂಚಿಗೆ ತಲುಪಲಿರುವ ವಿಶ್ವದ ಜನಸಂಖ್ಯೆ ಮೂವತ್ತು ಕೋಟಿಯನ್ನು ಸಮೀಪಿಸಲಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೇಳಿದೆ.

ತಿಂಗಳ ಹಿಂದೆ ಮಾರ್ಚ್ ಒಂದರ ಅಂಕಿ ಅಂಶದ ಪ್ರಕಾರ ದೇಶದ ಸರ್ಕಾರೀ ಗೋದಾಮುಗಳು 77 ದಶಲಕ್ಷ ಮೆಟ್ರಿಕ್ ಟನ್ ಗಳಷ್ಟು ಅಕ್ಕಿ ಮತ್ತು ಗೋಧಿಯ ಧಾರಾಳ ದಾಸ್ತಾನು ಹೊಂದಿದ್ದವು. ನಮಗೆ ಅಗತ್ಯವಿರುವ ಕಾಪು ದಾಸ್ತಾನಿನ ಪ್ರಮಾಣ 21.4 ದಶಲಕ್ಷ ಮೆಟ್ರಿಕ್ ಟನ್ನುಗಳು ಮಾತ್ರ. ಉಳಿದದ್ದೆಲ್ಲ ಹೆಚ್ಚುವರಿ. ಹಿಂಗಾರು ಇಳುವರಿಯ ಖರೀದಿ ಕಾರ್ಯಾಚರಣೆಗಳು ಹತ್ತಿರದಲ್ಲಿವೆ.

ಮನೆಯಲ್ಲಿನ ಆಹಾರ ಕಣಜ ಕಂಠಮಟ್ಟ ಭರ್ತಿ, ಕುಟುಂಬದ ದುರ್ಬಲರು ಹಸಿವಿನಿಂದ ಸತ್ತರೂ ಕಣಜದಿಂದ ಆಹಾರ ಧಾನ್ಯ ಹೊರತೆಗೆಯುವುದಿಲ್ಲ ಎಂಬ ಧೋರಣೆ ಭಾರತ ಸರ್ಕಾರದ್ದು. ಕರೋನಾ ಮಹಾಮಾರಿಯ ತಾಂಡವದಲ್ಲಿ ಕಾಡತೊಡಗಿರುವ ಹಸಿವನ್ನು ಸರ್ಕಾರದ ಗೋದಾಮುಗಳಲ್ಲಿನ ಆಹಾರಧಾನ್ಯ ಹೊರತೆಗೆದರೆ ಅಡಗಿಸಬಹುದು. ಎಲ್ಲರೂ ಬಲ್ಲ ಸತ್ಯವಿದು. ಆದರೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಪರಿಸ್ಥಿತಿಯ ಘೋರ ಭೀಕರ ಸ್ವರೂಪ ಆಳುವವರಿಗೆ ಅರ್ಥವಾಗುತ್ತಿಲ್ಲ ಎನ್ನುತ್ತಾರೆ ಆರ್ಥಿಕ ತಜ್ಞ ಮತ್ತು ಸಮಾಜವಿಜ್ಞಾನಿ ಜೀನ್ ಡ್ರೆಜ್.

ದೇಶದ ಆಹಾರ ದಾಸ್ತಾನನ್ನು ಸಾಮಾಜಿಕ ಭದ್ರತಾ ಯೋಜನೆಗಳು ಮತ್ತು ಸಾರ್ವಜನಿಕ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪೀಪಲ್ಸ್ ಯೂನಿಯನ್ ಅಫ್ ಸಿವಿಲ್ ಲಿಬರ್ಟೀಸ್ (ಪಿ.ಯು.ಸಿ.ಎಲ್) ಇಪ್ಪತ್ತು ವರ್ಷಗಳ ಹಿಂದೆ ಸುಪ್ರೀಮ್ ಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತು. ಪರಿಣಾಮವಾಗಿ ಮಧ್ಯಾಹ್ನದ ಬಿಸಿಯೂಟ, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಸುಧಾರಣೆಗಳು, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಜಾರಿಗೆ ಬಂದವು. ಈ ಯೋಜನೆಗಳಿಗಾಗಿ ಪ್ರತಿ ವರ್ಷ 50-60 ದಶಲಕ್ಷ ಟನ್ನುಗಳಷ್ಟು ಅಕ್ಕಿ ಗೋಧಿ ಹಂಚಿಕೆಯಾಗುತ್ತಿದೆ. ಆಹಾರ ದಾಸ್ತಾನಿನ ಪ್ರಮಾಣ ಕೂಡ ವರ್ಷದಿಂದ ವರ್ಷಕ್ಕೆ ಜಿಗಿಯುತ್ತಲೇ ಬಂದಿದೆ. ಈ ವರ್ಷದ ದಾಸ್ತಾನು 77 ದಶಲಕ್ಷ ಟನ್ನುಗಳು. ಹಿಂಗಾರಿನ ಫಸಲು ಸದ್ಯದಲ್ಲೇ ಕೈ ಸೇರಿದರೆ ಈ ದಾಸ್ತಾನು 97 ದಶಲಕ್ಷ ಟನ್ನುಗಳಿಗೆ ಏರಲಿದೆ. ಮುಂದಿನ ಮೂರು ತಿಂಗಳ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಡಿತರವನ್ನು ದುಪ್ಪಟ್ಟು ಮಾಡಿರುವುದಾಗಿ ಕೇಂದ್ರ ಹಣಕಾಸು ಮಂತ್ರಿ ಇತ್ತೀಚೆಗೆ ಘೋಷಿಸಿದರು. ಅದು ದೊಡ್ಡ ಉಪಕಾರವೇನೂ ಅಲ್ಲ. ಹಿಂಗಾರು ಹಂಗಾಮಿನ ಖರೀದಿ ಹೊಸ್ತಿಲಲ್ಲಿ ನಿಂತಿತ್ತು. ಗೋದಾಮುಗಳಲ್ಲಿ ಸ್ಥಳಾವಕಾಶ ಇರಲಿಲ್ಲ.

ಕರೋನಾ ಕಾಲದ ಹಸಿವು ಭಾರತ ದೇಶದ ದೀನರ ನಡುವೆ ಹೊಂಚು ಹಾಕಿದೆ. ಕೇಂದ್ರ ಸರ್ಕಾರ ತನ್ನ ಗೋದಾಮುಗಳನ್ನು ತನ್ನದೇ ಬಡಜನರಿಗಾಗಿ ತೆರೆಯಬೇಕಿದೆ. ಆಹಾರ ಧಾನ್ಯಗಳನ್ನು ಅರ್ಹರಿಗೆ ಉಚಿತವಾಗಿ ಹಂಚಬೇಕಿದೆ. ಜನಧನ ಯೋಜನೆಯಡಿ ಹೆಣ್ಣುಮಕ್ಕಳ ಖಾತೆಗಳಿಗೆ ತಿಂಗಳಿಗೆ 500 ರುಪಾಯಿ ಹಾಕುವ ಕ್ರಮ ಯಾತಕ್ಕೂ ಸಾಲದು. ಬಡವರ ಪಾಲಿನ ಬ್ಯಾಂಕಿಂಗ್ ವ್ಯವಸ್ಥೆ ಈಗಲೂ ಅಸಮರ್ಪಕ.

ತಮ್ಮನ್ನು ಬಡವರ ಬಂಧು ಎಂದೇ ಘೋಷಿಸಿಕೊಂಡು ಅವರ ಮತಗಳನ್ನು ಕೊಳ್ಳೆ ಹೊಡೆದಿರುವ ಪ್ರಧಾನಮಂತ್ರಿ ನರೇಂದ್ರ ದಾಮೋದರದಾಸ ಮೋದಿಯವರು ದೊಡ್ಡ ಮನಸ್ಸು ಮಾಡಬೇಕು.


ಇದನ್ನೂ ಓದಿ: ಲಾಕ್‍ಡೌನ್ – ಮನೆಯಿಂದಲೇ ಕೆಲಸ, ಮನೆಕೆಲಸ ಮತ್ತು ಮಹಿಳೆ! – ಮಲ್ಲಿಗೆ ಸಿರಿಮನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...