Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...