Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...