Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...