Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...