Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...