Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...