Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...