Homeಕರ್ನಾಟಕಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು

- Advertisement -
- Advertisement -

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಲ್ಲಂಗಡಿ ಹಣ್ಣಿನ ಬಡ ವ್ಯಾಪಾರಿ ನಬಿಸಾಬ್ ಅವರ ಮೇಲೆ ಗೂಂಡಾಗಿರಿ ನಡೆಸಿ, ತಿನ್ನುವ ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಅಮಾನವೀಯಕೃತ್ಯ ಎಸಗಿರುವ ಶ್ರೀರಾಮಸೇನೆಯ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.

ಪ್ರತಿಭಟನೆಗೂ ಮುನ್ನ ಬಹುತ್ವ ಕರ್ನಾಟಕ ವೇದಿಕೆಯಡಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು. ಹಿಂದೂ-ಮುಸ್ಲಿಂ ವ್ಯಾಪಾರಿಗಳು ಪರಸ್ಪರ ಸಹೋದರರು, ಕೋಮುವಾದಿ ಸಂಘಟನೆಗಳು ಹಾಗೂ ವ್ಯಕ್ತಿಗಳು ನಮ್ಮ ನಡುವಿನ ಸಾಮರಸ್ಯ ಕದಡಲು ಸಾಧ್ಯವಿಲ್ಲ ಎಂದು ಏಕತೆಯ ಸಂಕೇತ ಬಿಂಬಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಹಕ್ಕುಗಳ ಹೋರಾಟಗಾರ ಅಶೋಕ ನಂಜಲದಿನ್ನಿ, “ಕೆಲವು ಕೋಮುವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳು ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರಿಗೆ ಧರ್ಮದ ನಶೆ ಏರಿಸಿ; ಇಲ್ಲ-ಸಲ್ಲದ ಕಪೋಲ ಕಲ್ಪಿತ ದುಷ್ಟ ವಿಚಾರಗಳನ್ನು ತಲೆಯಲ್ಲಿ ತುಂಬಿ, ಬಡ ಮುಸ್ಲಿಂ ಜನರ ಮೇಲೆ ಎತ್ತಿಕಟ್ಟಿ ಅವರ ಬದುಕನ್ನು ಹಾಳುಮಾಡುತ್ತಿದ್ದಾರೆ. ಇಂತವರಿಂದ ಪ್ರೇರೇಪಣೆಗೊಂಡು ದುಷ್ಕೃತ್ಯ ನಡೆಸಿದ ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರು ಜೈಲಿಗೆ ಹೋದರೆ ಬದುಕು ಬೀದಿಗೆ ಬೀಳುತ್ತದೆ. ಪರಸ್ಪರ ದಲಿತ, ಶೂದ್ರ ಹಾಗೂ ಹಿಂದುಳಿದ ವರ್ಗದವರನ್ನು ಮುಸ್ಲಿಂ ಸಮುದಾಯದವರ ಮೇಲೆ ಛೂ ಬಿಟ್ಟು ಇತ್ತ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಅವರ ಹಿಡನ್ ಅಜೆಂಡಾವಾಗಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಬಹುತ್ವ ವೇದಿಕೆಯ ಸಂಚಾಲಕ ನಾಗರಾಜ ಪೂಜಾರ್ ಮಾತನಾಡಿ, “ಕಳೆದ ಹಲವು ದಿನಗಳಲ್ಲಿ ರಾಜ್ಯಾದ್ಯಂತ ಕೋಮುಸಾಮರಸ್ಯ ಕದಡುವಂತಹ ದುಷ್ಕೃತ್ಯಗಳು ಸರಣಿಯೋಪಾದಿಯಲ್ಲಿ ನಡೆಯುತ್ತಿವೆ. ಅಲ್ಲದೇ ಸರ್ಕಾರದ ಭಾಗವಾಗಿರುವ ಗೃಹ ಸಚಿವರೇ ಬಹಿರಂಗವಾಗಿ ಕೋಮು ಸಂಘಟನೆಗಳ ಏಜೆಂಟರಂತೆ ಮಾತನಾಡುತ್ತಿದ್ದಾರೆ. ಇನ್ನು ಮುಖ್ಯಮಂತ್ರಿಗಳು ಈ ಹಿಂದೆಯೇ ಕ್ರಿಯೆಗೆ-ಪ್ರತಿಕ್ರಿಯೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮತೀಯವಾದ ಮತ್ತು ಮತೀಯವಾದಿಗಳನ್ನು ಬೆಂಬಲಿಸಿ ಸಂವಿಧಾನ ಮತ್ತು ನಾಡಿನ ಜನರಿಗೆ ದ್ರೋಹ ಬಗೆದಿದ್ದಾರೆ” ಎಂದು ಹೇಳಿದರು.

ಮನುಜಮತ ಬಳಗದ ಬಸವರಾಜ ಬಾದರ್ಲಿ ಮಾತನಾಡಿ, “ಕೋಮುವಾದಿ ಬಜರಂಗಿಗಳು ಬಡ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣುಗಳನ್ನು ಬೀದಿ ಎಸೆದು ರೈತರಿಗೆ, ಅವರ ಶ್ರಮಕ್ಕೆ ಅವಮಾನ ಮಾಡಿದ್ದಾರೆ. ಶಾಂತಿ-ಸೌಹಾರ್ದತೆಯಿಂದ ಬದುಕುತ್ತಿರುವ ಹಿಂದೂ-ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಕೆಲ ಶಕ್ತಿಗಳು ಹವಣಿಸುತ್ತಿದ್ದು ಅದರ ಭಾಗವಾಗಿ ಈ ಘಟನೆ ನಡೆದಿದೆ” ಎಂದು ವಿಶ್ಲೇಷಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ (ಕೋಡಿಹಳ್ಳಿ ಬಣ) ಮುಖಂಡ ರಾಮಯ್ಯ ಜವಳಗೇರಾ ಮಾತನಾಡಿ, “ಸಂಪೂರ್ಣ ಆಡಳಿತ ವೈಫಲ್ಯ ಕಂಡಿರುವ ಬಿಜೆಪಿ ಸರ್ಕಾರವು ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜಿತ ಕಾರ್ಯತಂತ್ರದಭಾಗವಾಗಿ ಜನರ ಮನಸ್ಸನ್ನು ದಿಕ್ಕು ತಪ್ಪಿಸಲು, ಕೋಮುವಾದಿ ಸಂಘಟನೆಗಳ ದುಷ್ಕೃತ್ಯಗಳಿಗೆ ಪ್ರೋತ್ಸಾಹಿಸುತ್ತಿರುವುದಲ್ಲದೇ ಧರ್ಮ/ ಧರ್ಮಗಳ ನಡುವೆ ಕೋಮುಗಲಭೆ ಸೃಷ್ಟಿಮಾಡಲು ಕೀಳುಮಟ್ಟಕ್ಕಿಳಿದು ಏನೆಲ್ಲಾ ಹುನ್ನಾರ ನಡೆಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ವೆಂಕಟೇಶ ಗಿರಿಜಾಲಿ, ಮಂಜುನಾಥ ಗಾಂಧಿನಗರ, ಬಸವರಾಜ ಹಸಮಕಲ್, ಶಾಮೀದ್‌ಸಾಬ್ ಸಿದ್ರಾಂಪುರ, ಸೈಯ್ಯದ್ ಬಾಷಾ, ಹುಸೇನ್ ಬಾಷಾ, ಖಾಸಿಂಸಾಬ್, ಸಮ್ಮದ್ ಚೌದ್ರಿ, ಪಂಪಾಪತಿ, ಅರ್ಶದ್, ಎಂ.ಎಡಿ.ಅಸೀಫ್, ಯಂಕಪ್ಪ, ಹೊಳೆಯಪ್ಪ ದಿದ್ದಿಗಿ, ಅಬೂಬಕರ್, ಎಂ.ಡಿ.ಮಂಜಿಲ್. ಶೇಖ್, ಸುಹೈಲ್ ಅಲಿ, ಸಬ್ಜಲಿಸಾಬ್, ಶಫಿ ಸೇರಿದಂತೆ ಇನ್ನಿತರರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಧಾರವಾಡದ ಮುಸ್ಲಿಂ ವರ್ತಕನ ಕಲ್ಲಂಗಡಿ ಹಣ್ಣು ಧ್ವಂಸ: ದುಷ್ಕರ್ಮಿಗಳ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...