Homeಕರ್ನಾಟಕಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು

- Advertisement -
- Advertisement -

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಲ್ಲಂಗಡಿ ಹಣ್ಣಿನ ಬಡ ವ್ಯಾಪಾರಿ ನಬಿಸಾಬ್ ಅವರ ಮೇಲೆ ಗೂಂಡಾಗಿರಿ ನಡೆಸಿ, ತಿನ್ನುವ ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಅಮಾನವೀಯಕೃತ್ಯ ಎಸಗಿರುವ ಶ್ರೀರಾಮಸೇನೆಯ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.

ಪ್ರತಿಭಟನೆಗೂ ಮುನ್ನ ಬಹುತ್ವ ಕರ್ನಾಟಕ ವೇದಿಕೆಯಡಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು. ಹಿಂದೂ-ಮುಸ್ಲಿಂ ವ್ಯಾಪಾರಿಗಳು ಪರಸ್ಪರ ಸಹೋದರರು, ಕೋಮುವಾದಿ ಸಂಘಟನೆಗಳು ಹಾಗೂ ವ್ಯಕ್ತಿಗಳು ನಮ್ಮ ನಡುವಿನ ಸಾಮರಸ್ಯ ಕದಡಲು ಸಾಧ್ಯವಿಲ್ಲ ಎಂದು ಏಕತೆಯ ಸಂಕೇತ ಬಿಂಬಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಹಕ್ಕುಗಳ ಹೋರಾಟಗಾರ ಅಶೋಕ ನಂಜಲದಿನ್ನಿ, “ಕೆಲವು ಕೋಮುವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳು ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರಿಗೆ ಧರ್ಮದ ನಶೆ ಏರಿಸಿ; ಇಲ್ಲ-ಸಲ್ಲದ ಕಪೋಲ ಕಲ್ಪಿತ ದುಷ್ಟ ವಿಚಾರಗಳನ್ನು ತಲೆಯಲ್ಲಿ ತುಂಬಿ, ಬಡ ಮುಸ್ಲಿಂ ಜನರ ಮೇಲೆ ಎತ್ತಿಕಟ್ಟಿ ಅವರ ಬದುಕನ್ನು ಹಾಳುಮಾಡುತ್ತಿದ್ದಾರೆ. ಇಂತವರಿಂದ ಪ್ರೇರೇಪಣೆಗೊಂಡು ದುಷ್ಕೃತ್ಯ ನಡೆಸಿದ ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರು ಜೈಲಿಗೆ ಹೋದರೆ ಬದುಕು ಬೀದಿಗೆ ಬೀಳುತ್ತದೆ. ಪರಸ್ಪರ ದಲಿತ, ಶೂದ್ರ ಹಾಗೂ ಹಿಂದುಳಿದ ವರ್ಗದವರನ್ನು ಮುಸ್ಲಿಂ ಸಮುದಾಯದವರ ಮೇಲೆ ಛೂ ಬಿಟ್ಟು ಇತ್ತ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಅವರ ಹಿಡನ್ ಅಜೆಂಡಾವಾಗಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಬಹುತ್ವ ವೇದಿಕೆಯ ಸಂಚಾಲಕ ನಾಗರಾಜ ಪೂಜಾರ್ ಮಾತನಾಡಿ, “ಕಳೆದ ಹಲವು ದಿನಗಳಲ್ಲಿ ರಾಜ್ಯಾದ್ಯಂತ ಕೋಮುಸಾಮರಸ್ಯ ಕದಡುವಂತಹ ದುಷ್ಕೃತ್ಯಗಳು ಸರಣಿಯೋಪಾದಿಯಲ್ಲಿ ನಡೆಯುತ್ತಿವೆ. ಅಲ್ಲದೇ ಸರ್ಕಾರದ ಭಾಗವಾಗಿರುವ ಗೃಹ ಸಚಿವರೇ ಬಹಿರಂಗವಾಗಿ ಕೋಮು ಸಂಘಟನೆಗಳ ಏಜೆಂಟರಂತೆ ಮಾತನಾಡುತ್ತಿದ್ದಾರೆ. ಇನ್ನು ಮುಖ್ಯಮಂತ್ರಿಗಳು ಈ ಹಿಂದೆಯೇ ಕ್ರಿಯೆಗೆ-ಪ್ರತಿಕ್ರಿಯೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮತೀಯವಾದ ಮತ್ತು ಮತೀಯವಾದಿಗಳನ್ನು ಬೆಂಬಲಿಸಿ ಸಂವಿಧಾನ ಮತ್ತು ನಾಡಿನ ಜನರಿಗೆ ದ್ರೋಹ ಬಗೆದಿದ್ದಾರೆ” ಎಂದು ಹೇಳಿದರು.

ಮನುಜಮತ ಬಳಗದ ಬಸವರಾಜ ಬಾದರ್ಲಿ ಮಾತನಾಡಿ, “ಕೋಮುವಾದಿ ಬಜರಂಗಿಗಳು ಬಡ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣುಗಳನ್ನು ಬೀದಿ ಎಸೆದು ರೈತರಿಗೆ, ಅವರ ಶ್ರಮಕ್ಕೆ ಅವಮಾನ ಮಾಡಿದ್ದಾರೆ. ಶಾಂತಿ-ಸೌಹಾರ್ದತೆಯಿಂದ ಬದುಕುತ್ತಿರುವ ಹಿಂದೂ-ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಕೆಲ ಶಕ್ತಿಗಳು ಹವಣಿಸುತ್ತಿದ್ದು ಅದರ ಭಾಗವಾಗಿ ಈ ಘಟನೆ ನಡೆದಿದೆ” ಎಂದು ವಿಶ್ಲೇಷಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ (ಕೋಡಿಹಳ್ಳಿ ಬಣ) ಮುಖಂಡ ರಾಮಯ್ಯ ಜವಳಗೇರಾ ಮಾತನಾಡಿ, “ಸಂಪೂರ್ಣ ಆಡಳಿತ ವೈಫಲ್ಯ ಕಂಡಿರುವ ಬಿಜೆಪಿ ಸರ್ಕಾರವು ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜಿತ ಕಾರ್ಯತಂತ್ರದಭಾಗವಾಗಿ ಜನರ ಮನಸ್ಸನ್ನು ದಿಕ್ಕು ತಪ್ಪಿಸಲು, ಕೋಮುವಾದಿ ಸಂಘಟನೆಗಳ ದುಷ್ಕೃತ್ಯಗಳಿಗೆ ಪ್ರೋತ್ಸಾಹಿಸುತ್ತಿರುವುದಲ್ಲದೇ ಧರ್ಮ/ ಧರ್ಮಗಳ ನಡುವೆ ಕೋಮುಗಲಭೆ ಸೃಷ್ಟಿಮಾಡಲು ಕೀಳುಮಟ್ಟಕ್ಕಿಳಿದು ಏನೆಲ್ಲಾ ಹುನ್ನಾರ ನಡೆಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ವೆಂಕಟೇಶ ಗಿರಿಜಾಲಿ, ಮಂಜುನಾಥ ಗಾಂಧಿನಗರ, ಬಸವರಾಜ ಹಸಮಕಲ್, ಶಾಮೀದ್‌ಸಾಬ್ ಸಿದ್ರಾಂಪುರ, ಸೈಯ್ಯದ್ ಬಾಷಾ, ಹುಸೇನ್ ಬಾಷಾ, ಖಾಸಿಂಸಾಬ್, ಸಮ್ಮದ್ ಚೌದ್ರಿ, ಪಂಪಾಪತಿ, ಅರ್ಶದ್, ಎಂ.ಎಡಿ.ಅಸೀಫ್, ಯಂಕಪ್ಪ, ಹೊಳೆಯಪ್ಪ ದಿದ್ದಿಗಿ, ಅಬೂಬಕರ್, ಎಂ.ಡಿ.ಮಂಜಿಲ್. ಶೇಖ್, ಸುಹೈಲ್ ಅಲಿ, ಸಬ್ಜಲಿಸಾಬ್, ಶಫಿ ಸೇರಿದಂತೆ ಇನ್ನಿತರರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಧಾರವಾಡದ ಮುಸ್ಲಿಂ ವರ್ತಕನ ಕಲ್ಲಂಗಡಿ ಹಣ್ಣು ಧ್ವಂಸ: ದುಷ್ಕರ್ಮಿಗಳ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...