Homeಕರ್ನಾಟಕಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು

- Advertisement -
- Advertisement -

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಲ್ಲಂಗಡಿ ಹಣ್ಣಿನ ಬಡ ವ್ಯಾಪಾರಿ ನಬಿಸಾಬ್ ಅವರ ಮೇಲೆ ಗೂಂಡಾಗಿರಿ ನಡೆಸಿ, ತಿನ್ನುವ ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಅಮಾನವೀಯಕೃತ್ಯ ಎಸಗಿರುವ ಶ್ರೀರಾಮಸೇನೆಯ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.

ಪ್ರತಿಭಟನೆಗೂ ಮುನ್ನ ಬಹುತ್ವ ಕರ್ನಾಟಕ ವೇದಿಕೆಯಡಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು. ಹಿಂದೂ-ಮುಸ್ಲಿಂ ವ್ಯಾಪಾರಿಗಳು ಪರಸ್ಪರ ಸಹೋದರರು, ಕೋಮುವಾದಿ ಸಂಘಟನೆಗಳು ಹಾಗೂ ವ್ಯಕ್ತಿಗಳು ನಮ್ಮ ನಡುವಿನ ಸಾಮರಸ್ಯ ಕದಡಲು ಸಾಧ್ಯವಿಲ್ಲ ಎಂದು ಏಕತೆಯ ಸಂಕೇತ ಬಿಂಬಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಹಕ್ಕುಗಳ ಹೋರಾಟಗಾರ ಅಶೋಕ ನಂಜಲದಿನ್ನಿ, “ಕೆಲವು ಕೋಮುವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳು ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರಿಗೆ ಧರ್ಮದ ನಶೆ ಏರಿಸಿ; ಇಲ್ಲ-ಸಲ್ಲದ ಕಪೋಲ ಕಲ್ಪಿತ ದುಷ್ಟ ವಿಚಾರಗಳನ್ನು ತಲೆಯಲ್ಲಿ ತುಂಬಿ, ಬಡ ಮುಸ್ಲಿಂ ಜನರ ಮೇಲೆ ಎತ್ತಿಕಟ್ಟಿ ಅವರ ಬದುಕನ್ನು ಹಾಳುಮಾಡುತ್ತಿದ್ದಾರೆ. ಇಂತವರಿಂದ ಪ್ರೇರೇಪಣೆಗೊಂಡು ದುಷ್ಕೃತ್ಯ ನಡೆಸಿದ ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರು ಜೈಲಿಗೆ ಹೋದರೆ ಬದುಕು ಬೀದಿಗೆ ಬೀಳುತ್ತದೆ. ಪರಸ್ಪರ ದಲಿತ, ಶೂದ್ರ ಹಾಗೂ ಹಿಂದುಳಿದ ವರ್ಗದವರನ್ನು ಮುಸ್ಲಿಂ ಸಮುದಾಯದವರ ಮೇಲೆ ಛೂ ಬಿಟ್ಟು ಇತ್ತ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಅವರ ಹಿಡನ್ ಅಜೆಂಡಾವಾಗಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಬಹುತ್ವ ವೇದಿಕೆಯ ಸಂಚಾಲಕ ನಾಗರಾಜ ಪೂಜಾರ್ ಮಾತನಾಡಿ, “ಕಳೆದ ಹಲವು ದಿನಗಳಲ್ಲಿ ರಾಜ್ಯಾದ್ಯಂತ ಕೋಮುಸಾಮರಸ್ಯ ಕದಡುವಂತಹ ದುಷ್ಕೃತ್ಯಗಳು ಸರಣಿಯೋಪಾದಿಯಲ್ಲಿ ನಡೆಯುತ್ತಿವೆ. ಅಲ್ಲದೇ ಸರ್ಕಾರದ ಭಾಗವಾಗಿರುವ ಗೃಹ ಸಚಿವರೇ ಬಹಿರಂಗವಾಗಿ ಕೋಮು ಸಂಘಟನೆಗಳ ಏಜೆಂಟರಂತೆ ಮಾತನಾಡುತ್ತಿದ್ದಾರೆ. ಇನ್ನು ಮುಖ್ಯಮಂತ್ರಿಗಳು ಈ ಹಿಂದೆಯೇ ಕ್ರಿಯೆಗೆ-ಪ್ರತಿಕ್ರಿಯೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮತೀಯವಾದ ಮತ್ತು ಮತೀಯವಾದಿಗಳನ್ನು ಬೆಂಬಲಿಸಿ ಸಂವಿಧಾನ ಮತ್ತು ನಾಡಿನ ಜನರಿಗೆ ದ್ರೋಹ ಬಗೆದಿದ್ದಾರೆ” ಎಂದು ಹೇಳಿದರು.

ಮನುಜಮತ ಬಳಗದ ಬಸವರಾಜ ಬಾದರ್ಲಿ ಮಾತನಾಡಿ, “ಕೋಮುವಾದಿ ಬಜರಂಗಿಗಳು ಬಡ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣುಗಳನ್ನು ಬೀದಿ ಎಸೆದು ರೈತರಿಗೆ, ಅವರ ಶ್ರಮಕ್ಕೆ ಅವಮಾನ ಮಾಡಿದ್ದಾರೆ. ಶಾಂತಿ-ಸೌಹಾರ್ದತೆಯಿಂದ ಬದುಕುತ್ತಿರುವ ಹಿಂದೂ-ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಕೆಲ ಶಕ್ತಿಗಳು ಹವಣಿಸುತ್ತಿದ್ದು ಅದರ ಭಾಗವಾಗಿ ಈ ಘಟನೆ ನಡೆದಿದೆ” ಎಂದು ವಿಶ್ಲೇಷಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ (ಕೋಡಿಹಳ್ಳಿ ಬಣ) ಮುಖಂಡ ರಾಮಯ್ಯ ಜವಳಗೇರಾ ಮಾತನಾಡಿ, “ಸಂಪೂರ್ಣ ಆಡಳಿತ ವೈಫಲ್ಯ ಕಂಡಿರುವ ಬಿಜೆಪಿ ಸರ್ಕಾರವು ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜಿತ ಕಾರ್ಯತಂತ್ರದಭಾಗವಾಗಿ ಜನರ ಮನಸ್ಸನ್ನು ದಿಕ್ಕು ತಪ್ಪಿಸಲು, ಕೋಮುವಾದಿ ಸಂಘಟನೆಗಳ ದುಷ್ಕೃತ್ಯಗಳಿಗೆ ಪ್ರೋತ್ಸಾಹಿಸುತ್ತಿರುವುದಲ್ಲದೇ ಧರ್ಮ/ ಧರ್ಮಗಳ ನಡುವೆ ಕೋಮುಗಲಭೆ ಸೃಷ್ಟಿಮಾಡಲು ಕೀಳುಮಟ್ಟಕ್ಕಿಳಿದು ಏನೆಲ್ಲಾ ಹುನ್ನಾರ ನಡೆಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ವೆಂಕಟೇಶ ಗಿರಿಜಾಲಿ, ಮಂಜುನಾಥ ಗಾಂಧಿನಗರ, ಬಸವರಾಜ ಹಸಮಕಲ್, ಶಾಮೀದ್‌ಸಾಬ್ ಸಿದ್ರಾಂಪುರ, ಸೈಯ್ಯದ್ ಬಾಷಾ, ಹುಸೇನ್ ಬಾಷಾ, ಖಾಸಿಂಸಾಬ್, ಸಮ್ಮದ್ ಚೌದ್ರಿ, ಪಂಪಾಪತಿ, ಅರ್ಶದ್, ಎಂ.ಎಡಿ.ಅಸೀಫ್, ಯಂಕಪ್ಪ, ಹೊಳೆಯಪ್ಪ ದಿದ್ದಿಗಿ, ಅಬೂಬಕರ್, ಎಂ.ಡಿ.ಮಂಜಿಲ್. ಶೇಖ್, ಸುಹೈಲ್ ಅಲಿ, ಸಬ್ಜಲಿಸಾಬ್, ಶಫಿ ಸೇರಿದಂತೆ ಇನ್ನಿತರರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಧಾರವಾಡದ ಮುಸ್ಲಿಂ ವರ್ತಕನ ಕಲ್ಲಂಗಡಿ ಹಣ್ಣು ಧ್ವಂಸ: ದುಷ್ಕರ್ಮಿಗಳ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...