Homeರಾಷ್ಟ್ರೀಯತೀಸ್ತಾ ಮತ್ತು ಶ್ರೀಕುಮಾರ್ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಅಹಮದಾಬಾದ್ ನ್ಯಾಯಾಲಯ

ತೀಸ್ತಾ ಮತ್ತು ಶ್ರೀಕುಮಾರ್ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಅಹಮದಾಬಾದ್ ನ್ಯಾಯಾಲಯ

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌.ಬಿ. ಶ್ರೀಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ಆದೇಶಗಳನ್ನು ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರನ್ನು ಜೂನ್ 26 ರಂದು ಬಂಧಿಸಲಾಗಿತ್ತು.

“ಎಲ್ಲಾ ಕ್ಷಕ್ಷಿದಾರರು ತಮ್ಮ ವಾದವನ್ನು ಪೂರ್ಣಗೊಳಿಸಿದ್ದಾರೆ” ಎಂದು ಪ್ರಕರಣದಲ್ಲಿ ವಾದಿಸಿರುವ ವಕೀಲರಲ್ಲಿ ಒಬ್ಬರಾದ ವಕೀಲ ವಿಜಯ್ ಹಿರೇಮಠ ಅವರು ಸ್ಕ್ರಾಲ್‌.ಇನ್‌ಗೆ ತಿಳಿಸಿದ್ದಾರೆ. “ಈಗ, ಆದೇಶವನ್ನು ಕಾಯ್ದಿರಿಸಲಾಗಿದ್ದು, ಅದನ್ನು ಮಂಗಳವಾರ ಅಥವಾ ಬುಧವಾರದಂದು ನೀಡಲಾಗುತ್ತದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರದಂದು ರಾಜ್ಯ ಸರ್ಕಾರವು ತೀಸ್ತಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು. ಜುಲೈ 15 ರಂದು ಸಲ್ಲಿಸಿದ ಅಫಿಡವಿಟ್‌ನಲ್ಲಿ, 2002 ರ ಗುಜರಾತ್‌ ಗಲಭೆಯ ನಂತರ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರೊಂದಿಗೆ ತೀಸ್ತಾ ಸೆಟಲ್ವಾಡ್ ಕೂಡಾ ಭಾರಿ ಪಿತೂರಿಯ ಭಾಗವಾಗಿದ್ದರು ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ

ಕಾಂಗ್ರೆಸ್‌ನ ಮಾಜಿ ಸಂಸದ ಅಹ್ಮದ್ ಪಟೇಲ್ ಅವರ ನಿರ್ದೇಶನದ ಮೇರೆಗೆ ಈ ಸಂಚು ರೂಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತೀಸ್ತಾ ಮತ್ತು ಶ್ರೀಕುಮಾರ್ ಇಬ್ಬರೂ ಈ ಆರೋಪವನ್ನು ವಿರೋಧಿಸಿದ್ದಾರೆ. ತಮ್ಮ ವಿರುದ್ಧ ಹೊರಿಸಲಾದ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳ ಇಲ್ಲ ಎಂದು ಹೇಳಿದ್ದು, ಇದನ್ನು ಕಾನೂನಿನಡಿಯಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಸೆಟಲ್ವಾಡ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ತಾನು ಯಾವುದೇ ಅಪರಾಧ ಮಾಡಿಲ್ಲ ಎಂದು ಶ್ರೀಕುಮಾರ್ ಹೇಳಿಕೊಂಡಿದ್ದಾರೆ. ಅವರ ಜಾಮೀನು ಅರ್ಜಿಗಳು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

ತೀಸ್ತಾ ಮತ್ತು ಶ್ರೀಕುಮಾರ್ ಬಂಧನ

ರಾಜಕಾರಣಿ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಮತ್ತು ತೀಸ್ತಾ ಸೆಟಲ್ವಾಡ್ ಅವರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ಅಧಿಕಾರಿಗಳಿಗೆ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜೂನ್ 24 ರಂದು ವಜಾಗೊಳಿಸಿತ್ತು. ಇದರ ನಂತರ ತೀಸ್ತಾ ಮತ್ತು ಶ್ರೀಕುಮಾರ್ ಅವರ ಬಂಧನ ನಡೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...