Homeಮುಖಪುಟಕಥುವಾ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು: ಮೆಹಬೂಬ ಮುಫ್ತಿ ಕಿಡಿ

ಕಥುವಾ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು: ಮೆಹಬೂಬ ಮುಫ್ತಿ ಕಿಡಿ

ಡಿಸೆಂಬರ್ 16 ರಂದು ತಿಲಕ್ ರಾಜ್ ಎಂಬುವವರಿಗೆ ಜಾಮೀನು ದೊರಕಿದರೆ, ಡಿಸೆಂಬರ್ 21 ರಂದು ಆನಂದ್ ದತ್ತಾಗೆ ಜಾಮೀನು ದೊರಕಿದ್ದು ಉಳಿದ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

2018ರಲ್ಲಿ ಜಮ್ಮುಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಅಮಾನವೀಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳಿಬ್ಬರಿಗೆ ಪಂಜಾಬ್ ನ್ಯಾಯಾಲಯ ಜಾಮೀನು ನೀಡಿದ್ದು, ಶಿಕ್ಷೆಯನ್ನು ಅಮಾನತುಗೊಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ನ್ಯಾಯಾಂಗದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಥುವಾ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ್ದಕ್ಕಾಗಿ ಅಪರಾಧಿ ಎಂದು ಆರೋಪಿಸಲಾದ ಪೊಲೀಸರಿಗೆ ಜಾಮೀನು ನೀಡಲಾಗಿದ್ದು, ಆತನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮತ್ತು ಹತ್ಯೆಗೊಳಗಾದ ಮಗು ನ್ಯಾಯದಿಂದ ವಂಚಿತವಾದಾಗ, ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ಮೆಹಬೂಬ ಮುಫ್ತಿ ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 2018 ಜನವರಿ ತಿಂಗಳಿನಲ್ಲಿ ಎಂಟು ವರ್ಷ ಬಾಲಕಿಯ ಸಾಮೂಹಿಕ ಬರ್ಬರ ಅತ್ಯಾಚಾರ, ಚಿತ್ರಹಿಂಸೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ದೋಷಿಗಳೆಂದು ಪಠಾಣ್ ಕೋಟ್ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆಯನ್ನು ಪಠಾಣ್ ಕೋಟ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಜೂನ್ 10, 2019ರಲ್ಲಿ ತೀರ್ಪು ನೀಡಿದ ನ್ಯಾಯಾಲಯ ಮುಖ್ಯ ಆರೋಪಿಗಳಾದ ಸಾಂಜಿ ರಾಮ್, ವಜಾಗೊಂಡ ಪೊಲೀಸ್ ಅಧಿಕಾರಿಗಳಾದ ದೀಪಕ್ ಖಾಜರಿಯ ಮತ್ತು ಪರ್ವೇಶ್ ಕುಮಾರ್ ಎಂಬುವವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸಾಕ್ಷ್ಯ ನಾಶ ಆರೋಪ ಮಾಡಿದ ಆರೋಪದಲ್ಲಿ ಆನಂದ್ ದತ್ತಾ, ತಿಲಕ್ ರಾಜ್ ಮತ್ತು ಸುರೇಂದರ್ ವರ್ಮಾ ಎಂಬ ಪೊಲೀಸ್ ಅಧಿಕಾರಿಗಳಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಡಿಸೆಂಬರ್ 16 ರಂದು ತಿಲಕ್ ರಾಜ್ ಎಂಬುವವರಿಗೆ ಜಾಮೀನು ದೊರಕಿದರೆ, ಡಿಸೆಂಬರ್ 21 ರಂದು ಆನಂದ್ ದತ್ತಾಗೆ ಜಾಮೀನು ದೊರಕಿದ್ದು ಉಳಿದ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ.

ಜನವರಿ 10, 2018ರಲ್ಲಿ ನಡೆದ ಅತ್ಯಾಚಾರ ಪ್ರಕರಣ ವಿಚಾರಣ ನಡೆಸಿದ ಪೊಲೀಸರು 2018 ರ ಎಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 8 ವರ್ಷದ ಬಾಲಕಿಗೆ ಮಾದಕ ಸೇವನೆ ಮಾಡಿಸಿ ದೇವಾಲಯವೊಂದರಲ್ಲಿ ಸತತ ನಾಲ್ಕು ದಿನಗಳ ಕಾಲ ಅತ್ಯಾಚಾರ ಮಾಡಿ ಕಲ್ಲಿನಿಂದ ಚಚ್ಚಿ ಕೊಲೆ ಮಾಡಲಾಗಿತ್ತು.

ಕಥುವಾ ಪ್ರದೇಶ ಹಾಗೂ ಸುತ್ತಮುತ್ತ ಇರುವ ಅಲೆಮಾರಿಗಳನ್ನು ಭಯಪಡಿಸುವ ಸಲುವಾಗಿ ಹಾಗೂ ಅವರನ್ನು ಅಲ್ಲಿಂದ ಓಡಿಸುವ ಸಲುವಾಗಿಯೂ ಸಹ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಮಾಡಲಾಗಿದೆ ಎಂಬ ಘೋರ ಸತ್ಯವು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ನಾಯಕರಾದ ಚೌಧುರಿ ಲಾಲ್ ಸಿಂಗ್ ಮತ್ತು ಪ್ರಕಾಶ್ ಗಂಗಾ ಎಂಬುವವರು ಆ ಸಂದರ್ಭದಲ್ಲಿ ಆರೋಪಿಗಳ ರಕ್ಷಣೆಗೆ ನಿಂತಿದ್ದರು. ಅಲ್ಲದೆ ಬಿಜೆಪಿ ಶಾಸಕ ರಾಜೀವ್ ಜಸ್ ರೊಟಿಯಾ ಎಂಬುವವರು ಆರೋಪಿಗಳ ಪರವಾಗಿ ಬಹಿರಂಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಬಹುತೇಕರು ಖಂಡಿಸಿದ್ದರು.


ಇದನ್ನೂ ಓದಿ : ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...