Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...