Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...