Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...