Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...