Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...