Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...