Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...