Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...